Murder: ಗಂಡನ ಉಗುರಿನಲ್ಲಿದ್ದ ರಕ್ತದ ಕಲೆಯಿಂದ ಬಯಲಾಯ್ತು ಹೆಂಡತಿ ಕೊಲೆಯ ರಹಸ್ಯ!

Crime News: ಮನೋಜ್ ಪ್ರಜಾಪತಿ ಮತ್ತು ಅವರ ಪತ್ನಿ ರೀಮಾ ಭೋಲಾ ಯಾದವ್ ಕಳೆದ ಎರಡು ದಿನಗಳಿಂದ ಖೈರಾನಿ ರಸ್ತೆ ಪ್ರದೇಶದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಸ್ನೇಹಿತರೊಬ್ಬರು ಇಂದು ಬೆಳಿಗ್ಗೆ ಅವರ ಮನೆಗೆ ಬಂದಾಗ ರೀಮಾ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ.

Murder: ಗಂಡನ ಉಗುರಿನಲ್ಲಿದ್ದ ರಕ್ತದ ಕಲೆಯಿಂದ ಬಯಲಾಯ್ತು ಹೆಂಡತಿ ಕೊಲೆಯ ರಹಸ್ಯ!
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: May 10, 2022 | 9:15 PM

ಮುಂಬೈ: ಕೊಲೆಗಾರ ಎಷ್ಟೇ ಬುದ್ಧಿವಂತನಾದರೂ ಒಂದಾದರೂ ಸುಳಿವು ಬಿಟ್ಟಿರುತ್ತಾನೆ ಎಂಬ ಮಾತೇ ಇದೆ. ಇದು ಖಂಡಿತ ಸುಳ್ಳಲ್ಲ. ಯಾವುದೇ ವಿಚಾರದಲ್ಲಿ ಯಾರೂ ಪರ್ಫೆಕ್ಟ್​ ಆಗಿರಲು ಸಾಧ್ಯವಿಲ್ಲ. ಕೊಲೆ ಕೂಡ ಅದಕ್ಕೆ ಹೊರತಾಗಿಲ್ಲ. ಮುಂಬೈನ ಸಕಿನಾಕಾ ಪ್ರದೇಶದಲ್ಲಿ 22 ವರ್ಷದ ವ್ಯಕ್ತಿಯ ಉಗುರಿನಲ್ಲಿದ್ದ ರಕ್ತದ ಕಲೆಯಿಂದಾಗಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತ ಮಾಡಿಕೊಂಡ ಸಣ್ಣ ಎಡವಟ್ಟಿನಿಂದ ಆತನ ಅಪರಾಧ ಬಯಲಾಗಿದೆ.

ಮುಂಬೈನಲ್ಲಿ ನಡೆದ ಕೊಲೆಯೊಂದರ ತನಿಖೆಯನ್ನು ಆರಂಭಿಸಿದ ಸಕಿನಾಕಾ ಪ್ರದೇಶದ ಪೊಲೀಸರು ಮೃತ ಮಹಿಳೆಯ ಗಂಡನ ಉಗುರಿನ ಮೇಲೆ ರಕ್ತದ ಕಲೆಗಳನ್ನು ಕಂಡು ಆ ಕೊಲೆಯಲ್ಲಿ ಆತನೂ ಭಾಗಿಯಾಗಿರುವ ಬಗ್ಗೆ ಅನುಮಾನಗೊಂಡು ತನಿಖೆ ಆರಂಭಿಸಿದ್ದರು. ಆಗ ನಿಜವಾದ ಸಂಗತಿ ಬಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಮನೋಜ್ ಪ್ರಜಾಪತಿ ಮತ್ತು ಅವರ ಪತ್ನಿ ರೀಮಾ ಭೋಲಾ ಯಾದವ್ ಕಳೆದ ಎರಡು ದಿನಗಳಿಂದ ಖೈರಾನಿ ರಸ್ತೆ ಪ್ರದೇಶದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಸ್ನೇಹಿತರೊಬ್ಬರು ಇಂದು ಬೆಳಿಗ್ಗೆ ಅವರ ಮನೆಗೆ ಬಂದಾಗ ರೀಮಾ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ. ರೀಮಾ ಅವರ ಕತ್ತು ಸೀಳಲಾಗಿತ್ತು. ನಮ್ಮ ತನಿಖೆಯ ಸಮಯದಲ್ಲಿ ನಾವು ಪ್ರಜಾಪತಿಯ ಉಗುರುಗಳ ಮೇಲೆ ರಕ್ತದ ಕಲೆಗಳನ್ನು ಕಂಡು ಅವರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಅವರು ಮೊದಲು ನಮ್ಮನ್ನು ದಾರಿ ತಪ್ಪಿಸಲು ಪ್ರಯತ್ನಿಸಿದರು. ಆದರೆ, ನಿರಂತರ ವಿಚಾರಣೆಯಲ್ಲಿ ಅವರು ಅಪರಾಧವನ್ನು ಒಪ್ಪಿಕೊಂಡರು. ಆಕೆ ಸಾಯುವ ಮೊದಲು ಕೊನೆಯದಾಗಿ ಅವರೇ ಆಕೆಗೆ ಫೋನ್ ಮಾಡಿ ಮಾತನಾಡಿರುವುದು ಕೂಡ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್