AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ನ್ಯಾಯಕ್ಕಾಗಿ ಹೋರಾಡಿದ 13 ದಲಿತ ಯುವಕರ ವಿರುದ್ಧವೇ ಪ್ರಕರಣ ದಾಖಲಿಸಿದ ಪೊಲೀಸರು

ದಲಿತ ವ್ಯಕ್ತಿಯ ಸಾವಿಗೆ ಕಾರಣನಾದ ಆರೋಪಿ ಬಂಧನಕ್ಕೆ ಆಗ್ರಹಿಸಿ ಶವ ವಿಟ್ಟು ಪ್ರತಿಭಟನೆ ನಡೆಸಿದ ದಲಿತ ಯುವಕರ ವಿರುದ್ಧವೇ ಇದೀಗ ಚನ್ನಗಿರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆಲಸಕ್ಕೆ ಬಂದಿಲ್ಲವೆಂದು ಶೇಖರಪ್ಪ ಎಂಬವರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದ ಆರೋಪಿ ಬಂಧನ‌‌‌ಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ದಲಿತ ಯುವಕರ ಮೇಲೆ ಕೇಸ್ ದಾಖಲು ಮಾಡಿರುವುದು ದಲಿತ ಸಂಘಟನೆಯ ಆಕ್ರೋಶಕ್ಕೆ ಕಾರಣವಾಗಿದೆ.

ದಾವಣಗೆರೆ: ನ್ಯಾಯಕ್ಕಾಗಿ ಹೋರಾಡಿದ 13 ದಲಿತ ಯುವಕರ ವಿರುದ್ಧವೇ ಪ್ರಕರಣ ದಾಖಲಿಸಿದ ಪೊಲೀಸರು
ದಾವಣಗೆರೆ: ನ್ಯಾಯಕ್ಕಾಗಿ ಹೋರಾಡಿದ 13 ದಲಿತ ಯುವಕರ ವಿರುದ್ಧವೇ ಪ್ರಕರಣ ದಾಖಲಿಸಿದ ಚನ್ನಗಿರಿ ಠಾಣಾ ಪೊಲೀಸರು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jan 30, 2024 | 1:09 PM

Share

ದಾವಣಗೆರೆ, ಜ.30: ಬಂದಿಲ್ಲವೆಂದು ಶೇಖರಪ್ಪ ಎಂಬವರನ್ನು ಹತ್ಯೆ (Murder) ಮಾಡಿದ್ದ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಶವ ಇಟ್ಟು ಪ್ರತಿಭಟನೆ ನಡೆಸಿದ್ದ ದಲಿತ ಯುವಕರ ವಿರುದ್ಧವೇ ಚನ್ನಗಿರಿ (Channagiri) ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಪೊಲೀಸರು ಒಟ್ಟು 13 ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೊಡಕಿಕೆರೆ ಕ್ಯಾಂಪ್​ನ ದಲಿತ ಕೃಷಿ ಕೂಲಿ ಕಾರ್ಮಿಕ ಶೇಖರಪ್ಪ (50) ಎಂಬವರನ್ನು ಜನವರಿ 27 ರಂದು ಹತ್ಯೆ ಮಾಡಲಾಗಿತ್ತು. ಗ್ರಾಮದ ಚಂದ್ರಶೇಖರ ಎಂಬ ಜಮೀನ್ದಾರನ ಬಳಿ ಕೂಲಿ‌ ಕೆಲಸಕ್ಕೆ ಬರುವುದಾಗಿ ಹೇಳಿದ್ದ ಶೇಖರಪ್ಪ ಮುಂಗಡ ಹಣ ಪಡೆದಿದ್ದರು. ಆದರೆ ತೋಟಕ್ಕೆ ಕೆಲಸಕ್ಕೆ ಶೇಖರ್ ಅವರು ಹೋಗಿರಲಿಲ್ಲ.

ಇದನ್ನೂ ಓದಿ: ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ: ಕೇರಳದ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ

ಇದೇ ಸಿಟ್ಟಿನಿಂದ ಚಂದ್ರಶೇಖರ ತನ್ನ ಬೈಕ್​ನಿಂದ ಡಿಕ್ಕಿ ಹೊಡೆದು ಶೇಖರಪ್ಪನಿಗೆ ಗಾಯಗೊಳಿಸಿದ್ದ. ಕೂಡಲೇ ಗಾಯಾಳು ಶೇಖರಪ್ಪ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶೆಖರಪ್ಪ ಮೃತಪಟ್ಟಿದ್ದರು.

ಶೇಖರಪ್ಪ ಸಾವಿಗೆ ಕಾರಣವಾದ ಚಂದ್ರಶೇಖರನನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಯುವಕರು ಶೇಖರಪ್ಪ ಅವರ ಮೃತದೇಹವನ್ನು ಇಟ್ಟುಕೊಂಡು ಹೋರಾಟ ನಡೆಸಿದ್ದರು. ಆದರೆ, ಆರೋಪಿಯನ್ನು ಬಂಧಿಸುವ ಬದಲು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನ್ಯಾಯಕ್ಕಾಗಿ ಹೋರಾಡಿದ ಯುವಕರ ವಿರುದ್ಧವೇ ಕೇಸ್ ಬುಕ್ ಮಾಡಿದ ಪೊಲೀಸರ ವಿರುದ್ಧ ದಲಿತ ಸಂಘಟನೆ ಪ್ರಮುಖರು ಆಕ್ರೋಶ ಹೊರಹಾಕಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?