AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ತನ್ನ ಉದ್ಯೋಗಿಯನ್ನು ಕೊಂದು, ಶವವನ್ನು ಬ್ಯಾಗ್​ನಲ್ಲಿ ತುಂಬಿ ಮೆಟ್ರೋ ಸ್ಟೇಷನ್​ನಲ್ಲಿ ಎಸೆದ ಉದ್ಯಮಿ!

Crime News: ಗೆಸ್ಟ್​ ಹೌಸ್​ಗೆ ತನ್ನ ಉದ್ಯೋಗಿಯನ್ನು ಕರೆಸಿಕೊಂಡ ಉದ್ಯಮಿ ಆಕೆಯನ್ನು ಕಟ್ಟಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ. ಮೃತದೇಹವನ್ನು ಟ್ರಾಲಿ ಬ್ಯಾಗ್‌ನಲ್ಲಿ ತುಂಬಿಕೊಂಡು ಟ್ಯಾಕ್ಸಿಯಲ್ಲಿ ಸರೋಜಿನಿನಗರ ಮೆಟ್ರೋ ನಿಲ್ದಾಣಕ್ಕೆ ತಂದು ಎಸೆದಿದ್ದಾರೆ.

Murder: ತನ್ನ ಉದ್ಯೋಗಿಯನ್ನು ಕೊಂದು, ಶವವನ್ನು ಬ್ಯಾಗ್​ನಲ್ಲಿ ತುಂಬಿ ಮೆಟ್ರೋ ಸ್ಟೇಷನ್​ನಲ್ಲಿ ಎಸೆದ ಉದ್ಯಮಿ!
ದೆಹಲಿಯಲ್ಲಿ ನಡೆದ ಕೊಲೆಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು
TV9 Web
| Edited By: |

Updated on: Feb 02, 2022 | 6:19 PM

Share

ನವದೆಹಲಿ: ತಮ್ಮಿಬ್ಬರ ಸೆಕ್ಸ್​ ವಿಡಿಯೋ ಇಟ್ಟುಕೊಂಡು ಬ್ಲಾಕ್​ ಮಾಡುತ್ತಿದ್ದ ತನ್ನದೇ ಅಂಗಡಿಯ ಮಹಿಳಾ ಉದ್ಯೋಗಿಯನ್ನು ದಕ್ಷಿಣ ದೆಹಲಿಯ ಸರೋಜಿನಿ ನಗರದ ಉದ್ಯಮಿಯೊಬ್ಬರು ಕೊಲೆ (Murder) ಮಾಡಿದ್ದು, ಬಳಿಕ ಆ ಹೆಣವನ್ನು ಬ್ಯಾಗ್​ನಲ್ಲಿ ತುಂಬಿ, ಮೆಟ್ರೋ ಸ್ಟೇಷನ್ ಹೊರಗೆ ಎಸೆದು ಹೋಗಿದ್ದಾರೆ. ಬಟ್ಟೆ ವ್ಯಾಪಾರಿಯಾಗಿದ್ದ 36 ವರ್ಷದ ವ್ಯಕ್ತಿ ತನ್ನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ (Extra Marital Affair) ಇಟ್ಟುಕೊಂಡಿದ್ದರು. ಆ ಉದ್ಯಮಿಯ ಜೊತೆಗಿನ ಖಾಸಗಿ ಕ್ಷಣಗಳ ವಿಡಿಯೋವನ್ನಿಟ್ಟುಕೊಂಡ ಆ ಯುವತಿ ಹಣ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಳು. ಹೀಗಾಗಿ, ತನ್ನ ಸೋದರಳಿಯನ ಸಹಾಯ ಪಡೆದು ಆ ಉದ್ಯಮಿ (Businessman) ತನ್ನ ಸಿಬ್ಬಂದಿಯನ್ನು ಕೊಲೆ ಮಾಡಿದ್ದಾರೆ.

ತನ್ನನ್ನು ಬ್ಲಾಕ್​ಮೇಲ್ ಮಾಡುತ್ತಿದ್ದ ಉದ್ಯೋಗಿಯನ್ನು ಕೊಂದ ಆರೋಪದ ಮೇಲೆ ಬಟ್ಟೆ ವ್ಯಾಪಾರಿಯನ್ನು ಬಂಧಿಸಲಾಗಿದೆ. ಕೊಲೆಗೆ ಸಹಕರಿಸಿದ ಉದ್ಯಮಿಯ ಸೋದರಳಿಯ ಸೇರಿದಂತೆ ಇನ್ನಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಗೌರವ್ ಶರ್ಮಾ ತಿಳಿಸಿದ್ದಾರೆ.

ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 22 ವರ್ಷದ ಯುವತಿಯನ್ನು ಕೊಂದು, ಆಕೆಯ ಶವವನ್ನು ಟ್ರಾಲಿ ಬ್ಯಾಗ್‌ನಲ್ಲಿ ಇರಿಸಿದ್ದರು. ನಂತರ ದಕ್ಷಿಣ ದೆಹಲಿಯ ಜನಪ್ರಿಯ ಮಾರುಕಟ್ಟೆಯ ಸಮೀಪವಿರುವ ಸರೋಜಿನಿ ನಗರದ ಮೆಟ್ರೋ ನಿಲ್ದಾಣದ ಹೊರಗೆ ಆ ಬ್ಯಾಗ್ ಇಟ್ಟು ಪರಾರಿಯಾಗಿದ್ದರು. ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಆ ಗಾರ್ಮೆಂಟ್ಸ್​ ಮಾಲೀಕರಾಗಿದ್ದ ಇಬ್ಬರು ಮಕ್ಕಳನ್ನು ಹೊಂದಿರುವ 36 ವರ್ಷದ ಉದ್ಯಮಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಳು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆಕೆ ತಮ್ಮಿಬ್ಬರ ಲೈಂಗಿಕ ಕ್ರಿಯೆಯ ವೀಡಿಯೊವನ್ನು ರೆಕಾರ್ಡ್ ಮಾಡಿ, ಉದ್ಯಮಿಗೆ ಹಣ ನೀಡುವಂತೆ ಬೆದರಿಕೆ ಹಾಕಿದ್ದಳು. ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಆಕೆ ಉದ್ಯಮಿಗೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತನ್ನ ಕುಟುಂಬಕ್ಕೆ ಮತ್ತು ಹೊರಗಿನ ಸಮಾಜಕ್ಕೆ ಈ ವಿಷಯ ಗೊತ್ತಾಗಬಹುದು ಎಂಬ ಭಯದಲ್ಲಿ ಆ ಉದ್ಯಮಿ ಆಕೆಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು. ಅದಕ್ಕಾಗಿ ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ವಾಸಿಸುವ ತನ್ನ ಸೋದರಳಿಯನನ್ನು ಜನವರಿ 28ರಂದು ದೆಹಲಿಗೆ ಕರೆಸಿಕೊಂಡಿದ್ದರು. ಸರೋಜಿನಿ ನಗರದಿಂದ 3 ಕಿಮೀ ದೂರದಲ್ಲಿರುವ ದಕ್ಷಿಣ ದೆಹಲಿಯ ಯೂಸುಫ್ ಸರಾಯ್‌ನಲ್ಲಿರುವ ಅತಿಥಿಗೃಹದಲ್ಲಿ ಎರಡು ಕೊಠಡಿಗಳನ್ನು ಕಾಯ್ದಿರಿಸಿದ್ದರು. ನಂತರ ಅಲ್ಲಿಗೆ ಆ ಯುವತಿಯನ್ನು ಕರೆಸಿ, ಕೊಲೆ ಮಾಡಿದ್ದರು.

ಈ ಇಬ್ಬರು ವ್ಯಕ್ತಿಗಳು ದೊಡ್ಡ ಟ್ರಾಲಿ ಬ್ಯಾಗ್ ಅನ್ನು ಹೊತ್ತೊಯ್ಯುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಗೆಸ್ಟ್​ ಹೌಸ್​ಗೆ ಆ ಯುವತಿಯನ್ನು ಕರೆಸಿಕೊಂಡ ಅವರು ಆಕೆಯನ್ನು ಕಟ್ಟಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ. ಮೃತದೇಹವನ್ನು ಟ್ರಾಲಿ ಬ್ಯಾಗ್‌ನಲ್ಲಿ ತುಂಬಿಕೊಂಡು ಟ್ಯಾಕ್ಸಿಯಲ್ಲಿ ಸರೋಜಿನಿನಗರ ಮೆಟ್ರೋ ನಿಲ್ದಾಣಕ್ಕೆ ತಂದು ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹತ್ಯೆಯ ನಂತರ, ಆ ಉದ್ಯಮಿ ತನ್ನ ಉದ್ಯೋಗಿಯ ಚಪ್ಪಲಿ, ಬಟ್ಟೆ, ಪರ್ಸ್​ ಅನ್ನು ತೆಗೆದುಕೊಂಡು ಪಶ್ಚಿಮ ದೆಹಲಿಯ ಉತ್ತಮ್ ನಗರದ ಮತ್ತೊಂದು ಮೆಟ್ರೋ ನಿಲ್ದಾಣದ ಬಳಿ ಎಸೆದಿದ್ದಾನೆ. ಮೃತ ಉದ್ಯೋಗಿಯ ಮೊಬೈಲ್ ಫೋನ್ ಅನ್ನು ಆ ಉದ್ಯಮಿಯ ಸೋದರಳಿಯ ಉತ್ತರ ಪ್ರದೇಶದ ತನ್ನ ಹಳ್ಳಿಗೆ ತೆಗೆದುಕೊಂಡು ಹೋಗಿದ್ದ. ಇದೀಗ ಈ ಕೊಲೆಗೆ ಸಂಬಂಧಿಸಿದಂತೆ ಉದ್ಯಮಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Shocking News: ಮಾರ್ಗ ಮಧ್ಯೆ ಶಿಫ್ಟ್ ಮುಗಿದಿದ್ದರಿಂದ ವಿಮಾನ ಹಾರಿಸೋದಿಲ್ಲ ಎಂದ ಪೈಲಟ್; ಆಮೇಲೇನಾಯ್ತು?

Success Story: ಕೇವಲ ಎರಡೂವರೆ ರೂ.ಗೆ ಇಡ್ಲಿ, 5 ರೂ.ಗೆ ದೋಸೆ ಮಾರುವ ಬೆಂಗಳೂರಿನ ಅಮ್ಮ; ವಿಡಿಯೋ ಇಲ್ಲಿದೆ

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ