Murder: ಫಿಶ್​ ಕರಿಗಾಗಿ ಗೆಳೆಯನಿಂದಲೇ ಬರ್ಬರ ಹತ್ಯೆ!

Crime News: ಎಲ್ಲರೂ ಕುಳಿತು ಊಟ ಮಾಡುವಾಗ ಸಂದೀಪ್​ ಇನ್ನೂ ಹೆಚ್ಚು ಫಿಶ್ ಕರಿ ಬೇಕೆಂದು ಹಠ ಹಿಡಿದ. ಆದರೆ, ಸಂದೀಪ್​ ಅಡುಗೆಗೆ ಯಾವುದೇ ಸಹಾಯ ಮಾಡದ ಕಾರಣ ರಂಜಿತ್ ಹೆಚ್ಚು ಫಿಶ್ ಕರಿ ನೀಡಲು ಒಪ್ಪಲಿಲ್ಲ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆಯಿತು.

Murder: ಫಿಶ್​ ಕರಿಗಾಗಿ ಗೆಳೆಯನಿಂದಲೇ ಬರ್ಬರ ಹತ್ಯೆ!
ಫಿಶ್ ಕರಿ
Follow us
| Edited By: Sushma Chakre

Updated on: Oct 30, 2021 | 7:47 PM

ರಾಜ್​ಕೋಟ್: ಕೆಲವೊಮ್ಮೆ ಕ್ಷುಲ್ಲಕ ಕಾರಣಕ್ಕೆ ಕೊಲೆಗಳೇ ನಡೆದ ಅನೇಕ ಉದಾಹರಣೆಗಳಿವೆ. ಫಿಶ್​ ಕರಿಗಾಗಿ ವ್ಯಕ್ತಿಯೊಬ್ಬನನ್ನು ಕೊಂದಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆ ಗುಜರಾತ್​ನಲ್ಲಿ ನಡೆದಿದೆ. ರಂಜಿತ್ ಕುನ್ವರಿಯ ಎಂಬ 32 ವರ್ಷದ ವ್ಯಕ್ತಿ ಸಾವನ್ನಪ್ಪಿದಾತ. ಆತನನ್ನು ಕಾರಿನ ಕೆಳಗೆ ಹಾಕಿ ಆತನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲಾಗಿದೆ.

ಮಲಿಯ ಮಿಯಾನ ತಾಲೂಕಿನ ವೆನಸರ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಂಜಿತ್ ಕುನ್ವರಿಯ, ಆತನ ಕಸಿನ್​ಗಳಾದ ಅಶೋಕ್, ಸುನಿಲ್ ಮತ್ತು ಪ್ರಕಾಶ್ ಪಾರ್ಟಿಯೊಂದಕ್ಕೆ ಹೋಗಿದ್ದರು. ಡ್ರಿಂಕ್ ಪಾರ್ಟಿ ಮಾಡಿದ ನಂತರ ಅವರು ನದಿಯಲ್ಲಿ ಫಿಶಿಂಗ್​ಗೆ ಹೋದರು. ಅಲ್ಲಿ ಪಿಶ್ ಕರಿ ಮತ್ತು ಅನ್ನ ಮಾಡಿಕೊಂಡು ಭರ್ಜರಿಯಾಗಿ ಊಟ ಮಾಡಲು ಎಲ್ಲ ರೆಡಿ ಮಾಡಿಕೊಂಡರು.

ಫಿಶಿಂಗ್​ಗೆ ಹೋದಾಗ ಅಲ್ಲಿ ಬಹಳಷ್ಟು ಮೀನುಗಳು ಸಿಕ್ಕವು. ಇದರಿಂದ ಸುನಿಲ್​ ತನ್ನ ಅಣ್ಣ ಸಂದೀಪ್​ನನ್ನು ಕೂಡ ಪಾರ್ಟಿಗೆ ಬರುವಂತೆ ಆಹ್ವಾನಿಸಿದ. ಆಗ ಎಲ್ಲರೂ ಕುಳಿತು ಊಟ ಮಾಡುವಾಗ ಸಂದೀಪ್​ ಇನ್ನೂ ಹೆಚ್ಚು ಫಿಶ್ ಕರಿ ಬೇಕೆಂದು ಹಠ ಹಿಡಿದ. ಆದರೆ, ಸಂದೀಪ್​ ಅಡುಗೆಗೆ ಯಾವುದೇ ಸಹಾಯ ಮಾಡದ ಕಾರಣ ರಂಜಿತ್ ಹೆಚ್ಚು ಫಿಶ್ ಕರಿ ನೀಡಲು ಒಪ್ಪಲಿಲ್ಲ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆಯಿತು.

ಈ ಅವಮಾನದಿಂದ ಸಂದೀಪ್​ನ ಸೋದರ ಸುನಿಲ್​ಗೆ ಬಹಳ ಕೋಪ ಬಂದು ಅಲ್ಲಿಂದ ಎದ್ದು ಹೋದ. ಆತ ಮನೆಗೆ ವಾಪಾಸ್ ಹೋಗುತ್ತಿರಬಹುದು ಎಂದು ಗೆಳೆಯರೆಲ್ಲ ಅಂದುಕೊಂಡರು. ಆದರೆ, ಕೋಪದಿಂದ ಕಾರು ಸ್ಟಾರ್ಟ್ ಮಾಡಿದ ಸುನಿಲ್ ರಂಜಿತ್​ನನ್ನು ಕಾರಿನ ಕೆಳಗೆ ಬೀಳಿಸಿ ಆತನ ಮೇಲೆ ಕಾರು ಹತ್ತಿಸಿದ. ಇದರಿಂದ ರಂಜಿತ್ ಸ್ಥಳದಲ್ಲೇ ಸಾವನ್ನಪ್ಪಿದ. ಬಳಿಕ ಸುನಿಲ್ ಅಲ್ಲೇ ಕಾರನ್ನು ಬಿಟ್ಟು ಓಡಿಹೋದ. ಬಳಿಕ ಪೊಲೀಸರು ಸುನಿಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: Murder: ಪ್ರೀತಿಸಲು ಒಪ್ಪದ ವಿವಾಹಿತ ಮಹಿಳೆಯನ್ನು ಕೊಂದು, ಹೆಣವನ್ನು ತಬ್ಬಿ ಮಲಗಿದ ಪಾಗಲ್ ಪ್ರೇಮಿ!

Murder: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ; ಬೆಳ್ಳಿ ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು

ತಾಜಾ ಸುದ್ದಿ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ