AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಫಿಶ್​ ಕರಿಗಾಗಿ ಗೆಳೆಯನಿಂದಲೇ ಬರ್ಬರ ಹತ್ಯೆ!

Crime News: ಎಲ್ಲರೂ ಕುಳಿತು ಊಟ ಮಾಡುವಾಗ ಸಂದೀಪ್​ ಇನ್ನೂ ಹೆಚ್ಚು ಫಿಶ್ ಕರಿ ಬೇಕೆಂದು ಹಠ ಹಿಡಿದ. ಆದರೆ, ಸಂದೀಪ್​ ಅಡುಗೆಗೆ ಯಾವುದೇ ಸಹಾಯ ಮಾಡದ ಕಾರಣ ರಂಜಿತ್ ಹೆಚ್ಚು ಫಿಶ್ ಕರಿ ನೀಡಲು ಒಪ್ಪಲಿಲ್ಲ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆಯಿತು.

Murder: ಫಿಶ್​ ಕರಿಗಾಗಿ ಗೆಳೆಯನಿಂದಲೇ ಬರ್ಬರ ಹತ್ಯೆ!
ಫಿಶ್ ಕರಿ
TV9 Web
| Edited By: |

Updated on: Oct 30, 2021 | 7:47 PM

Share

ರಾಜ್​ಕೋಟ್: ಕೆಲವೊಮ್ಮೆ ಕ್ಷುಲ್ಲಕ ಕಾರಣಕ್ಕೆ ಕೊಲೆಗಳೇ ನಡೆದ ಅನೇಕ ಉದಾಹರಣೆಗಳಿವೆ. ಫಿಶ್​ ಕರಿಗಾಗಿ ವ್ಯಕ್ತಿಯೊಬ್ಬನನ್ನು ಕೊಂದಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆ ಗುಜರಾತ್​ನಲ್ಲಿ ನಡೆದಿದೆ. ರಂಜಿತ್ ಕುನ್ವರಿಯ ಎಂಬ 32 ವರ್ಷದ ವ್ಯಕ್ತಿ ಸಾವನ್ನಪ್ಪಿದಾತ. ಆತನನ್ನು ಕಾರಿನ ಕೆಳಗೆ ಹಾಕಿ ಆತನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲಾಗಿದೆ.

ಮಲಿಯ ಮಿಯಾನ ತಾಲೂಕಿನ ವೆನಸರ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಂಜಿತ್ ಕುನ್ವರಿಯ, ಆತನ ಕಸಿನ್​ಗಳಾದ ಅಶೋಕ್, ಸುನಿಲ್ ಮತ್ತು ಪ್ರಕಾಶ್ ಪಾರ್ಟಿಯೊಂದಕ್ಕೆ ಹೋಗಿದ್ದರು. ಡ್ರಿಂಕ್ ಪಾರ್ಟಿ ಮಾಡಿದ ನಂತರ ಅವರು ನದಿಯಲ್ಲಿ ಫಿಶಿಂಗ್​ಗೆ ಹೋದರು. ಅಲ್ಲಿ ಪಿಶ್ ಕರಿ ಮತ್ತು ಅನ್ನ ಮಾಡಿಕೊಂಡು ಭರ್ಜರಿಯಾಗಿ ಊಟ ಮಾಡಲು ಎಲ್ಲ ರೆಡಿ ಮಾಡಿಕೊಂಡರು.

ಫಿಶಿಂಗ್​ಗೆ ಹೋದಾಗ ಅಲ್ಲಿ ಬಹಳಷ್ಟು ಮೀನುಗಳು ಸಿಕ್ಕವು. ಇದರಿಂದ ಸುನಿಲ್​ ತನ್ನ ಅಣ್ಣ ಸಂದೀಪ್​ನನ್ನು ಕೂಡ ಪಾರ್ಟಿಗೆ ಬರುವಂತೆ ಆಹ್ವಾನಿಸಿದ. ಆಗ ಎಲ್ಲರೂ ಕುಳಿತು ಊಟ ಮಾಡುವಾಗ ಸಂದೀಪ್​ ಇನ್ನೂ ಹೆಚ್ಚು ಫಿಶ್ ಕರಿ ಬೇಕೆಂದು ಹಠ ಹಿಡಿದ. ಆದರೆ, ಸಂದೀಪ್​ ಅಡುಗೆಗೆ ಯಾವುದೇ ಸಹಾಯ ಮಾಡದ ಕಾರಣ ರಂಜಿತ್ ಹೆಚ್ಚು ಫಿಶ್ ಕರಿ ನೀಡಲು ಒಪ್ಪಲಿಲ್ಲ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆಯಿತು.

ಈ ಅವಮಾನದಿಂದ ಸಂದೀಪ್​ನ ಸೋದರ ಸುನಿಲ್​ಗೆ ಬಹಳ ಕೋಪ ಬಂದು ಅಲ್ಲಿಂದ ಎದ್ದು ಹೋದ. ಆತ ಮನೆಗೆ ವಾಪಾಸ್ ಹೋಗುತ್ತಿರಬಹುದು ಎಂದು ಗೆಳೆಯರೆಲ್ಲ ಅಂದುಕೊಂಡರು. ಆದರೆ, ಕೋಪದಿಂದ ಕಾರು ಸ್ಟಾರ್ಟ್ ಮಾಡಿದ ಸುನಿಲ್ ರಂಜಿತ್​ನನ್ನು ಕಾರಿನ ಕೆಳಗೆ ಬೀಳಿಸಿ ಆತನ ಮೇಲೆ ಕಾರು ಹತ್ತಿಸಿದ. ಇದರಿಂದ ರಂಜಿತ್ ಸ್ಥಳದಲ್ಲೇ ಸಾವನ್ನಪ್ಪಿದ. ಬಳಿಕ ಸುನಿಲ್ ಅಲ್ಲೇ ಕಾರನ್ನು ಬಿಟ್ಟು ಓಡಿಹೋದ. ಬಳಿಕ ಪೊಲೀಸರು ಸುನಿಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: Murder: ಪ್ರೀತಿಸಲು ಒಪ್ಪದ ವಿವಾಹಿತ ಮಹಿಳೆಯನ್ನು ಕೊಂದು, ಹೆಣವನ್ನು ತಬ್ಬಿ ಮಲಗಿದ ಪಾಗಲ್ ಪ್ರೇಮಿ!

Murder: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ; ಬೆಳ್ಳಿ ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್