AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಫಿಶ್​ ಕರಿಗಾಗಿ ಗೆಳೆಯನಿಂದಲೇ ಬರ್ಬರ ಹತ್ಯೆ!

Crime News: ಎಲ್ಲರೂ ಕುಳಿತು ಊಟ ಮಾಡುವಾಗ ಸಂದೀಪ್​ ಇನ್ನೂ ಹೆಚ್ಚು ಫಿಶ್ ಕರಿ ಬೇಕೆಂದು ಹಠ ಹಿಡಿದ. ಆದರೆ, ಸಂದೀಪ್​ ಅಡುಗೆಗೆ ಯಾವುದೇ ಸಹಾಯ ಮಾಡದ ಕಾರಣ ರಂಜಿತ್ ಹೆಚ್ಚು ಫಿಶ್ ಕರಿ ನೀಡಲು ಒಪ್ಪಲಿಲ್ಲ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆಯಿತು.

Murder: ಫಿಶ್​ ಕರಿಗಾಗಿ ಗೆಳೆಯನಿಂದಲೇ ಬರ್ಬರ ಹತ್ಯೆ!
ಫಿಶ್ ಕರಿ
TV9 Web
| Edited By: |

Updated on: Oct 30, 2021 | 7:47 PM

Share

ರಾಜ್​ಕೋಟ್: ಕೆಲವೊಮ್ಮೆ ಕ್ಷುಲ್ಲಕ ಕಾರಣಕ್ಕೆ ಕೊಲೆಗಳೇ ನಡೆದ ಅನೇಕ ಉದಾಹರಣೆಗಳಿವೆ. ಫಿಶ್​ ಕರಿಗಾಗಿ ವ್ಯಕ್ತಿಯೊಬ್ಬನನ್ನು ಕೊಂದಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆ ಗುಜರಾತ್​ನಲ್ಲಿ ನಡೆದಿದೆ. ರಂಜಿತ್ ಕುನ್ವರಿಯ ಎಂಬ 32 ವರ್ಷದ ವ್ಯಕ್ತಿ ಸಾವನ್ನಪ್ಪಿದಾತ. ಆತನನ್ನು ಕಾರಿನ ಕೆಳಗೆ ಹಾಕಿ ಆತನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲಾಗಿದೆ.

ಮಲಿಯ ಮಿಯಾನ ತಾಲೂಕಿನ ವೆನಸರ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಂಜಿತ್ ಕುನ್ವರಿಯ, ಆತನ ಕಸಿನ್​ಗಳಾದ ಅಶೋಕ್, ಸುನಿಲ್ ಮತ್ತು ಪ್ರಕಾಶ್ ಪಾರ್ಟಿಯೊಂದಕ್ಕೆ ಹೋಗಿದ್ದರು. ಡ್ರಿಂಕ್ ಪಾರ್ಟಿ ಮಾಡಿದ ನಂತರ ಅವರು ನದಿಯಲ್ಲಿ ಫಿಶಿಂಗ್​ಗೆ ಹೋದರು. ಅಲ್ಲಿ ಪಿಶ್ ಕರಿ ಮತ್ತು ಅನ್ನ ಮಾಡಿಕೊಂಡು ಭರ್ಜರಿಯಾಗಿ ಊಟ ಮಾಡಲು ಎಲ್ಲ ರೆಡಿ ಮಾಡಿಕೊಂಡರು.

ಫಿಶಿಂಗ್​ಗೆ ಹೋದಾಗ ಅಲ್ಲಿ ಬಹಳಷ್ಟು ಮೀನುಗಳು ಸಿಕ್ಕವು. ಇದರಿಂದ ಸುನಿಲ್​ ತನ್ನ ಅಣ್ಣ ಸಂದೀಪ್​ನನ್ನು ಕೂಡ ಪಾರ್ಟಿಗೆ ಬರುವಂತೆ ಆಹ್ವಾನಿಸಿದ. ಆಗ ಎಲ್ಲರೂ ಕುಳಿತು ಊಟ ಮಾಡುವಾಗ ಸಂದೀಪ್​ ಇನ್ನೂ ಹೆಚ್ಚು ಫಿಶ್ ಕರಿ ಬೇಕೆಂದು ಹಠ ಹಿಡಿದ. ಆದರೆ, ಸಂದೀಪ್​ ಅಡುಗೆಗೆ ಯಾವುದೇ ಸಹಾಯ ಮಾಡದ ಕಾರಣ ರಂಜಿತ್ ಹೆಚ್ಚು ಫಿಶ್ ಕರಿ ನೀಡಲು ಒಪ್ಪಲಿಲ್ಲ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆಯಿತು.

ಈ ಅವಮಾನದಿಂದ ಸಂದೀಪ್​ನ ಸೋದರ ಸುನಿಲ್​ಗೆ ಬಹಳ ಕೋಪ ಬಂದು ಅಲ್ಲಿಂದ ಎದ್ದು ಹೋದ. ಆತ ಮನೆಗೆ ವಾಪಾಸ್ ಹೋಗುತ್ತಿರಬಹುದು ಎಂದು ಗೆಳೆಯರೆಲ್ಲ ಅಂದುಕೊಂಡರು. ಆದರೆ, ಕೋಪದಿಂದ ಕಾರು ಸ್ಟಾರ್ಟ್ ಮಾಡಿದ ಸುನಿಲ್ ರಂಜಿತ್​ನನ್ನು ಕಾರಿನ ಕೆಳಗೆ ಬೀಳಿಸಿ ಆತನ ಮೇಲೆ ಕಾರು ಹತ್ತಿಸಿದ. ಇದರಿಂದ ರಂಜಿತ್ ಸ್ಥಳದಲ್ಲೇ ಸಾವನ್ನಪ್ಪಿದ. ಬಳಿಕ ಸುನಿಲ್ ಅಲ್ಲೇ ಕಾರನ್ನು ಬಿಟ್ಟು ಓಡಿಹೋದ. ಬಳಿಕ ಪೊಲೀಸರು ಸುನಿಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: Murder: ಪ್ರೀತಿಸಲು ಒಪ್ಪದ ವಿವಾಹಿತ ಮಹಿಳೆಯನ್ನು ಕೊಂದು, ಹೆಣವನ್ನು ತಬ್ಬಿ ಮಲಗಿದ ಪಾಗಲ್ ಪ್ರೇಮಿ!

Murder: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ; ಬೆಳ್ಳಿ ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ