AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಫಿಶ್​ ಕರಿಗಾಗಿ ಗೆಳೆಯನಿಂದಲೇ ಬರ್ಬರ ಹತ್ಯೆ!

Crime News: ಎಲ್ಲರೂ ಕುಳಿತು ಊಟ ಮಾಡುವಾಗ ಸಂದೀಪ್​ ಇನ್ನೂ ಹೆಚ್ಚು ಫಿಶ್ ಕರಿ ಬೇಕೆಂದು ಹಠ ಹಿಡಿದ. ಆದರೆ, ಸಂದೀಪ್​ ಅಡುಗೆಗೆ ಯಾವುದೇ ಸಹಾಯ ಮಾಡದ ಕಾರಣ ರಂಜಿತ್ ಹೆಚ್ಚು ಫಿಶ್ ಕರಿ ನೀಡಲು ಒಪ್ಪಲಿಲ್ಲ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆಯಿತು.

Murder: ಫಿಶ್​ ಕರಿಗಾಗಿ ಗೆಳೆಯನಿಂದಲೇ ಬರ್ಬರ ಹತ್ಯೆ!
ಫಿಶ್ ಕರಿ
TV9 Web
| Edited By: |

Updated on: Oct 30, 2021 | 7:47 PM

Share

ರಾಜ್​ಕೋಟ್: ಕೆಲವೊಮ್ಮೆ ಕ್ಷುಲ್ಲಕ ಕಾರಣಕ್ಕೆ ಕೊಲೆಗಳೇ ನಡೆದ ಅನೇಕ ಉದಾಹರಣೆಗಳಿವೆ. ಫಿಶ್​ ಕರಿಗಾಗಿ ವ್ಯಕ್ತಿಯೊಬ್ಬನನ್ನು ಕೊಂದಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆ ಗುಜರಾತ್​ನಲ್ಲಿ ನಡೆದಿದೆ. ರಂಜಿತ್ ಕುನ್ವರಿಯ ಎಂಬ 32 ವರ್ಷದ ವ್ಯಕ್ತಿ ಸಾವನ್ನಪ್ಪಿದಾತ. ಆತನನ್ನು ಕಾರಿನ ಕೆಳಗೆ ಹಾಕಿ ಆತನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲಾಗಿದೆ.

ಮಲಿಯ ಮಿಯಾನ ತಾಲೂಕಿನ ವೆನಸರ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಂಜಿತ್ ಕುನ್ವರಿಯ, ಆತನ ಕಸಿನ್​ಗಳಾದ ಅಶೋಕ್, ಸುನಿಲ್ ಮತ್ತು ಪ್ರಕಾಶ್ ಪಾರ್ಟಿಯೊಂದಕ್ಕೆ ಹೋಗಿದ್ದರು. ಡ್ರಿಂಕ್ ಪಾರ್ಟಿ ಮಾಡಿದ ನಂತರ ಅವರು ನದಿಯಲ್ಲಿ ಫಿಶಿಂಗ್​ಗೆ ಹೋದರು. ಅಲ್ಲಿ ಪಿಶ್ ಕರಿ ಮತ್ತು ಅನ್ನ ಮಾಡಿಕೊಂಡು ಭರ್ಜರಿಯಾಗಿ ಊಟ ಮಾಡಲು ಎಲ್ಲ ರೆಡಿ ಮಾಡಿಕೊಂಡರು.

ಫಿಶಿಂಗ್​ಗೆ ಹೋದಾಗ ಅಲ್ಲಿ ಬಹಳಷ್ಟು ಮೀನುಗಳು ಸಿಕ್ಕವು. ಇದರಿಂದ ಸುನಿಲ್​ ತನ್ನ ಅಣ್ಣ ಸಂದೀಪ್​ನನ್ನು ಕೂಡ ಪಾರ್ಟಿಗೆ ಬರುವಂತೆ ಆಹ್ವಾನಿಸಿದ. ಆಗ ಎಲ್ಲರೂ ಕುಳಿತು ಊಟ ಮಾಡುವಾಗ ಸಂದೀಪ್​ ಇನ್ನೂ ಹೆಚ್ಚು ಫಿಶ್ ಕರಿ ಬೇಕೆಂದು ಹಠ ಹಿಡಿದ. ಆದರೆ, ಸಂದೀಪ್​ ಅಡುಗೆಗೆ ಯಾವುದೇ ಸಹಾಯ ಮಾಡದ ಕಾರಣ ರಂಜಿತ್ ಹೆಚ್ಚು ಫಿಶ್ ಕರಿ ನೀಡಲು ಒಪ್ಪಲಿಲ್ಲ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆಯಿತು.

ಈ ಅವಮಾನದಿಂದ ಸಂದೀಪ್​ನ ಸೋದರ ಸುನಿಲ್​ಗೆ ಬಹಳ ಕೋಪ ಬಂದು ಅಲ್ಲಿಂದ ಎದ್ದು ಹೋದ. ಆತ ಮನೆಗೆ ವಾಪಾಸ್ ಹೋಗುತ್ತಿರಬಹುದು ಎಂದು ಗೆಳೆಯರೆಲ್ಲ ಅಂದುಕೊಂಡರು. ಆದರೆ, ಕೋಪದಿಂದ ಕಾರು ಸ್ಟಾರ್ಟ್ ಮಾಡಿದ ಸುನಿಲ್ ರಂಜಿತ್​ನನ್ನು ಕಾರಿನ ಕೆಳಗೆ ಬೀಳಿಸಿ ಆತನ ಮೇಲೆ ಕಾರು ಹತ್ತಿಸಿದ. ಇದರಿಂದ ರಂಜಿತ್ ಸ್ಥಳದಲ್ಲೇ ಸಾವನ್ನಪ್ಪಿದ. ಬಳಿಕ ಸುನಿಲ್ ಅಲ್ಲೇ ಕಾರನ್ನು ಬಿಟ್ಟು ಓಡಿಹೋದ. ಬಳಿಕ ಪೊಲೀಸರು ಸುನಿಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: Murder: ಪ್ರೀತಿಸಲು ಒಪ್ಪದ ವಿವಾಹಿತ ಮಹಿಳೆಯನ್ನು ಕೊಂದು, ಹೆಣವನ್ನು ತಬ್ಬಿ ಮಲಗಿದ ಪಾಗಲ್ ಪ್ರೇಮಿ!

Murder: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ; ಬೆಳ್ಳಿ ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​