AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಪ್ರಿಯಕರನ ಜೊತೆ ಸೇರಿ ಗಂಡ, ಮೂವರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ಮಹಿಳೆ

Crime News | ಸೆ. 14ರಂದು ಚಂಬ ಪ್ರದೇಶದ ಇಲ್ಲಿನ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು 25 ವರ್ಷದ ಪುರುಷ ಹಾಗೂ ಆತನ ಮೂವರು ಮಕ್ಕಳು ಸುಟ್ಟು ಕರಕಲಾಗಿದ್ದರು. ಅದೃಷ್ಟವಶಾತ್ ಆತನ ಹೆಂಡತಿ ಬದುಕುಳಿದಿದ್ದಳು. ಆದರೆ, ಇದು ಅದೃಷ್ಟದಿಂದಲ್ಲ, ಮೊದಲೇ ಮಾಡಿದ ಪ್ಲಾನ್​ನಿಂದ ಎಂಬುದು ಈಗ ಬಯಲಾಗಿದೆ.

Murder: ಪ್ರಿಯಕರನ ಜೊತೆ ಸೇರಿ ಗಂಡ, ಮೂವರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ಮಹಿಳೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 30, 2021 | 1:19 PM

Share

ಶ್ರೀನಗರ: ಕೆಟ್ಟ ಮಕ್ಕಳು ಬೇಕಾದರೆ ಇರಬಹುದು ಆದರೆ ಕೆಟ್ಟ ತಾಯಿ ಇರಲು ಸಾಧ್ಯವೇ ಇಲ್ಲ ಎಂಬ ಮಾತೊಂದಿದೆ. ಆದರೆ, ಕಾಲ ಬದಲಾದಂತೆ ಸಂಬಂಧಗಳಲ್ಲೂ ಬದಲಾವಣೆಯಾಗುತ್ತಿದ್ದು, ಎಷ್ಟೋ ಸಂಬಂಧಗಳು ಅರ್ಥ ಕಳೆದುಕೊಳ್ಳಲಾರಂಭಿಸಿದೆ. ತನ್ನ ಮಕ್ಕಳಿಗಾಗಿ ಜೀವವನ್ನೇ ಒತ್ತೆಯಾಗಿಡುವ ಅಮ್ಮಂದಿರು ಒಂದೆಡೆಯಾದರೆ ತನ್ನ ಸ್ವಾರ್ಥಕ್ಕಾಗಿ ಮಕ್ಕಳ ಜೀವ ತೆಗೆಯಲು ಕೂಡ ಹೇಸದ ಕೆಲವು ಅಮ್ಮಂದಿರು ಇನ್ನೊಂದೆಡೆ. ಹಿಮಾಚಲ ಪ್ರದೇಶದ ಚಂಬದಲ್ಲಿ 25 ವರ್ಷದ ವ್ಯಕ್ತಿ ಹಾಗೂ ಮೂವರ ಮಕ್ಕಳ ಕೊಲೆಯಾಗಿತ್ತು. ಆ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆ ವ್ಯಕ್ತಿಯ ಹೆಂಡತಿಯೇ ಆತನನ್ನು ಹಾಗೂ ಮೂವರು ಮಕ್ಕಳನ್ನು ಕೊಲೆ ಮಾಡಿದ್ದಾಳೆಂಬ ವಿಷಯವನ್ನು ಪತ್ತೆ ಹಚ್ಚಿದ್ದಾರೆ.

ಸೆ. 14ರಂದು ಚಂಬ ಪ್ರದೇಶದ ಇಲ್ಲಿನ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು 25 ವರ್ಷದ ಪುರುಷ ಹಾಗೂ ಆತನ ಮೂವರು ಮಕ್ಕಳು ಸುಟ್ಟು ಕರಕಲಾಗಿದ್ದರು. ಅದೃಷ್ಟವಶಾತ್ ಆತನ ಹೆಂಡತಿ ಬದುಕುಳಿದಿದ್ದಳು. ಆದರೆ, ಇದು ಅದೃಷ್ಟದಿಂದಲ್ಲ, ಮೊದಲೇ ಮಾಡಿದ ಪ್ಲಾನ್​ನಿಂದ ಎಂಬುದು ಈಗ ಬಯಲಾಗಿದೆ. ಪಕ್ಕದ ಮನೆಯವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ನೂರಾ ತನ್ನ ಗಂಡನನ್ನು ಕೊಲೆ ಮಾಡಲು ಪ್ರಿಯಕರನ ಸಹಾಯ ಪಡೆದಿದ್ದಳು. ಯಾರಿಗೂ ಅನುಮಾನ ಬಾರದಂತೆ ಗಂಡನನ್ನು ಕೊಲೆ ಮಾಡಲು ನಿರ್ಧರಿಸಿದ್ದ ಆಕೆ ಆತನ ಜೊತೆ ಮೂವರು ಮಕ್ಕಳನ್ನು ಕೂಡ ಬಲಿ ನೀಡಿದ್ದಾಳೆ.

ಆಕೆಯ ಅಕ್ರಮ ಸಂಬಂಧವನ್ನು ಮುಚ್ಚಿಡಲು 25 ವರ್ಷದ ರಫಿ ಮೊಹಮ್ಮದ್, 6 ವರ್ಷದ ಮಗಳು ಜೈಟುನ್, 2 ವರ್ಷದ ಮಗಳು ಜುಲ್ಕ, 4 ವರ್ಷದ ಮಗ ಸಮೀರ್ ಮನೆಯಲ್ಲಿದ್ದಾಗ ಬೆಂಕಿ ಹಚ್ಚಿ ಕೊಂದಿದ್ದಾಳೆ. ಇಲ್ಲಿನ ಕರತೋಷ್ ಎಂಬ ಗ್ರಾಮದಲ್ಲಿ ಸೆ. 14ರಂದು ಮನೆಯೊಳಗೆ ಬೆಂಕಿ ಹಚ್ಚಿ ನಾಲ್ವರನ್ನೂ ಕೊಲೆ ಮಾಡಿದ್ದಾಳೆ. ಬಳಿಕ ತನಗೂ ಸಣ್ಣ ಪುಟ್ಟ ಗಾಯಗಳನ್ನು ಮಾಡಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಳೆ. ಹೀಗಾಗಿ, ಇದೊಂದು ಆಕಸ್ಮಿಕ ಬೆಂಕಿ ಅವಘಡ ಎಂದು ನಂಬಲಾಗಿತ್ತು.

ಆದರೆ, ರಫಿಯ ತಂದೆ ಈ ಘಟನೆಯ ಹಿಂದೆ ತಮ್ಮ ಸೊಸೆಯ ಕೈವಾಡ ಇರುವ ಅನುಮಾನವಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ನನ್ನ ಮಗ ಹಾಗೂ ಮೊಮ್ಮಕ್ಕಳ ಸಾವು ಆಕಸ್ಮಿಕವಲ್ಲ. ಅದೊಂದು ಪೂರ್ವ ನಿಯೋಜಿತ ಕೊಲೆ ಎಂದು ದೂರಿನಲ್ಲಿ ತಿಳಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲೂ ರಫಿಯ ತಲೆಗೆ ಹಿಂಭಾಗದಿಂದ ಬಲವಾದ ಪೆಟ್ಟು ಬಿದ್ದಿದ್ದರಿಂದ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿತ್ತು. ಇದರಿಂದ ತನಿಖೆ ನಡೆಸಿದ ಪೊಲೀಸರು ಅಸಲಿ ವಿಷಯವನ್ನು ಬಯಲಿಗೆಳೆದಿದ್ದಾರೆ.

ಇದನ್ನೂ ಓದಿ: Murder: ಲೇಡಿ ಪೊಲೀಸ್​ಗಾಗಿ ಹೆಂಡತಿ, ಮಕ್ಕಳನ್ನೇ ಕೊಂದ ಗಂಡ; ಸತ್ತು ಹೋಗಿದ್ದ ಕೊಲೆಗಾರ ಎದ್ದು ಬಂದ ಕತೆಯಿದು!

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

Published On - 1:18 pm, Thu, 30 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ