AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಪ್ರಿಯಕರನ ಜೊತೆ ಸೇರಿ ಗಂಡ, ಮೂವರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ಮಹಿಳೆ

Crime News | ಸೆ. 14ರಂದು ಚಂಬ ಪ್ರದೇಶದ ಇಲ್ಲಿನ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು 25 ವರ್ಷದ ಪುರುಷ ಹಾಗೂ ಆತನ ಮೂವರು ಮಕ್ಕಳು ಸುಟ್ಟು ಕರಕಲಾಗಿದ್ದರು. ಅದೃಷ್ಟವಶಾತ್ ಆತನ ಹೆಂಡತಿ ಬದುಕುಳಿದಿದ್ದಳು. ಆದರೆ, ಇದು ಅದೃಷ್ಟದಿಂದಲ್ಲ, ಮೊದಲೇ ಮಾಡಿದ ಪ್ಲಾನ್​ನಿಂದ ಎಂಬುದು ಈಗ ಬಯಲಾಗಿದೆ.

Murder: ಪ್ರಿಯಕರನ ಜೊತೆ ಸೇರಿ ಗಂಡ, ಮೂವರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ಮಹಿಳೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 30, 2021 | 1:19 PM

Share

ಶ್ರೀನಗರ: ಕೆಟ್ಟ ಮಕ್ಕಳು ಬೇಕಾದರೆ ಇರಬಹುದು ಆದರೆ ಕೆಟ್ಟ ತಾಯಿ ಇರಲು ಸಾಧ್ಯವೇ ಇಲ್ಲ ಎಂಬ ಮಾತೊಂದಿದೆ. ಆದರೆ, ಕಾಲ ಬದಲಾದಂತೆ ಸಂಬಂಧಗಳಲ್ಲೂ ಬದಲಾವಣೆಯಾಗುತ್ತಿದ್ದು, ಎಷ್ಟೋ ಸಂಬಂಧಗಳು ಅರ್ಥ ಕಳೆದುಕೊಳ್ಳಲಾರಂಭಿಸಿದೆ. ತನ್ನ ಮಕ್ಕಳಿಗಾಗಿ ಜೀವವನ್ನೇ ಒತ್ತೆಯಾಗಿಡುವ ಅಮ್ಮಂದಿರು ಒಂದೆಡೆಯಾದರೆ ತನ್ನ ಸ್ವಾರ್ಥಕ್ಕಾಗಿ ಮಕ್ಕಳ ಜೀವ ತೆಗೆಯಲು ಕೂಡ ಹೇಸದ ಕೆಲವು ಅಮ್ಮಂದಿರು ಇನ್ನೊಂದೆಡೆ. ಹಿಮಾಚಲ ಪ್ರದೇಶದ ಚಂಬದಲ್ಲಿ 25 ವರ್ಷದ ವ್ಯಕ್ತಿ ಹಾಗೂ ಮೂವರ ಮಕ್ಕಳ ಕೊಲೆಯಾಗಿತ್ತು. ಆ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆ ವ್ಯಕ್ತಿಯ ಹೆಂಡತಿಯೇ ಆತನನ್ನು ಹಾಗೂ ಮೂವರು ಮಕ್ಕಳನ್ನು ಕೊಲೆ ಮಾಡಿದ್ದಾಳೆಂಬ ವಿಷಯವನ್ನು ಪತ್ತೆ ಹಚ್ಚಿದ್ದಾರೆ.

ಸೆ. 14ರಂದು ಚಂಬ ಪ್ರದೇಶದ ಇಲ್ಲಿನ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು 25 ವರ್ಷದ ಪುರುಷ ಹಾಗೂ ಆತನ ಮೂವರು ಮಕ್ಕಳು ಸುಟ್ಟು ಕರಕಲಾಗಿದ್ದರು. ಅದೃಷ್ಟವಶಾತ್ ಆತನ ಹೆಂಡತಿ ಬದುಕುಳಿದಿದ್ದಳು. ಆದರೆ, ಇದು ಅದೃಷ್ಟದಿಂದಲ್ಲ, ಮೊದಲೇ ಮಾಡಿದ ಪ್ಲಾನ್​ನಿಂದ ಎಂಬುದು ಈಗ ಬಯಲಾಗಿದೆ. ಪಕ್ಕದ ಮನೆಯವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ನೂರಾ ತನ್ನ ಗಂಡನನ್ನು ಕೊಲೆ ಮಾಡಲು ಪ್ರಿಯಕರನ ಸಹಾಯ ಪಡೆದಿದ್ದಳು. ಯಾರಿಗೂ ಅನುಮಾನ ಬಾರದಂತೆ ಗಂಡನನ್ನು ಕೊಲೆ ಮಾಡಲು ನಿರ್ಧರಿಸಿದ್ದ ಆಕೆ ಆತನ ಜೊತೆ ಮೂವರು ಮಕ್ಕಳನ್ನು ಕೂಡ ಬಲಿ ನೀಡಿದ್ದಾಳೆ.

ಆಕೆಯ ಅಕ್ರಮ ಸಂಬಂಧವನ್ನು ಮುಚ್ಚಿಡಲು 25 ವರ್ಷದ ರಫಿ ಮೊಹಮ್ಮದ್, 6 ವರ್ಷದ ಮಗಳು ಜೈಟುನ್, 2 ವರ್ಷದ ಮಗಳು ಜುಲ್ಕ, 4 ವರ್ಷದ ಮಗ ಸಮೀರ್ ಮನೆಯಲ್ಲಿದ್ದಾಗ ಬೆಂಕಿ ಹಚ್ಚಿ ಕೊಂದಿದ್ದಾಳೆ. ಇಲ್ಲಿನ ಕರತೋಷ್ ಎಂಬ ಗ್ರಾಮದಲ್ಲಿ ಸೆ. 14ರಂದು ಮನೆಯೊಳಗೆ ಬೆಂಕಿ ಹಚ್ಚಿ ನಾಲ್ವರನ್ನೂ ಕೊಲೆ ಮಾಡಿದ್ದಾಳೆ. ಬಳಿಕ ತನಗೂ ಸಣ್ಣ ಪುಟ್ಟ ಗಾಯಗಳನ್ನು ಮಾಡಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಳೆ. ಹೀಗಾಗಿ, ಇದೊಂದು ಆಕಸ್ಮಿಕ ಬೆಂಕಿ ಅವಘಡ ಎಂದು ನಂಬಲಾಗಿತ್ತು.

ಆದರೆ, ರಫಿಯ ತಂದೆ ಈ ಘಟನೆಯ ಹಿಂದೆ ತಮ್ಮ ಸೊಸೆಯ ಕೈವಾಡ ಇರುವ ಅನುಮಾನವಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ನನ್ನ ಮಗ ಹಾಗೂ ಮೊಮ್ಮಕ್ಕಳ ಸಾವು ಆಕಸ್ಮಿಕವಲ್ಲ. ಅದೊಂದು ಪೂರ್ವ ನಿಯೋಜಿತ ಕೊಲೆ ಎಂದು ದೂರಿನಲ್ಲಿ ತಿಳಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲೂ ರಫಿಯ ತಲೆಗೆ ಹಿಂಭಾಗದಿಂದ ಬಲವಾದ ಪೆಟ್ಟು ಬಿದ್ದಿದ್ದರಿಂದ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿತ್ತು. ಇದರಿಂದ ತನಿಖೆ ನಡೆಸಿದ ಪೊಲೀಸರು ಅಸಲಿ ವಿಷಯವನ್ನು ಬಯಲಿಗೆಳೆದಿದ್ದಾರೆ.

ಇದನ್ನೂ ಓದಿ: Murder: ಲೇಡಿ ಪೊಲೀಸ್​ಗಾಗಿ ಹೆಂಡತಿ, ಮಕ್ಕಳನ್ನೇ ಕೊಂದ ಗಂಡ; ಸತ್ತು ಹೋಗಿದ್ದ ಕೊಲೆಗಾರ ಎದ್ದು ಬಂದ ಕತೆಯಿದು!

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

Published On - 1:18 pm, Thu, 30 September 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ