AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಪ್ರಿಯಕರನ ಜೊತೆ ಸೇರಿ ಗಂಡ, ಮೂವರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ಮಹಿಳೆ

Crime News | ಸೆ. 14ರಂದು ಚಂಬ ಪ್ರದೇಶದ ಇಲ್ಲಿನ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು 25 ವರ್ಷದ ಪುರುಷ ಹಾಗೂ ಆತನ ಮೂವರು ಮಕ್ಕಳು ಸುಟ್ಟು ಕರಕಲಾಗಿದ್ದರು. ಅದೃಷ್ಟವಶಾತ್ ಆತನ ಹೆಂಡತಿ ಬದುಕುಳಿದಿದ್ದಳು. ಆದರೆ, ಇದು ಅದೃಷ್ಟದಿಂದಲ್ಲ, ಮೊದಲೇ ಮಾಡಿದ ಪ್ಲಾನ್​ನಿಂದ ಎಂಬುದು ಈಗ ಬಯಲಾಗಿದೆ.

Murder: ಪ್ರಿಯಕರನ ಜೊತೆ ಸೇರಿ ಗಂಡ, ಮೂವರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ಮಹಿಳೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Sep 30, 2021 | 1:19 PM

Share

ಶ್ರೀನಗರ: ಕೆಟ್ಟ ಮಕ್ಕಳು ಬೇಕಾದರೆ ಇರಬಹುದು ಆದರೆ ಕೆಟ್ಟ ತಾಯಿ ಇರಲು ಸಾಧ್ಯವೇ ಇಲ್ಲ ಎಂಬ ಮಾತೊಂದಿದೆ. ಆದರೆ, ಕಾಲ ಬದಲಾದಂತೆ ಸಂಬಂಧಗಳಲ್ಲೂ ಬದಲಾವಣೆಯಾಗುತ್ತಿದ್ದು, ಎಷ್ಟೋ ಸಂಬಂಧಗಳು ಅರ್ಥ ಕಳೆದುಕೊಳ್ಳಲಾರಂಭಿಸಿದೆ. ತನ್ನ ಮಕ್ಕಳಿಗಾಗಿ ಜೀವವನ್ನೇ ಒತ್ತೆಯಾಗಿಡುವ ಅಮ್ಮಂದಿರು ಒಂದೆಡೆಯಾದರೆ ತನ್ನ ಸ್ವಾರ್ಥಕ್ಕಾಗಿ ಮಕ್ಕಳ ಜೀವ ತೆಗೆಯಲು ಕೂಡ ಹೇಸದ ಕೆಲವು ಅಮ್ಮಂದಿರು ಇನ್ನೊಂದೆಡೆ. ಹಿಮಾಚಲ ಪ್ರದೇಶದ ಚಂಬದಲ್ಲಿ 25 ವರ್ಷದ ವ್ಯಕ್ತಿ ಹಾಗೂ ಮೂವರ ಮಕ್ಕಳ ಕೊಲೆಯಾಗಿತ್ತು. ಆ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆ ವ್ಯಕ್ತಿಯ ಹೆಂಡತಿಯೇ ಆತನನ್ನು ಹಾಗೂ ಮೂವರು ಮಕ್ಕಳನ್ನು ಕೊಲೆ ಮಾಡಿದ್ದಾಳೆಂಬ ವಿಷಯವನ್ನು ಪತ್ತೆ ಹಚ್ಚಿದ್ದಾರೆ.

ಸೆ. 14ರಂದು ಚಂಬ ಪ್ರದೇಶದ ಇಲ್ಲಿನ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು 25 ವರ್ಷದ ಪುರುಷ ಹಾಗೂ ಆತನ ಮೂವರು ಮಕ್ಕಳು ಸುಟ್ಟು ಕರಕಲಾಗಿದ್ದರು. ಅದೃಷ್ಟವಶಾತ್ ಆತನ ಹೆಂಡತಿ ಬದುಕುಳಿದಿದ್ದಳು. ಆದರೆ, ಇದು ಅದೃಷ್ಟದಿಂದಲ್ಲ, ಮೊದಲೇ ಮಾಡಿದ ಪ್ಲಾನ್​ನಿಂದ ಎಂಬುದು ಈಗ ಬಯಲಾಗಿದೆ. ಪಕ್ಕದ ಮನೆಯವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ನೂರಾ ತನ್ನ ಗಂಡನನ್ನು ಕೊಲೆ ಮಾಡಲು ಪ್ರಿಯಕರನ ಸಹಾಯ ಪಡೆದಿದ್ದಳು. ಯಾರಿಗೂ ಅನುಮಾನ ಬಾರದಂತೆ ಗಂಡನನ್ನು ಕೊಲೆ ಮಾಡಲು ನಿರ್ಧರಿಸಿದ್ದ ಆಕೆ ಆತನ ಜೊತೆ ಮೂವರು ಮಕ್ಕಳನ್ನು ಕೂಡ ಬಲಿ ನೀಡಿದ್ದಾಳೆ.

ಆಕೆಯ ಅಕ್ರಮ ಸಂಬಂಧವನ್ನು ಮುಚ್ಚಿಡಲು 25 ವರ್ಷದ ರಫಿ ಮೊಹಮ್ಮದ್, 6 ವರ್ಷದ ಮಗಳು ಜೈಟುನ್, 2 ವರ್ಷದ ಮಗಳು ಜುಲ್ಕ, 4 ವರ್ಷದ ಮಗ ಸಮೀರ್ ಮನೆಯಲ್ಲಿದ್ದಾಗ ಬೆಂಕಿ ಹಚ್ಚಿ ಕೊಂದಿದ್ದಾಳೆ. ಇಲ್ಲಿನ ಕರತೋಷ್ ಎಂಬ ಗ್ರಾಮದಲ್ಲಿ ಸೆ. 14ರಂದು ಮನೆಯೊಳಗೆ ಬೆಂಕಿ ಹಚ್ಚಿ ನಾಲ್ವರನ್ನೂ ಕೊಲೆ ಮಾಡಿದ್ದಾಳೆ. ಬಳಿಕ ತನಗೂ ಸಣ್ಣ ಪುಟ್ಟ ಗಾಯಗಳನ್ನು ಮಾಡಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಳೆ. ಹೀಗಾಗಿ, ಇದೊಂದು ಆಕಸ್ಮಿಕ ಬೆಂಕಿ ಅವಘಡ ಎಂದು ನಂಬಲಾಗಿತ್ತು.

ಆದರೆ, ರಫಿಯ ತಂದೆ ಈ ಘಟನೆಯ ಹಿಂದೆ ತಮ್ಮ ಸೊಸೆಯ ಕೈವಾಡ ಇರುವ ಅನುಮಾನವಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ನನ್ನ ಮಗ ಹಾಗೂ ಮೊಮ್ಮಕ್ಕಳ ಸಾವು ಆಕಸ್ಮಿಕವಲ್ಲ. ಅದೊಂದು ಪೂರ್ವ ನಿಯೋಜಿತ ಕೊಲೆ ಎಂದು ದೂರಿನಲ್ಲಿ ತಿಳಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲೂ ರಫಿಯ ತಲೆಗೆ ಹಿಂಭಾಗದಿಂದ ಬಲವಾದ ಪೆಟ್ಟು ಬಿದ್ದಿದ್ದರಿಂದ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿತ್ತು. ಇದರಿಂದ ತನಿಖೆ ನಡೆಸಿದ ಪೊಲೀಸರು ಅಸಲಿ ವಿಷಯವನ್ನು ಬಯಲಿಗೆಳೆದಿದ್ದಾರೆ.

ಇದನ್ನೂ ಓದಿ: Murder: ಲೇಡಿ ಪೊಲೀಸ್​ಗಾಗಿ ಹೆಂಡತಿ, ಮಕ್ಕಳನ್ನೇ ಕೊಂದ ಗಂಡ; ಸತ್ತು ಹೋಗಿದ್ದ ಕೊಲೆಗಾರ ಎದ್ದು ಬಂದ ಕತೆಯಿದು!

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

Published On - 1:18 pm, Thu, 30 September 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ