AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಆಲ್ಕೋಹಾಲ್​ ಖರೀದಿಸಲು ಹಣ ಕೊಡದ ಗರ್ಭಿಣಿ ಹೆಂಡತಿಯನ್ನು ಕೊಂದ ಗಂಡ

Crime News: ತಿಲೇಶ್ವರ್ ಕಳೆದ ವರ್ಷ ಮೇ 25ರಂದು ಪ್ರಿಯಾ ದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ಕಳೆದ ಗುರುವಾರ ಆತ ತನ್ನ ಹೆಂಡತಿ ಪ್ರಿಯಾ ಬಳಿ ಆಲ್ಕೋಹಾಲ್ ಖರೀದಿಸಲು ಹಣ ಕೇಳಿದ್ದ. ಆದರೆ, ಆಕೆ ಹಣವನ್ನು ನೀಡಲು ನಿರಾಕರಿಸಿದ್ದಳು.

Murder: ಆಲ್ಕೋಹಾಲ್​ ಖರೀದಿಸಲು ಹಣ ಕೊಡದ ಗರ್ಭಿಣಿ ಹೆಂಡತಿಯನ್ನು ಕೊಂದ ಗಂಡ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 15, 2022 | 8:02 PM

Share

ಛತ್ರಾ: ಆಲ್ಕೋಹಾಲ್ ಖರೀದಿಸಲು ಹಣ ನೀಡದ 7 ತಿಂಗಳ ಗರ್ಭಿಣಿಯನ್ನು ಆಕೆಯ ಗಂಡನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್‌ನ (Jharkhand) ಛತ್ರಾ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೆಂಡತಿಯನ್ನು ಕೊಂದ ಆರೋಪಿಯನ್ನು ತಿಲೇಶ್ವರ ಗಂಜು ಎಂದು ಗುರುತಿಸಲಾಗಿದ್ದು, ಶುಕ್ರವಾರ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ತಿಲೇಶ್ವರ್ ಕಳೆದ ವರ್ಷ ಮೇ 25ರಂದು ಪ್ರಿಯಾ ದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ಹಜಾರಿಬಾಗ್ ನಿವಾಸಿಯಾಗಿರುವ ಪ್ರಿಯಾ ಅವರ ಸಹೋದರ ನರೇಶ್ ಗಂಜು ಅವರ ಪ್ರಕಾರ, ತಿಲೇಶ್ವರ್ ದಿನವೂ ಕಂಠಪೂರ್ತಿ ಕುಡಿದು ಪ್ರಿಯಾಗೆ ಥಳಿಸುತ್ತಿದ್ದ. ಆಲ್ಕೋಹಾಲ್ (Liquor) ಖರೀದಿಸಲು ಆತ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಮಾರಾಟ ಮಾಡುತ್ತಿದ್ದ.

ಕಳೆದ ಗುರುವಾರ ಆತ ತನ್ನ ಹೆಂಡತಿ ಪ್ರಿಯಾ ಬಳಿ ಆಲ್ಕೋಹಾಲ್ ಖರೀದಿಸಲು ಹಣ ಕೇಳಿದ್ದ. ಆದರೆ, ಆಕೆ ಹಣವನ್ನು ನೀಡಲು ನಿರಾಕರಿಸಿದ್ದಳು. ನಂತರ ಅವರು ಅವಳನ್ನು ಥಳಿಸಿದರು ಎಂದು ನರೇಶ್ ಹೇಳಿದ್ದಾರೆ. 7 ತಿಂಗಳ ಗರ್ಭಿಣಿಯಾಗಿದ್ದ ಪ್ರಿಯಾ ಜೊತೆಗೆ ಇದೇ ವಿಷಯಕ್ಕೆ ಜಗಳವಾಡಿದ ಆತ ಹಣಕ್ಕಾಗಿ ಪ್ರಿಯಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಪರಾಧ ನಡೆದ ಸ್ಥಳಕ್ಕೆ ಆಗಮಿಸಿ, ಮೃತ ಮಹಿಳೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಛತ್ರಾ ಸದರ್ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಕೃತ್ಯ ಎಸಗಿ ಪರಾರಿಯಾಗಿದ್ದ ತಿಲೇಶ್ವರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆತನನ್ನು ದಾಖಲಿಸಲಾಗಿದೆ. ಶುಕ್ರವಾರ ಆತನನ್ನು ಜೈಲಿಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ಪ್ರಿಯಕರನಿಗಾಗಿ ಪತಿಯ ಕೊಲೆ ಮಾಡಿ ಮೂರ್ಛೆ ರೋಗದಿಂದ ಸಾವು ಎಂದು ಕತೆ ಕಟ್ಟಿದ್ದ ಖರ್ತನಾಕ್ ಲೇಡಿಯ ಬಂಧನ

Murder: ಲವರ್ ಜೊತೆ ಮಾತಾಡಿದ್ದಕ್ಕೆ ಯುವಕನ ಕಗ್ಗೊಲೆ; ಹಂತಕನನ್ನು ಪತ್ತೆಹಚ್ಚಿದ್ದೇ ಒಂದು ರೋಚಕ ಕತೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ