AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಆಲ್ಕೋಹಾಲ್​ ಖರೀದಿಸಲು ಹಣ ಕೊಡದ ಗರ್ಭಿಣಿ ಹೆಂಡತಿಯನ್ನು ಕೊಂದ ಗಂಡ

Crime News: ತಿಲೇಶ್ವರ್ ಕಳೆದ ವರ್ಷ ಮೇ 25ರಂದು ಪ್ರಿಯಾ ದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ಕಳೆದ ಗುರುವಾರ ಆತ ತನ್ನ ಹೆಂಡತಿ ಪ್ರಿಯಾ ಬಳಿ ಆಲ್ಕೋಹಾಲ್ ಖರೀದಿಸಲು ಹಣ ಕೇಳಿದ್ದ. ಆದರೆ, ಆಕೆ ಹಣವನ್ನು ನೀಡಲು ನಿರಾಕರಿಸಿದ್ದಳು.

Murder: ಆಲ್ಕೋಹಾಲ್​ ಖರೀದಿಸಲು ಹಣ ಕೊಡದ ಗರ್ಭಿಣಿ ಹೆಂಡತಿಯನ್ನು ಕೊಂದ ಗಂಡ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 15, 2022 | 8:02 PM

Share

ಛತ್ರಾ: ಆಲ್ಕೋಹಾಲ್ ಖರೀದಿಸಲು ಹಣ ನೀಡದ 7 ತಿಂಗಳ ಗರ್ಭಿಣಿಯನ್ನು ಆಕೆಯ ಗಂಡನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್‌ನ (Jharkhand) ಛತ್ರಾ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೆಂಡತಿಯನ್ನು ಕೊಂದ ಆರೋಪಿಯನ್ನು ತಿಲೇಶ್ವರ ಗಂಜು ಎಂದು ಗುರುತಿಸಲಾಗಿದ್ದು, ಶುಕ್ರವಾರ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ತಿಲೇಶ್ವರ್ ಕಳೆದ ವರ್ಷ ಮೇ 25ರಂದು ಪ್ರಿಯಾ ದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ಹಜಾರಿಬಾಗ್ ನಿವಾಸಿಯಾಗಿರುವ ಪ್ರಿಯಾ ಅವರ ಸಹೋದರ ನರೇಶ್ ಗಂಜು ಅವರ ಪ್ರಕಾರ, ತಿಲೇಶ್ವರ್ ದಿನವೂ ಕಂಠಪೂರ್ತಿ ಕುಡಿದು ಪ್ರಿಯಾಗೆ ಥಳಿಸುತ್ತಿದ್ದ. ಆಲ್ಕೋಹಾಲ್ (Liquor) ಖರೀದಿಸಲು ಆತ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಮಾರಾಟ ಮಾಡುತ್ತಿದ್ದ.

ಕಳೆದ ಗುರುವಾರ ಆತ ತನ್ನ ಹೆಂಡತಿ ಪ್ರಿಯಾ ಬಳಿ ಆಲ್ಕೋಹಾಲ್ ಖರೀದಿಸಲು ಹಣ ಕೇಳಿದ್ದ. ಆದರೆ, ಆಕೆ ಹಣವನ್ನು ನೀಡಲು ನಿರಾಕರಿಸಿದ್ದಳು. ನಂತರ ಅವರು ಅವಳನ್ನು ಥಳಿಸಿದರು ಎಂದು ನರೇಶ್ ಹೇಳಿದ್ದಾರೆ. 7 ತಿಂಗಳ ಗರ್ಭಿಣಿಯಾಗಿದ್ದ ಪ್ರಿಯಾ ಜೊತೆಗೆ ಇದೇ ವಿಷಯಕ್ಕೆ ಜಗಳವಾಡಿದ ಆತ ಹಣಕ್ಕಾಗಿ ಪ್ರಿಯಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಪರಾಧ ನಡೆದ ಸ್ಥಳಕ್ಕೆ ಆಗಮಿಸಿ, ಮೃತ ಮಹಿಳೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಛತ್ರಾ ಸದರ್ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಕೃತ್ಯ ಎಸಗಿ ಪರಾರಿಯಾಗಿದ್ದ ತಿಲೇಶ್ವರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆತನನ್ನು ದಾಖಲಿಸಲಾಗಿದೆ. ಶುಕ್ರವಾರ ಆತನನ್ನು ಜೈಲಿಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ಪ್ರಿಯಕರನಿಗಾಗಿ ಪತಿಯ ಕೊಲೆ ಮಾಡಿ ಮೂರ್ಛೆ ರೋಗದಿಂದ ಸಾವು ಎಂದು ಕತೆ ಕಟ್ಟಿದ್ದ ಖರ್ತನಾಕ್ ಲೇಡಿಯ ಬಂಧನ

Murder: ಲವರ್ ಜೊತೆ ಮಾತಾಡಿದ್ದಕ್ಕೆ ಯುವಕನ ಕಗ್ಗೊಲೆ; ಹಂತಕನನ್ನು ಪತ್ತೆಹಚ್ಚಿದ್ದೇ ಒಂದು ರೋಚಕ ಕತೆ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ