AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಮನೆಯೊಳಗೆ ಮಗ, ಸೊಸೆ, ಮೊಮ್ಮಕ್ಕಳನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ

ಕುಟುಂಬಸ್ಥರು ರಾತ್ರಿ ಮಲಗಿದ್ದಾಗ ಮನೆಯಿಂದ ಹೊರಗೆ ಬಂದ 79 ವರ್ಷದ ಹಮೀದ್ ಫೈಝಲ್ ತನ್ನ ಮಗ, ಮೊಮ್ಮಕ್ಕಳು ಮಲಗುವ ಕೋಣೆಗೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿದ್ದಾನೆ

Murder: ಮನೆಯೊಳಗೆ ಮಗ, ಸೊಸೆ, ಮೊಮ್ಮಕ್ಕಳನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ
ಇಡುಕ್ಕಿಯಲ್ಲಿ ಕೊಲೆಯಾದ ಕುಟುಂಬ
TV9 Web
| Edited By: |

Updated on: Mar 19, 2022 | 1:30 PM

Share

ಇಡುಕ್ಕಿ: ಕೇರಳದ ತೊಡುಪುಳದ ಚೀನಿಕುಜಿಯಲ್ಲಿ ವೃದ್ಧನೊಬ್ಬ ತನ್ನ ಮನೆಗೆ ಹೊರಗಿನಿಂದ ಬೀಗ ಹಾಕಿ, ಮಗ ಹಾಗೂ ಆತನ ಇಡೀ ಕುಟುಂಬವನ್ನು ಸುಟ್ಟು ಹಾಕಿದ್ದಾನೆ. ಮನೆಯಿಂದ ಯಾರೂ ಹೊರಗೆ ಬರಬಾರದು ಎಂಬ ಕಾರಣಕ್ಕೆ ಮನೆಯ ಹೊರಗೆ ಬಾಗಿಲಿಗೆ ಬೀಗ ಹಾಕಿದ್ದ. ಇದರಿಂದಾಗಿ ವೃದ್ಧನ ಮಗ, ಸೊಸೆ ಮತ್ತು ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚೀನಿಕ್ಕುಜಿಯ ಅಲಿಯಕ್ಕುನ್ನೆಲ್‌ನ ಹಮೀದ್ ಎಂಬ 79 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯೊಳಗೆ ನಲ್ಲಿಯಲ್ಲಿ ನೀರು ಬಾರದಂತೆ ಪೈಪ್ ಸಂಪರ್ಕವನ್ನು ಕಟ್ ಮಾಡಿದ ವೃದ್ಧ ಮನೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆತ ಮಗನ ವಿರುದ್ಧ ಕೋಪಗೊಂಡು ಆತನ ಇಡೀ ಕುಟುಂಬವನ್ನು ಸುಟ್ಟು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ತಿ ವಿಚಾರಕ್ಕೆ ಅಪ್ಪ- ಮಗನ ನಡುವೆ ಜಗಳ ನಡೆದು, ಅಪ್ಪ ಮಗನನ್ನು ಕೊಲ್ಲಲು ನಿರ್ಧರಿಸಿದ್ದಾನೆ. ಮನೆಗೆ ಬೆಂಕಿ ಹಚ್ಚಿ ಹೊರಗೆ ನಿಂತಿದ್ದ ಆ ವೃದ್ಧನನ್ನು ಅಕ್ಕಪಕ್ಕದ ಮನೆಯವರು ಹಿಡಿದು ಪೊಲೀಸರಿಗೆ ನೀಡಿದ್ದಾರೆ. ಮೊಹಮ್ಮದ್ ಫೈಝಲ್ (49), ಅವರ ಪತ್ನಿ ಶೀಬಾ (39), ಪುತ್ರಿಯರಾದ ಮೆಹರು (16) ಮತ್ತು ಅಸ್ನಾ (13) ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೊಡುಪುಳ ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಆಸ್ತಿ ವಿವಾದ ಕೊಲೆಗೆ ಕಾರಣವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೆರೆಹೊರೆಯವರ ಪ್ರಕಾರ, ಕುಟುಂಬಸ್ಥರು ರಾತ್ರಿ ಮಲಗಿದ್ದಾಗ ಅಲ್ಲಿಗೆ ಬಂದ 79 ವರ್ಷದ ಹಮೀದ್ ಫೈಝಲ್ ಮಗ ಮಲಗುವ ಕೋಣೆಗೆ ಪೆಟ್ರೋಲ್ ಸುರಿದಿದ್ದಾನೆ. ಮನೆಯವರು ಹೊರಗೆ ಓಡಿಬಂದು ಪಾರಾಗುವುದನ್ನು ತಡೆಯಲು ಹೊರಗಿನಿಂದ ಬಾಗಿಲು ಹಾಕಿಕೊಂಡು ನೀರಿನ ತೊಟ್ಟಿಯಿಂದ ಮನೆಯೊಳಗೆ ನೀರು ಹೋಗದಂತೆ ಪೈಪ್ ಸಂಪರ್ಕ ಕಟ್ ಮಾಡಿದ್ದಾನೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿದ್ದಂತೆ ಅವರ ಮಗ ಎಚ್ಚರಗೊಂಡು ಸಹಾಯಕ್ಕಾಗಿ ನೆರೆಹೊರೆಯವರಿಗೆ ಕರೆ ಮಾಡಿದರೂ, ಹಮೀದ್ ಮನೆಗೆ ಬಂದವರಿಗೂ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ನೆರೆಹೊರೆಯವರು ಮುಂದೆ ಹೋಗಲಾಗದೆ ಪೊಲೀಸರಿಗೆ ಮಾಹಿತಿ ನೀಡಿದರಾದರೂ ರಕ್ಷಣಾ ತಂಡ ಬರುವಷ್ಟರಲ್ಲಿ ತಡವಾಗಿತ್ತು. ಹಮೀದ್ ಕಳೆದ ಹಲವು ವರ್ಷಗಳಿಂದ ತನ್ನ ಎರಡನೇ ಪತ್ನಿಯೊಂದಿಗೆ ವಾಸವಾಗಿದ್ದ. ಇತ್ತೀಚೆಗಷ್ಟೇ ತನ್ನ ಎರಡನೇ ಪತ್ನಿ ಆತನನ್ನು ಬಿಟ್ಟು ಹೋದ ನಂತರ ಮಗನೊಂದಿಗೆ ಇರಲು ಮನೆಗೆ ಮರಳಿದ್ದ.

ಆದರೆ, ಅವರ ಮಗ ಹಾಗೂ ಆತನ ನಡುವೆ ಆಸ್ತಿ ಪಾಲು ಕೊಡುವ ವಿಚಾರದಲ್ಲಿ ಬಹಳ ದಿನಗಳಿಂದ ಜಗಳ ನಡೆದಿತ್ತು. ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲು ಸ್ಥಳೀಯ ಮಸೀದಿ ಅಧಿಕಾರಿಗಳು ಮತ್ತು ಕುಟುಂಬ ಸದಸ್ಯರು ಮಾತುಕತೆ ನಡೆಸಿದರೂ ವ್ಯರ್ಥವಾಯಿತು. ಹೀಗಾಗಿ, ಮಗನ ಮೇಲೆ ಕೋಪಗೊಂಡಿದ್ದ ಹಮೀದ್ ಶುಕ್ರವಾರ ರಾತ್ರಿ ಮೊಹಮ್ಮದ್ ಫೈಝಲ್ ಮತ್ತು ಅವನ ಹೆಂಡತಿ, ಮಕ್ಕಳು ಮಲಗಿದ್ದಾಗ ಮನೆಯ ಬಾಗಿಲನ್ನು ಲಾಕ್ ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಬೆಂಕಿ ನಂದಿಸಲು ಮೊಹಮ್ಮದ್ ಫೈಝಲ್ ಮತ್ತು ಆತನ ಮನೆಯವರು ಬಾತ್​ರೂಂನಿಂದ ನೀರು ತರಲು ನೋಡಿದರೂ ನಲ್ಲಿಗಳಲ್ಲಿ ನೀರು ಬರುತ್ತಿರಲಿಲ್ಲ. ಹೀಗಾಗಿ, ಅವರೆಲ್ಲರೂ ಬಚ್ಚಲುಮನೆಯಲ್ಲೇ ಉಸಿರುಗಟ್ಟಿ, ಅರೆಬರೆ ಸುಟ್ಟ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ನಂತರ ಕರಿಮನ್ನೂರು ಪೊಲೀಸ್ ಠಾಣೆಯ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ಬೆಂಕಿಯನ್ನು ನಂದಿಸಿದರು. ಬಳಿಕ ನಾಲ್ವರ ಹೆಣಗಳನ್ನು ಹೊರಗೆ ತರಲಾಯಿತು.

ಇದನ್ನೂ ಓದಿ: Murder: ಮಗಳನ್ನೇ ಕೊಂದು ಆಕೆಯ ಶವದ ಮೇಲೆ ಅತ್ಯಾಚಾರ ನಡೆಸಿದ ಅಪ್ಪ!

Murder: ಮರುಮದುವೆಯಾಗಲು ಮುಂದಾದ 80 ವರ್ಷದ ತಂದೆಯನ್ನು ಕೊಚ್ಚಿ ಕೊಂದ ಮಗ!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ