AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!

Crime News: ಮೃತ ವ್ಯಕ್ತಿ ಗಣೇಶ್ ತನ್ನ ತಾಯಿಯ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದ ಕಾರಣ ಆರೋಪಿ ಅಶೋಕ್ ಮುಖಿಯಾ ಎಂಬಾತ ಆತನನ್ನು ಕೊಲೆ ಮಾಡಿದ್ದಾನೆ.

Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 29, 2022 | 4:19 PM

Share

ಮುಂಬೈ: 19 ವರ್ಷದ ಯುವಕನೊಬ್ಬ ತನ್ನ ರೂಮ್‌ಮೇಟ್‌ನನ್ನು ರೈಲ್ವೆ ಹಳಿಗಳ ಮೇಲೆ ಚಾಕುವಿನಿಂದ ಇರಿದು ಕೊಂದು (Murder), ಚಲಿಸುತ್ತಿದ್ದ ರೈಲಿನಡಿಗೆ ತಳ್ಳಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ (Maharashtra) ಬೆಳಕಿಗೆ ಬಂದಿದೆ. ಅಪರಾಧ ಮಾಡಿದ ಯುವಕನನ್ನು ಸರ್ಕಾರಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ರೈಲಿನ ಕೆಳಗೆ ಯುವಕನ ದೇಹವನ್ನು ಹಾಕಿ, ಅದೊಂದು ಅಪಘಾತವೆಂದು ಕತೆ ಕಟ್ಟಲು ಪ್ರಯತ್ನಿಸಿದ್ದ ಯುವಕ ಇದೀಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಮೊದಲು ಇದೊಂದು ಅಪಘಾತವೆಂದೇ ನಂಬಿದ್ದ ಪೊಲೀಸರು ಮೃತಪಟ್ಟ ಯುವಕನ ಸ್ನೇಹಿತರ ವಿಚಾರಣೆ ಮಾಡಿದಾಗ ಅಸಲಿ ಸತ್ಯ ಬಯಲಾಗಿದೆ. 

ಮೃತ ವ್ಯಕ್ತಿ ಗಣೇಶ್ ತನ್ನ ತಾಯಿಯ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದ ಕಾರಣ ಆರೋಪಿ ಅಶೋಕ್ ಮುಖಿಯಾ ಎಂಬಾತ ಆತನನ್ನು ಕೊಲೆ ಮಾಡಿದ್ದಾನೆ. ಗುರುವಾರ ರಾತ್ರಿ ಕಂಡಿವಲಿ ಮತ್ತು ಬೊರಿವಲಿ ರೈಲು ನಿಲ್ದಾಣಗಳ ನಡುವೆ ಆಘಾತಕಾರಿ ಘಟನೆ ಸಂಭವಿಸಿದೆ ಎಂಬ ವಿಷಯ ಉನ್ನತ ತನಿಖೆಯಿಂದ ತಿಳಿದುಬಂದಿದೆ. ಇಬ್ಬರೂ ಇತರ ಕೆಲವರೊಂದಿಗೆ ಪಾಯಿಸರ್ ಚಾಲ್‌ನ ಕೋಣೆಯಲ್ಲಿ ವಾಸಿಸುತ್ತಿದ್ದರು. ಅವರಿಬ್ಬರೂ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಇಬ್ಬರೂ ಸೇರಿದಂತೆ ಎಲ್ಲಾ ರೂಮ್‌ಮೇಟ್‌ಗಳು ಬಿಹಾರದ ಮಧುಬನಿಯವರಾಗಿದ್ದರು.

ಒಂದು ತಿಂಗಳ ಹಿಂದಷ್ಟೇ ಗಣೇಶ್ ಬಿಹಾರದಿಂದ ಬಂದಿದ್ದ. ವಿಚಾರಣೆ ವೇಳೆ ಅಶೋಕ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಗಣೇಶ್ ಆಗಾಗ ನನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದನಾದರೂ ನಡೆದ ಸಂಭಾಷಣೆಗಳ ಬಗ್ಗೆ ತಿಳಿಸಿರಲಿಲ್ಲ. ಗಣೇಶ್ ನನ್ನ ತಾಯಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದ, ಆಕೆ ಬೇರೆಯವರೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿಕೆ ನೀಡಿದ್ದು ಅಶೋಕ್​ನನ್ನು ಕೆರಳಿಸಿತ್ತು. ಇದೇ ಕಾರಣಕ್ಕೆ ಆತ ತನ್ನ ಗೆಳೆಯನನ್ನು ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ.

ಇಬ್ಬರೂ ಕೆಲವು ಸ್ನೇಹಿತರನ್ನು ಭೇಟಿ ಮಾಡಲು ರೈಲ್ವೆ ಹಳಿ ಬಳಿ ಹೋದಾಗ ಈ ಘಟನೆ ಸಂಭವಿಸಿದೆ. ಕಂಠಪೂರ್ತಿ ಕುಡಿದಿದ್ದ ಅವರ ನಡುವೆ ಮಾತಿಗೆ ಮಾತು ಬೆಳೆದು, ಅಶೋಕ್ ಗಣೇಶ್‌ಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ನಿಧಾನವಾಗಿ ಚಲಿಸುತ್ತಿದ್ದ ಗೂಡ್ಸ್ ರೈಲಿನ ಕೆಳಗೆ ತಳ್ಳಿ ಆ ಸ್ಥಳದಿಂದ ಪರಾರಿಯಾಗಿದ್ದಾನೆ. ಕೊಲೆಯಾದವನ ರೂಂ ಮೇಟ್​ಗಳನ್ನು ವಿಚಾರಣೆ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: Murder: ಆಲ್ಕೋಹಾಲ್​ ಖರೀದಿಸಲು ಹಣ ಕೊಡದ ಗರ್ಭಿಣಿ ಹೆಂಡತಿಯನ್ನು ಕೊಂದ ಗಂಡ

Murder: ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು