AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!

Crime News: ಮೃತ ವ್ಯಕ್ತಿ ಗಣೇಶ್ ತನ್ನ ತಾಯಿಯ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದ ಕಾರಣ ಆರೋಪಿ ಅಶೋಕ್ ಮುಖಿಯಾ ಎಂಬಾತ ಆತನನ್ನು ಕೊಲೆ ಮಾಡಿದ್ದಾನೆ.

Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 29, 2022 | 4:19 PM

Share

ಮುಂಬೈ: 19 ವರ್ಷದ ಯುವಕನೊಬ್ಬ ತನ್ನ ರೂಮ್‌ಮೇಟ್‌ನನ್ನು ರೈಲ್ವೆ ಹಳಿಗಳ ಮೇಲೆ ಚಾಕುವಿನಿಂದ ಇರಿದು ಕೊಂದು (Murder), ಚಲಿಸುತ್ತಿದ್ದ ರೈಲಿನಡಿಗೆ ತಳ್ಳಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ (Maharashtra) ಬೆಳಕಿಗೆ ಬಂದಿದೆ. ಅಪರಾಧ ಮಾಡಿದ ಯುವಕನನ್ನು ಸರ್ಕಾರಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ರೈಲಿನ ಕೆಳಗೆ ಯುವಕನ ದೇಹವನ್ನು ಹಾಕಿ, ಅದೊಂದು ಅಪಘಾತವೆಂದು ಕತೆ ಕಟ್ಟಲು ಪ್ರಯತ್ನಿಸಿದ್ದ ಯುವಕ ಇದೀಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಮೊದಲು ಇದೊಂದು ಅಪಘಾತವೆಂದೇ ನಂಬಿದ್ದ ಪೊಲೀಸರು ಮೃತಪಟ್ಟ ಯುವಕನ ಸ್ನೇಹಿತರ ವಿಚಾರಣೆ ಮಾಡಿದಾಗ ಅಸಲಿ ಸತ್ಯ ಬಯಲಾಗಿದೆ. 

ಮೃತ ವ್ಯಕ್ತಿ ಗಣೇಶ್ ತನ್ನ ತಾಯಿಯ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದ ಕಾರಣ ಆರೋಪಿ ಅಶೋಕ್ ಮುಖಿಯಾ ಎಂಬಾತ ಆತನನ್ನು ಕೊಲೆ ಮಾಡಿದ್ದಾನೆ. ಗುರುವಾರ ರಾತ್ರಿ ಕಂಡಿವಲಿ ಮತ್ತು ಬೊರಿವಲಿ ರೈಲು ನಿಲ್ದಾಣಗಳ ನಡುವೆ ಆಘಾತಕಾರಿ ಘಟನೆ ಸಂಭವಿಸಿದೆ ಎಂಬ ವಿಷಯ ಉನ್ನತ ತನಿಖೆಯಿಂದ ತಿಳಿದುಬಂದಿದೆ. ಇಬ್ಬರೂ ಇತರ ಕೆಲವರೊಂದಿಗೆ ಪಾಯಿಸರ್ ಚಾಲ್‌ನ ಕೋಣೆಯಲ್ಲಿ ವಾಸಿಸುತ್ತಿದ್ದರು. ಅವರಿಬ್ಬರೂ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಇಬ್ಬರೂ ಸೇರಿದಂತೆ ಎಲ್ಲಾ ರೂಮ್‌ಮೇಟ್‌ಗಳು ಬಿಹಾರದ ಮಧುಬನಿಯವರಾಗಿದ್ದರು.

ಒಂದು ತಿಂಗಳ ಹಿಂದಷ್ಟೇ ಗಣೇಶ್ ಬಿಹಾರದಿಂದ ಬಂದಿದ್ದ. ವಿಚಾರಣೆ ವೇಳೆ ಅಶೋಕ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಗಣೇಶ್ ಆಗಾಗ ನನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದನಾದರೂ ನಡೆದ ಸಂಭಾಷಣೆಗಳ ಬಗ್ಗೆ ತಿಳಿಸಿರಲಿಲ್ಲ. ಗಣೇಶ್ ನನ್ನ ತಾಯಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದ, ಆಕೆ ಬೇರೆಯವರೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿಕೆ ನೀಡಿದ್ದು ಅಶೋಕ್​ನನ್ನು ಕೆರಳಿಸಿತ್ತು. ಇದೇ ಕಾರಣಕ್ಕೆ ಆತ ತನ್ನ ಗೆಳೆಯನನ್ನು ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ.

ಇಬ್ಬರೂ ಕೆಲವು ಸ್ನೇಹಿತರನ್ನು ಭೇಟಿ ಮಾಡಲು ರೈಲ್ವೆ ಹಳಿ ಬಳಿ ಹೋದಾಗ ಈ ಘಟನೆ ಸಂಭವಿಸಿದೆ. ಕಂಠಪೂರ್ತಿ ಕುಡಿದಿದ್ದ ಅವರ ನಡುವೆ ಮಾತಿಗೆ ಮಾತು ಬೆಳೆದು, ಅಶೋಕ್ ಗಣೇಶ್‌ಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ನಿಧಾನವಾಗಿ ಚಲಿಸುತ್ತಿದ್ದ ಗೂಡ್ಸ್ ರೈಲಿನ ಕೆಳಗೆ ತಳ್ಳಿ ಆ ಸ್ಥಳದಿಂದ ಪರಾರಿಯಾಗಿದ್ದಾನೆ. ಕೊಲೆಯಾದವನ ರೂಂ ಮೇಟ್​ಗಳನ್ನು ವಿಚಾರಣೆ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: Murder: ಆಲ್ಕೋಹಾಲ್​ ಖರೀದಿಸಲು ಹಣ ಕೊಡದ ಗರ್ಭಿಣಿ ಹೆಂಡತಿಯನ್ನು ಕೊಂದ ಗಂಡ

Murder: ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?