AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!

Crime News: ಮೃತ ವ್ಯಕ್ತಿ ಗಣೇಶ್ ತನ್ನ ತಾಯಿಯ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದ ಕಾರಣ ಆರೋಪಿ ಅಶೋಕ್ ಮುಖಿಯಾ ಎಂಬಾತ ಆತನನ್ನು ಕೊಲೆ ಮಾಡಿದ್ದಾನೆ.

Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 29, 2022 | 4:19 PM

Share

ಮುಂಬೈ: 19 ವರ್ಷದ ಯುವಕನೊಬ್ಬ ತನ್ನ ರೂಮ್‌ಮೇಟ್‌ನನ್ನು ರೈಲ್ವೆ ಹಳಿಗಳ ಮೇಲೆ ಚಾಕುವಿನಿಂದ ಇರಿದು ಕೊಂದು (Murder), ಚಲಿಸುತ್ತಿದ್ದ ರೈಲಿನಡಿಗೆ ತಳ್ಳಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ (Maharashtra) ಬೆಳಕಿಗೆ ಬಂದಿದೆ. ಅಪರಾಧ ಮಾಡಿದ ಯುವಕನನ್ನು ಸರ್ಕಾರಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ರೈಲಿನ ಕೆಳಗೆ ಯುವಕನ ದೇಹವನ್ನು ಹಾಕಿ, ಅದೊಂದು ಅಪಘಾತವೆಂದು ಕತೆ ಕಟ್ಟಲು ಪ್ರಯತ್ನಿಸಿದ್ದ ಯುವಕ ಇದೀಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಮೊದಲು ಇದೊಂದು ಅಪಘಾತವೆಂದೇ ನಂಬಿದ್ದ ಪೊಲೀಸರು ಮೃತಪಟ್ಟ ಯುವಕನ ಸ್ನೇಹಿತರ ವಿಚಾರಣೆ ಮಾಡಿದಾಗ ಅಸಲಿ ಸತ್ಯ ಬಯಲಾಗಿದೆ. 

ಮೃತ ವ್ಯಕ್ತಿ ಗಣೇಶ್ ತನ್ನ ತಾಯಿಯ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದ ಕಾರಣ ಆರೋಪಿ ಅಶೋಕ್ ಮುಖಿಯಾ ಎಂಬಾತ ಆತನನ್ನು ಕೊಲೆ ಮಾಡಿದ್ದಾನೆ. ಗುರುವಾರ ರಾತ್ರಿ ಕಂಡಿವಲಿ ಮತ್ತು ಬೊರಿವಲಿ ರೈಲು ನಿಲ್ದಾಣಗಳ ನಡುವೆ ಆಘಾತಕಾರಿ ಘಟನೆ ಸಂಭವಿಸಿದೆ ಎಂಬ ವಿಷಯ ಉನ್ನತ ತನಿಖೆಯಿಂದ ತಿಳಿದುಬಂದಿದೆ. ಇಬ್ಬರೂ ಇತರ ಕೆಲವರೊಂದಿಗೆ ಪಾಯಿಸರ್ ಚಾಲ್‌ನ ಕೋಣೆಯಲ್ಲಿ ವಾಸಿಸುತ್ತಿದ್ದರು. ಅವರಿಬ್ಬರೂ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಇಬ್ಬರೂ ಸೇರಿದಂತೆ ಎಲ್ಲಾ ರೂಮ್‌ಮೇಟ್‌ಗಳು ಬಿಹಾರದ ಮಧುಬನಿಯವರಾಗಿದ್ದರು.

ಒಂದು ತಿಂಗಳ ಹಿಂದಷ್ಟೇ ಗಣೇಶ್ ಬಿಹಾರದಿಂದ ಬಂದಿದ್ದ. ವಿಚಾರಣೆ ವೇಳೆ ಅಶೋಕ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಗಣೇಶ್ ಆಗಾಗ ನನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದನಾದರೂ ನಡೆದ ಸಂಭಾಷಣೆಗಳ ಬಗ್ಗೆ ತಿಳಿಸಿರಲಿಲ್ಲ. ಗಣೇಶ್ ನನ್ನ ತಾಯಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದ, ಆಕೆ ಬೇರೆಯವರೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿಕೆ ನೀಡಿದ್ದು ಅಶೋಕ್​ನನ್ನು ಕೆರಳಿಸಿತ್ತು. ಇದೇ ಕಾರಣಕ್ಕೆ ಆತ ತನ್ನ ಗೆಳೆಯನನ್ನು ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ.

ಇಬ್ಬರೂ ಕೆಲವು ಸ್ನೇಹಿತರನ್ನು ಭೇಟಿ ಮಾಡಲು ರೈಲ್ವೆ ಹಳಿ ಬಳಿ ಹೋದಾಗ ಈ ಘಟನೆ ಸಂಭವಿಸಿದೆ. ಕಂಠಪೂರ್ತಿ ಕುಡಿದಿದ್ದ ಅವರ ನಡುವೆ ಮಾತಿಗೆ ಮಾತು ಬೆಳೆದು, ಅಶೋಕ್ ಗಣೇಶ್‌ಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ನಿಧಾನವಾಗಿ ಚಲಿಸುತ್ತಿದ್ದ ಗೂಡ್ಸ್ ರೈಲಿನ ಕೆಳಗೆ ತಳ್ಳಿ ಆ ಸ್ಥಳದಿಂದ ಪರಾರಿಯಾಗಿದ್ದಾನೆ. ಕೊಲೆಯಾದವನ ರೂಂ ಮೇಟ್​ಗಳನ್ನು ವಿಚಾರಣೆ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: Murder: ಆಲ್ಕೋಹಾಲ್​ ಖರೀದಿಸಲು ಹಣ ಕೊಡದ ಗರ್ಭಿಣಿ ಹೆಂಡತಿಯನ್ನು ಕೊಂದ ಗಂಡ

Murder: ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ