AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!

Crime News: ಮೃತ ವ್ಯಕ್ತಿ ಗಣೇಶ್ ತನ್ನ ತಾಯಿಯ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದ ಕಾರಣ ಆರೋಪಿ ಅಶೋಕ್ ಮುಖಿಯಾ ಎಂಬಾತ ಆತನನ್ನು ಕೊಲೆ ಮಾಡಿದ್ದಾನೆ.

Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 29, 2022 | 4:19 PM

Share

ಮುಂಬೈ: 19 ವರ್ಷದ ಯುವಕನೊಬ್ಬ ತನ್ನ ರೂಮ್‌ಮೇಟ್‌ನನ್ನು ರೈಲ್ವೆ ಹಳಿಗಳ ಮೇಲೆ ಚಾಕುವಿನಿಂದ ಇರಿದು ಕೊಂದು (Murder), ಚಲಿಸುತ್ತಿದ್ದ ರೈಲಿನಡಿಗೆ ತಳ್ಳಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ (Maharashtra) ಬೆಳಕಿಗೆ ಬಂದಿದೆ. ಅಪರಾಧ ಮಾಡಿದ ಯುವಕನನ್ನು ಸರ್ಕಾರಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ರೈಲಿನ ಕೆಳಗೆ ಯುವಕನ ದೇಹವನ್ನು ಹಾಕಿ, ಅದೊಂದು ಅಪಘಾತವೆಂದು ಕತೆ ಕಟ್ಟಲು ಪ್ರಯತ್ನಿಸಿದ್ದ ಯುವಕ ಇದೀಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಮೊದಲು ಇದೊಂದು ಅಪಘಾತವೆಂದೇ ನಂಬಿದ್ದ ಪೊಲೀಸರು ಮೃತಪಟ್ಟ ಯುವಕನ ಸ್ನೇಹಿತರ ವಿಚಾರಣೆ ಮಾಡಿದಾಗ ಅಸಲಿ ಸತ್ಯ ಬಯಲಾಗಿದೆ. 

ಮೃತ ವ್ಯಕ್ತಿ ಗಣೇಶ್ ತನ್ನ ತಾಯಿಯ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದ ಕಾರಣ ಆರೋಪಿ ಅಶೋಕ್ ಮುಖಿಯಾ ಎಂಬಾತ ಆತನನ್ನು ಕೊಲೆ ಮಾಡಿದ್ದಾನೆ. ಗುರುವಾರ ರಾತ್ರಿ ಕಂಡಿವಲಿ ಮತ್ತು ಬೊರಿವಲಿ ರೈಲು ನಿಲ್ದಾಣಗಳ ನಡುವೆ ಆಘಾತಕಾರಿ ಘಟನೆ ಸಂಭವಿಸಿದೆ ಎಂಬ ವಿಷಯ ಉನ್ನತ ತನಿಖೆಯಿಂದ ತಿಳಿದುಬಂದಿದೆ. ಇಬ್ಬರೂ ಇತರ ಕೆಲವರೊಂದಿಗೆ ಪಾಯಿಸರ್ ಚಾಲ್‌ನ ಕೋಣೆಯಲ್ಲಿ ವಾಸಿಸುತ್ತಿದ್ದರು. ಅವರಿಬ್ಬರೂ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಇಬ್ಬರೂ ಸೇರಿದಂತೆ ಎಲ್ಲಾ ರೂಮ್‌ಮೇಟ್‌ಗಳು ಬಿಹಾರದ ಮಧುಬನಿಯವರಾಗಿದ್ದರು.

ಒಂದು ತಿಂಗಳ ಹಿಂದಷ್ಟೇ ಗಣೇಶ್ ಬಿಹಾರದಿಂದ ಬಂದಿದ್ದ. ವಿಚಾರಣೆ ವೇಳೆ ಅಶೋಕ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಗಣೇಶ್ ಆಗಾಗ ನನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದನಾದರೂ ನಡೆದ ಸಂಭಾಷಣೆಗಳ ಬಗ್ಗೆ ತಿಳಿಸಿರಲಿಲ್ಲ. ಗಣೇಶ್ ನನ್ನ ತಾಯಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದ, ಆಕೆ ಬೇರೆಯವರೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿಕೆ ನೀಡಿದ್ದು ಅಶೋಕ್​ನನ್ನು ಕೆರಳಿಸಿತ್ತು. ಇದೇ ಕಾರಣಕ್ಕೆ ಆತ ತನ್ನ ಗೆಳೆಯನನ್ನು ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ.

ಇಬ್ಬರೂ ಕೆಲವು ಸ್ನೇಹಿತರನ್ನು ಭೇಟಿ ಮಾಡಲು ರೈಲ್ವೆ ಹಳಿ ಬಳಿ ಹೋದಾಗ ಈ ಘಟನೆ ಸಂಭವಿಸಿದೆ. ಕಂಠಪೂರ್ತಿ ಕುಡಿದಿದ್ದ ಅವರ ನಡುವೆ ಮಾತಿಗೆ ಮಾತು ಬೆಳೆದು, ಅಶೋಕ್ ಗಣೇಶ್‌ಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ನಿಧಾನವಾಗಿ ಚಲಿಸುತ್ತಿದ್ದ ಗೂಡ್ಸ್ ರೈಲಿನ ಕೆಳಗೆ ತಳ್ಳಿ ಆ ಸ್ಥಳದಿಂದ ಪರಾರಿಯಾಗಿದ್ದಾನೆ. ಕೊಲೆಯಾದವನ ರೂಂ ಮೇಟ್​ಗಳನ್ನು ವಿಚಾರಣೆ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: Murder: ಆಲ್ಕೋಹಾಲ್​ ಖರೀದಿಸಲು ಹಣ ಕೊಡದ ಗರ್ಭಿಣಿ ಹೆಂಡತಿಯನ್ನು ಕೊಂದ ಗಂಡ

Murder: ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ