AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಪ್ರೀತಿಸಿ ಮದುವೆಯಾದ ಮಗಳು- ಅಳಿಯನನ್ನು ಕೊಚ್ಚಿ ಕೊಂದ ತಂದೆ

Tamil Nadu News: ಮುತ್ತುಕುಟ್ಟಿ ಅವರ ಪುತ್ರಿ ರೇಷ್ಮಾ (20) ಅದೇ ಊರಿನಲ್ಲಿ ದಿನಗೂಲಿ ನೌಕರನಾಗಿದ್ದ ಮಾಣಿಕ ರಾಜ್ (26) ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಅವರ ಮದುವೆಗೆ ತಂದೆಯ ವಿರೋಧವಿತ್ತು.

Murder: ಪ್ರೀತಿಸಿ ಮದುವೆಯಾದ ಮಗಳು- ಅಳಿಯನನ್ನು ಕೊಚ್ಚಿ ಕೊಂದ ತಂದೆ
ಸಾಂದರ್ಭಿಕ ಚಿತ್ರImage Credit source: India Today
TV9 Web
| Updated By: ಸುಷ್ಮಾ ಚಕ್ರೆ|

Updated on: Jul 26, 2022 | 1:46 PM

Share

ಚೆನ್ನೈ: ತಮಿಳುನಾಡಿನ ಟುಟಿಕೋರಿನ್ ಜಿಲ್ಲೆಯಲ್ಲಿ ತಂದೆಯೊಬ್ಬ ತನ್ನ ಮಗಳು ಮತ್ತು ಅಳಿಯನನ್ನು ಕೊಚ್ಚಿ (Murder) ಕೊಂದಿದ್ದಾನೆ. ತನ್ನ ಒಪ್ಪಿಗೆಯಿಲ್ಲದೆ ಮಗಳು ಪ್ರೀತಿಸಿ ವಿವಾಹವಾಗಿದ್ದಕ್ಕೆ ಆಕ್ರೋಶಗೊಂಡು ಆ ವ್ಯಕ್ತಿ ತನ್ನ ಮಗಳು- ಅಳಿಯನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆ ಮಾಡಿದ ವ್ಯಕ್ತಿಯನ್ನು ಮುತ್ತುಕುಟ್ಟಿ (50) ಎಂದು ಗುರುತಿಸಲಾಗಿದ್ದು, ಟುಟಿಕೋರಿನ್ (Tuticorin) ಜಿಲ್ಲೆಯ ಕೋವಿಲ್‌ಪಟ್ಟಿ ನಗರದ ಸಮೀಪದ ವೀರಪಟ್ಟಿ ಗ್ರಾಮದಲ್ಲಿ ಅವರು ವಾಸವಾಗಿದ್ದಾರೆ.

ಮುತ್ತುಕುಟ್ಟಿ ಅವರ ಪುತ್ರಿ ರೇಷ್ಮಾ (20) ಕೋವಿಲ್‌ಪಟ್ಟಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಡಿಗ್ರಿ ವಿದ್ಯಾರ್ಥಿನಿಯಾಗಿದ್ದಳು. ಆಕೆ ಅದೇ ಊರಿನಲ್ಲಿ ದಿನಗೂಲಿ ನೌಕರನಾಗಿದ್ದ ಮಾಣಿಕ ರಾಜ್ (26) ಎಂಬಾತನನ್ನು ಪ್ರೀತಿಸುತ್ತಿದ್ದಳು. ಮುತ್ತುಕುಟ್ಟಿಗೆ ಅವರಿಬ್ಬರ ಸಂಬಂಧ ಇಷ್ಟವಿರಲಿಲ್ಲ. ಅಪ್ಪ ತಮ್ಮ ಸಂಬಂಧವನ್ನು ಒಪ್ಪದಿದ್ದರೂ ರೇಷ್ಮಾ ಹಠದಿಂದ ತಾನು ಇಷ್ಟಪಟ್ಟವನನ್ನೇ ಮದುವೆಯಾಗಿದ್ದಳು.

ಇವರ ಪ್ರೀತಿಗೆ ರೇಷ್ಮಾಳ ತಂದೆ ಮುತ್ತುಕುಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕೆಲವು ದಿನಗಳ ಹಿಂದೆ ಮದುವೆಯಾಗಿದ್ದ ದಂಪತಿ ಎರಡು ದಿನಗಳ ಹಿಂದಷ್ಟೇ ತಮ್ಮ ಗ್ರಾಮಕ್ಕೆ ವಾಪಾಸ್ ಬಂದಿದ್ದರು. ಹೊಸ ಜೀವನ ಕಟ್ಟಿಕೊಳ್ಳುವ ಉತ್ಸಾಹದಲ್ಲಿದ್ದ ಆ ದಂಪತಿಗೆ ಆ ಯುವತಿಯ ತಂದೆಯೇ ವಿಲನ್ ಆಗಿದ್ದಾರೆ.

ಇದನ್ನೂ ಓದಿ: Murder: ಡ್ರಗ್ಸ್​​ ಸೇವಿಸುತ್ತಿದ್ದ ಮಗನನ್ನು ಕತ್ತರಿಸಿ, ಪ್ಲಾಸ್ಟಿಕ್ ಬ್ಯಾಗ್​ನಲ್ಲಿ ತುಂಬಿ ಬಿಸಾಡಿದ ಅಪ್ಪ!

ಮಗಳ ಮದುವೆಗೆ ಮುತ್ತುಕುಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ನಂತರ ಗ್ರಾಮ ಪಂಚಾಯತಿ ಮೂಲಕ ಇಬ್ಬರಿಗೂ ಆ ಗ್ರಾಮದಲ್ಲಿ ವಾಸಿಸಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ತನಗೆ ಅವಮಾನ ಮಾಡಿದ್ದಕ್ಕೆ ಮುತ್ತುಕುಟ್ಟಿಗೆ ಮಗಳ ಮೇಲೆ ಸಿಟ್ಟು ಬಂದಿತ್ತು.

ಹೀಗಾಗಿ, ಮಗಳು ಊರಿಗೆ ವಾಪಾಸ್ ಬರುವುದನ್ನೇ ಕಾಯುತ್ತಿದ್ದ ಅವರು ನಿನ್ನೆ ಸಂಜೆ ಮನೆಯಲ್ಲಿ ರೇಷ್ಮಾ ಮತ್ತು ಆಕೆಯ ಪತಿ ಮಾಣಿಕರಾಜ್ ಮಾತ್ರ ಇದ್ದಾಗ ಮುತ್ತುಕುಟ್ಟಿ ಅಲ್ಲಿಗೆ ಹೋಗಿ ಇಬ್ಬರನ್ನೂ ಕೊಚ್ಚಿ ಕೊಲೆ ಮಾಡಿದ್ದಾರೆ. ನಂತರ ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: Murder: ವ್ಯಕ್ತಿಯನ್ನು ಕೊಂದು, ಅವರದೇ ಮನೆಯ ಫ್ರಿಡ್ಜ್​ನಲ್ಲಿ ಶವವಿಟ್ಟು ಹೋದ ಹಂತಕರು!

ಈ ಘಟನೆಯ ಬಗ್ಗೆ ಮಾಹಿತಿ ಆಧರಿಸಿ, ಎಟ್ಟಾಯಪುರಂ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಟ್ಯುಟಿಕೋರಿನ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಂತರ ಪೊಲೀಸರು ಮುತ್ತುಕುಟ್ಟಿಯನ್ನು ಕೂಡ ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ