AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಪ್ರೀತಿಸಿ ಮದುವೆಯಾದ ಮಗಳು- ಅಳಿಯನನ್ನು ಕೊಚ್ಚಿ ಕೊಂದ ತಂದೆ

Tamil Nadu News: ಮುತ್ತುಕುಟ್ಟಿ ಅವರ ಪುತ್ರಿ ರೇಷ್ಮಾ (20) ಅದೇ ಊರಿನಲ್ಲಿ ದಿನಗೂಲಿ ನೌಕರನಾಗಿದ್ದ ಮಾಣಿಕ ರಾಜ್ (26) ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಅವರ ಮದುವೆಗೆ ತಂದೆಯ ವಿರೋಧವಿತ್ತು.

Murder: ಪ್ರೀತಿಸಿ ಮದುವೆಯಾದ ಮಗಳು- ಅಳಿಯನನ್ನು ಕೊಚ್ಚಿ ಕೊಂದ ತಂದೆ
ಸಾಂದರ್ಭಿಕ ಚಿತ್ರImage Credit source: India Today
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 26, 2022 | 1:46 PM

ಚೆನ್ನೈ: ತಮಿಳುನಾಡಿನ ಟುಟಿಕೋರಿನ್ ಜಿಲ್ಲೆಯಲ್ಲಿ ತಂದೆಯೊಬ್ಬ ತನ್ನ ಮಗಳು ಮತ್ತು ಅಳಿಯನನ್ನು ಕೊಚ್ಚಿ (Murder) ಕೊಂದಿದ್ದಾನೆ. ತನ್ನ ಒಪ್ಪಿಗೆಯಿಲ್ಲದೆ ಮಗಳು ಪ್ರೀತಿಸಿ ವಿವಾಹವಾಗಿದ್ದಕ್ಕೆ ಆಕ್ರೋಶಗೊಂಡು ಆ ವ್ಯಕ್ತಿ ತನ್ನ ಮಗಳು- ಅಳಿಯನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆ ಮಾಡಿದ ವ್ಯಕ್ತಿಯನ್ನು ಮುತ್ತುಕುಟ್ಟಿ (50) ಎಂದು ಗುರುತಿಸಲಾಗಿದ್ದು, ಟುಟಿಕೋರಿನ್ (Tuticorin) ಜಿಲ್ಲೆಯ ಕೋವಿಲ್‌ಪಟ್ಟಿ ನಗರದ ಸಮೀಪದ ವೀರಪಟ್ಟಿ ಗ್ರಾಮದಲ್ಲಿ ಅವರು ವಾಸವಾಗಿದ್ದಾರೆ.

ಮುತ್ತುಕುಟ್ಟಿ ಅವರ ಪುತ್ರಿ ರೇಷ್ಮಾ (20) ಕೋವಿಲ್‌ಪಟ್ಟಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಡಿಗ್ರಿ ವಿದ್ಯಾರ್ಥಿನಿಯಾಗಿದ್ದಳು. ಆಕೆ ಅದೇ ಊರಿನಲ್ಲಿ ದಿನಗೂಲಿ ನೌಕರನಾಗಿದ್ದ ಮಾಣಿಕ ರಾಜ್ (26) ಎಂಬಾತನನ್ನು ಪ್ರೀತಿಸುತ್ತಿದ್ದಳು. ಮುತ್ತುಕುಟ್ಟಿಗೆ ಅವರಿಬ್ಬರ ಸಂಬಂಧ ಇಷ್ಟವಿರಲಿಲ್ಲ. ಅಪ್ಪ ತಮ್ಮ ಸಂಬಂಧವನ್ನು ಒಪ್ಪದಿದ್ದರೂ ರೇಷ್ಮಾ ಹಠದಿಂದ ತಾನು ಇಷ್ಟಪಟ್ಟವನನ್ನೇ ಮದುವೆಯಾಗಿದ್ದಳು.

ಇವರ ಪ್ರೀತಿಗೆ ರೇಷ್ಮಾಳ ತಂದೆ ಮುತ್ತುಕುಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕೆಲವು ದಿನಗಳ ಹಿಂದೆ ಮದುವೆಯಾಗಿದ್ದ ದಂಪತಿ ಎರಡು ದಿನಗಳ ಹಿಂದಷ್ಟೇ ತಮ್ಮ ಗ್ರಾಮಕ್ಕೆ ವಾಪಾಸ್ ಬಂದಿದ್ದರು. ಹೊಸ ಜೀವನ ಕಟ್ಟಿಕೊಳ್ಳುವ ಉತ್ಸಾಹದಲ್ಲಿದ್ದ ಆ ದಂಪತಿಗೆ ಆ ಯುವತಿಯ ತಂದೆಯೇ ವಿಲನ್ ಆಗಿದ್ದಾರೆ.

ಇದನ್ನೂ ಓದಿ: Murder: ಡ್ರಗ್ಸ್​​ ಸೇವಿಸುತ್ತಿದ್ದ ಮಗನನ್ನು ಕತ್ತರಿಸಿ, ಪ್ಲಾಸ್ಟಿಕ್ ಬ್ಯಾಗ್​ನಲ್ಲಿ ತುಂಬಿ ಬಿಸಾಡಿದ ಅಪ್ಪ!

ಮಗಳ ಮದುವೆಗೆ ಮುತ್ತುಕುಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ನಂತರ ಗ್ರಾಮ ಪಂಚಾಯತಿ ಮೂಲಕ ಇಬ್ಬರಿಗೂ ಆ ಗ್ರಾಮದಲ್ಲಿ ವಾಸಿಸಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ತನಗೆ ಅವಮಾನ ಮಾಡಿದ್ದಕ್ಕೆ ಮುತ್ತುಕುಟ್ಟಿಗೆ ಮಗಳ ಮೇಲೆ ಸಿಟ್ಟು ಬಂದಿತ್ತು.

ಹೀಗಾಗಿ, ಮಗಳು ಊರಿಗೆ ವಾಪಾಸ್ ಬರುವುದನ್ನೇ ಕಾಯುತ್ತಿದ್ದ ಅವರು ನಿನ್ನೆ ಸಂಜೆ ಮನೆಯಲ್ಲಿ ರೇಷ್ಮಾ ಮತ್ತು ಆಕೆಯ ಪತಿ ಮಾಣಿಕರಾಜ್ ಮಾತ್ರ ಇದ್ದಾಗ ಮುತ್ತುಕುಟ್ಟಿ ಅಲ್ಲಿಗೆ ಹೋಗಿ ಇಬ್ಬರನ್ನೂ ಕೊಚ್ಚಿ ಕೊಲೆ ಮಾಡಿದ್ದಾರೆ. ನಂತರ ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: Murder: ವ್ಯಕ್ತಿಯನ್ನು ಕೊಂದು, ಅವರದೇ ಮನೆಯ ಫ್ರಿಡ್ಜ್​ನಲ್ಲಿ ಶವವಿಟ್ಟು ಹೋದ ಹಂತಕರು!

ಈ ಘಟನೆಯ ಬಗ್ಗೆ ಮಾಹಿತಿ ಆಧರಿಸಿ, ಎಟ್ಟಾಯಪುರಂ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಟ್ಯುಟಿಕೋರಿನ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಂತರ ಪೊಲೀಸರು ಮುತ್ತುಕುಟ್ಟಿಯನ್ನು ಕೂಡ ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ