AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ತಾನು ಕೊಡಿಸಿದ್ದ ಮೊಬೈಲ್ ವಾಪಾಸ್​ ಕೊಡದ ಪ್ರೇಯಸಿಯ ಕತ್ತು ಸೀಳಿ ಕೊಂದ ಪ್ರೇಮಿ!

ಯುವತಿಯೊಬ್ಬಳು ತನ್ನ ಪ್ರೇಮಿ ತನಗೆ ಉಡುಗೊರೆಯಾಗಿ ನೀಡಿದ್ದ ಸ್ಮಾರ್ಟ್‌ಫೋನ್ ಹಿಂತಿರುಗಿಸಲು ನಿರಾಕರಿಸಿದ ಕಾರಣಕ್ಕೆ ಆಕೆಯ ಪ್ರಿಯಕರನೇ ಆಕೆಯನ್ನು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.

Murder: ತಾನು ಕೊಡಿಸಿದ್ದ ಮೊಬೈಲ್ ವಾಪಾಸ್​ ಕೊಡದ ಪ್ರೇಯಸಿಯ ಕತ್ತು ಸೀಳಿ ಕೊಂದ ಪ್ರೇಮಿ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 04, 2022 | 8:04 PM

ಪಾಕುರ್: ಪ್ರೇಮಿಗಳ ನಡುವೆ ಆಗಾಗ ಜಗಳ ನಡೆಯುತ್ತಲೇ ಇರುತ್ತದೆ. ಕೆಲವೊಮ್ಮೆ ಇದೇ ಸಣ್ಣಪುಟ್ಟ ಕಾರಣಗಳಿಗೆ ಸಂಬಂಧವೇ ಮುರಿದುಬಿದ್ದಿರುವ ಉದಾಹರಣೆಗಳೂ ಇವೆ. ಆದರೆ, ಜಾರ್ಖಂಡ್‌ನಲ್ಲಿ ಪ್ರೇಮಿಗಳ ನಡುವಿನ ಜಗಳದಿಂದ ಒಂದು ಪ್ರಾಣವೇ ಹೋಗಿದೆ. ಜಾರ್ಖಂಡ್​ನ ಪಾಕುರ್ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಪ್ರೇಮಿ ತನಗೆ ಉಡುಗೊರೆಯಾಗಿ ನೀಡಿದ್ದ ಸ್ಮಾರ್ಟ್‌ಫೋನ್ ಹಿಂತಿರುಗಿಸಲು ನಿರಾಕರಿಸಿದ ಕಾರಣಕ್ಕೆ ಆಕೆಯ ಪ್ರಿಯಕರನೇ ಆಕೆಯನ್ನು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.

ಮಹೇಶ್‌ಪುರ ಪೊಲೀಸ್ ಠಾಣೆಯ ವ್ಯಾಪ್ತಿಯ ನಿವಾಸಿಯಾಗಿರುವ ಯುವತಿ ಭಾನುವಾರ ರಾತ್ರಿಯಿಂದ ಫುಟ್‌ಬಾಲ್ ಪಂದ್ಯವನ್ನು ವೀಕ್ಷಿಸಲು 20 ವರ್ಷದ ತನ್ನ ಗೆಳೆಯನ ಜೊತೆ ಹೊರಗೆ ಹೋದವಳು ನಾಪತ್ತೆಯಾಗಿದ್ದಳು. ಸೋಮವಾರ ಬೆಳಗ್ಗೆ ನಿಗೂಢ ಸ್ಥಳದಲ್ಲಿ ಆಕೆಯ ಶವ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಆಕೆಯೊಂದಿಗೆ ಕಳೆದ ಎರಡು ವರ್ಷಗಳಿಂದ ಸಂಬಂಧ ಹೊಂದಿದ್ದ ಎಂದು ಯುವತಿಯ ಚಿಕ್ಕಪ್ಪ ತಿಳಿಸಿದ್ದಾರೆ. ಅವನು ಆಗಾಗ ಯುವತಿಯ ಮನೆಗೆ ಭೇಟಿ ನೀಡುತ್ತಿದ್ದ ಮತ್ತು ಅವಳ ಮನೆಯಲ್ಲೇ ಕೆಲವು ರಾತ್ರಿಗಳನ್ನು ಕಳೆದಿದ್ದ. ಆದರೆ, ಆರೋಪಿಯ ಮದುವೆಯನ್ನು ಆತನ ಮನೆಯವರು ಬೇರೊಬ್ಬರೊಂದಿಗೆ ನಿಶ್ಚಯಿಸಿದ್ದರು. ಹೀಗಾಗಿ, ಆತ ತಾನು ತನ್ನ ಹಳೇ ಪ್ರೇಯಸಿಗೆ ಉಡುಗೊರೆಯಾಗಿ ನೀಡಿದ್ದ ಸ್ಮಾರ್ಟ್‌ಫೋನ್ ವಾಪಾಸ್ ಪಡೆಯಲು ಬಯಸಿದ್ದ. ಆದರೆ ಆಕೆ ಅದನ್ನು ಹಿಂದಿರುಗಿಸಲು ಒಪ್ಪಿರಲಿಲ್ಲ.

ಈ ವಿಚಾರವಾಗಿ ಜಗಳವಾಡಿ ನಂತರ ಅವರಿಬ್ಬರೂ ಫುಟ್ಬಾಲ್ ಪಂದ್ಯ ವೀಕ್ಷಿಸಲು ತೆರಳಿದ್ದರು. ಮಫಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕರಬೋನಾದಿಂದ ಬಂಧಿತ ಆರೋಪಿ, ಪಂದ್ಯ ಮುಗಿಸಿ ಹಿಂತಿರುಗುವಾಗ ಆಕೆ ಮೊಬೈಲ್ ಹಿಂತಿರುಗಿಸಲು ನಿರಾಕರಿಸಿದ್ದರಿಂದ ಚೂಪಾದ ವಸ್ತುವಿನಿಂದ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಉಪವಿಭಾಗದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆಕೆಯನ್ನು ಕೊಲೆ ಮಾಡಿದ ನಂತರ ಆತ ಮೊಬೈಲ್ ಫೋನ್‌ನೊಂದಿಗೆ ಆ ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಮಹಿಳೆಯರು!

Murder: ಪ್ರೀತಿಸಲು ನಿರಾಕರಿಸಿದ್ದಕ್ಕೆ ಹಾಡಹಗಲೇ ಯುವತಿಯ ಕುತ್ತಿಗೆ ಸೀಳಿದ ಪಾಗಲ್ ಪ್ರೇಮಿ

Published On - 8:03 pm, Mon, 4 April 22

ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು