AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ತಾನು ಕೊಡಿಸಿದ್ದ ಮೊಬೈಲ್ ವಾಪಾಸ್​ ಕೊಡದ ಪ್ರೇಯಸಿಯ ಕತ್ತು ಸೀಳಿ ಕೊಂದ ಪ್ರೇಮಿ!

ಯುವತಿಯೊಬ್ಬಳು ತನ್ನ ಪ್ರೇಮಿ ತನಗೆ ಉಡುಗೊರೆಯಾಗಿ ನೀಡಿದ್ದ ಸ್ಮಾರ್ಟ್‌ಫೋನ್ ಹಿಂತಿರುಗಿಸಲು ನಿರಾಕರಿಸಿದ ಕಾರಣಕ್ಕೆ ಆಕೆಯ ಪ್ರಿಯಕರನೇ ಆಕೆಯನ್ನು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.

Murder: ತಾನು ಕೊಡಿಸಿದ್ದ ಮೊಬೈಲ್ ವಾಪಾಸ್​ ಕೊಡದ ಪ್ರೇಯಸಿಯ ಕತ್ತು ಸೀಳಿ ಕೊಂದ ಪ್ರೇಮಿ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 04, 2022 | 8:04 PM

Share

ಪಾಕುರ್: ಪ್ರೇಮಿಗಳ ನಡುವೆ ಆಗಾಗ ಜಗಳ ನಡೆಯುತ್ತಲೇ ಇರುತ್ತದೆ. ಕೆಲವೊಮ್ಮೆ ಇದೇ ಸಣ್ಣಪುಟ್ಟ ಕಾರಣಗಳಿಗೆ ಸಂಬಂಧವೇ ಮುರಿದುಬಿದ್ದಿರುವ ಉದಾಹರಣೆಗಳೂ ಇವೆ. ಆದರೆ, ಜಾರ್ಖಂಡ್‌ನಲ್ಲಿ ಪ್ರೇಮಿಗಳ ನಡುವಿನ ಜಗಳದಿಂದ ಒಂದು ಪ್ರಾಣವೇ ಹೋಗಿದೆ. ಜಾರ್ಖಂಡ್​ನ ಪಾಕುರ್ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಪ್ರೇಮಿ ತನಗೆ ಉಡುಗೊರೆಯಾಗಿ ನೀಡಿದ್ದ ಸ್ಮಾರ್ಟ್‌ಫೋನ್ ಹಿಂತಿರುಗಿಸಲು ನಿರಾಕರಿಸಿದ ಕಾರಣಕ್ಕೆ ಆಕೆಯ ಪ್ರಿಯಕರನೇ ಆಕೆಯನ್ನು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.

ಮಹೇಶ್‌ಪುರ ಪೊಲೀಸ್ ಠಾಣೆಯ ವ್ಯಾಪ್ತಿಯ ನಿವಾಸಿಯಾಗಿರುವ ಯುವತಿ ಭಾನುವಾರ ರಾತ್ರಿಯಿಂದ ಫುಟ್‌ಬಾಲ್ ಪಂದ್ಯವನ್ನು ವೀಕ್ಷಿಸಲು 20 ವರ್ಷದ ತನ್ನ ಗೆಳೆಯನ ಜೊತೆ ಹೊರಗೆ ಹೋದವಳು ನಾಪತ್ತೆಯಾಗಿದ್ದಳು. ಸೋಮವಾರ ಬೆಳಗ್ಗೆ ನಿಗೂಢ ಸ್ಥಳದಲ್ಲಿ ಆಕೆಯ ಶವ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಆಕೆಯೊಂದಿಗೆ ಕಳೆದ ಎರಡು ವರ್ಷಗಳಿಂದ ಸಂಬಂಧ ಹೊಂದಿದ್ದ ಎಂದು ಯುವತಿಯ ಚಿಕ್ಕಪ್ಪ ತಿಳಿಸಿದ್ದಾರೆ. ಅವನು ಆಗಾಗ ಯುವತಿಯ ಮನೆಗೆ ಭೇಟಿ ನೀಡುತ್ತಿದ್ದ ಮತ್ತು ಅವಳ ಮನೆಯಲ್ಲೇ ಕೆಲವು ರಾತ್ರಿಗಳನ್ನು ಕಳೆದಿದ್ದ. ಆದರೆ, ಆರೋಪಿಯ ಮದುವೆಯನ್ನು ಆತನ ಮನೆಯವರು ಬೇರೊಬ್ಬರೊಂದಿಗೆ ನಿಶ್ಚಯಿಸಿದ್ದರು. ಹೀಗಾಗಿ, ಆತ ತಾನು ತನ್ನ ಹಳೇ ಪ್ರೇಯಸಿಗೆ ಉಡುಗೊರೆಯಾಗಿ ನೀಡಿದ್ದ ಸ್ಮಾರ್ಟ್‌ಫೋನ್ ವಾಪಾಸ್ ಪಡೆಯಲು ಬಯಸಿದ್ದ. ಆದರೆ ಆಕೆ ಅದನ್ನು ಹಿಂದಿರುಗಿಸಲು ಒಪ್ಪಿರಲಿಲ್ಲ.

ಈ ವಿಚಾರವಾಗಿ ಜಗಳವಾಡಿ ನಂತರ ಅವರಿಬ್ಬರೂ ಫುಟ್ಬಾಲ್ ಪಂದ್ಯ ವೀಕ್ಷಿಸಲು ತೆರಳಿದ್ದರು. ಮಫಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕರಬೋನಾದಿಂದ ಬಂಧಿತ ಆರೋಪಿ, ಪಂದ್ಯ ಮುಗಿಸಿ ಹಿಂತಿರುಗುವಾಗ ಆಕೆ ಮೊಬೈಲ್ ಹಿಂತಿರುಗಿಸಲು ನಿರಾಕರಿಸಿದ್ದರಿಂದ ಚೂಪಾದ ವಸ್ತುವಿನಿಂದ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಉಪವಿಭಾಗದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆಕೆಯನ್ನು ಕೊಲೆ ಮಾಡಿದ ನಂತರ ಆತ ಮೊಬೈಲ್ ಫೋನ್‌ನೊಂದಿಗೆ ಆ ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಮಹಿಳೆಯರು!

Murder: ಪ್ರೀತಿಸಲು ನಿರಾಕರಿಸಿದ್ದಕ್ಕೆ ಹಾಡಹಗಲೇ ಯುವತಿಯ ಕುತ್ತಿಗೆ ಸೀಳಿದ ಪಾಗಲ್ ಪ್ರೇಮಿ

Published On - 8:03 pm, Mon, 4 April 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ