AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು

ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು
ಸೂಟ್​ಕೇಸ್​ನಲ್ಲಿದ್ದ ಶವ
TV9 Web
| Edited By: |

Updated on: Mar 25, 2022 | 8:54 PM

Share

ನವದೆಹಲಿ: 2 ದಿನಗಳ ಹಿಂದೆ ನಾಪತ್ತೆಯಾಗಿದ್ದ 17 ವರ್ಷದ ಯುವಕನ ಶವ (Dead Body) ಸೂಟ್​ಕೇಸ್​ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಾಯುವ್ಯ ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಇಂದು ಬೆಳಗ್ಗೆ 17 ವರ್ಷದ ಯುವಕನ ಮೃತದೇಹವನ್ನು ಸೂಟ್​ಕೇಸ್​ನಲ್ಲಿ ತುಂಬಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 2 ದಿನಗಳ ಹಿಂದೆ ರೋಹಿಣಿ ಪ್ರದೇಶದಿಂದ ಈ ಯುವಕ ನಾಪತ್ತೆಯಾಗಿದ್ದ. ಈ ಕುರಿತು ಆತನ ಪೋಷಕರು ದೂರು ನೀಡಿದ್ದರು. ಇಂದು ಬೆಳಗ್ಗೆ 7 ಗಂಟೆಗೆ ಆ ಯುವಕನ ಮೃತದೇಹದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದೆ.

ವೈ-ಬ್ಲಾಕ್ ಮಂಗೋಲ್‌ಪುರಿ ಎದುರಿನ ಮುಖ್ಯ ರಸ್ತೆಯ ಪೀರ್ ಬಾಬಾ ಮಜಾರ್ ಬಳಿಯಲ್ಲಿ ಆ ಯುವಕನ ಶವ ಪತ್ತೆಯಾಗಿದೆ. ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾಣೆಯಾದ ವ್ಯಕ್ತಿಯ ದಾಖಲೆಗಳನ್ನು ಪರಿಶೀಲಿಸಲು ಎಲ್ಲಾ ನೆರೆಯ ಪೊಲೀಸ್ ಠಾಣೆಗಳು ಮತ್ತು ಜಿಲ್ಲೆಗಳಿಗೆ ತಿಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಆ ಮೃತದೇಹವು ರೋಹಿಣಿ ಸೆಕ್ಟರ್ -1ರ ನಿವಾಸಿ 17 ವರ್ಷದ ಯುವಕನದ್ದಾಗಿದೆ ಎಂದು ಪತ್ತೆಯಾಗಿತ್ತು. ಆ ಯುವಕ ಕಾಣೆಯಾದ ವರದಿಯನ್ನು ಆಧರಿಸಿ, ಶುಕ್ರವಾರ ದಕ್ಷಿಣ ರೋಹಿಣಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 363 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: Murder: ಕುಡಿದು ಅಮ್ಮನಿಗೆ ಹೊಡೆದು ಹಿಂಸಿಸುತ್ತಿದ್ದ ಅಪ್ಪನನ್ನೇ ಕೊಲೆ ಮಾಡಿದ ಮಗ

Murder: ಮನೆಯೊಳಗೆ ಮಗ, ಸೊಸೆ, ಮೊಮ್ಮಕ್ಕಳನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್