AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು

ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು
ಸೂಟ್​ಕೇಸ್​ನಲ್ಲಿದ್ದ ಶವ
TV9 Web
| Edited By: |

Updated on: Mar 25, 2022 | 8:54 PM

Share

ನವದೆಹಲಿ: 2 ದಿನಗಳ ಹಿಂದೆ ನಾಪತ್ತೆಯಾಗಿದ್ದ 17 ವರ್ಷದ ಯುವಕನ ಶವ (Dead Body) ಸೂಟ್​ಕೇಸ್​ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಾಯುವ್ಯ ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಇಂದು ಬೆಳಗ್ಗೆ 17 ವರ್ಷದ ಯುವಕನ ಮೃತದೇಹವನ್ನು ಸೂಟ್​ಕೇಸ್​ನಲ್ಲಿ ತುಂಬಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 2 ದಿನಗಳ ಹಿಂದೆ ರೋಹಿಣಿ ಪ್ರದೇಶದಿಂದ ಈ ಯುವಕ ನಾಪತ್ತೆಯಾಗಿದ್ದ. ಈ ಕುರಿತು ಆತನ ಪೋಷಕರು ದೂರು ನೀಡಿದ್ದರು. ಇಂದು ಬೆಳಗ್ಗೆ 7 ಗಂಟೆಗೆ ಆ ಯುವಕನ ಮೃತದೇಹದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದೆ.

ವೈ-ಬ್ಲಾಕ್ ಮಂಗೋಲ್‌ಪುರಿ ಎದುರಿನ ಮುಖ್ಯ ರಸ್ತೆಯ ಪೀರ್ ಬಾಬಾ ಮಜಾರ್ ಬಳಿಯಲ್ಲಿ ಆ ಯುವಕನ ಶವ ಪತ್ತೆಯಾಗಿದೆ. ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾಣೆಯಾದ ವ್ಯಕ್ತಿಯ ದಾಖಲೆಗಳನ್ನು ಪರಿಶೀಲಿಸಲು ಎಲ್ಲಾ ನೆರೆಯ ಪೊಲೀಸ್ ಠಾಣೆಗಳು ಮತ್ತು ಜಿಲ್ಲೆಗಳಿಗೆ ತಿಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಆ ಮೃತದೇಹವು ರೋಹಿಣಿ ಸೆಕ್ಟರ್ -1ರ ನಿವಾಸಿ 17 ವರ್ಷದ ಯುವಕನದ್ದಾಗಿದೆ ಎಂದು ಪತ್ತೆಯಾಗಿತ್ತು. ಆ ಯುವಕ ಕಾಣೆಯಾದ ವರದಿಯನ್ನು ಆಧರಿಸಿ, ಶುಕ್ರವಾರ ದಕ್ಷಿಣ ರೋಹಿಣಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 363 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: Murder: ಕುಡಿದು ಅಮ್ಮನಿಗೆ ಹೊಡೆದು ಹಿಂಸಿಸುತ್ತಿದ್ದ ಅಪ್ಪನನ್ನೇ ಕೊಲೆ ಮಾಡಿದ ಮಗ

Murder: ಮನೆಯೊಳಗೆ ಮಗ, ಸೊಸೆ, ಮೊಮ್ಮಕ್ಕಳನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?