AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಹೆಂಡತಿಗೆ ಹೊಡೆದು ಕೊಂದು, ಆಕಸ್ಮಿಕವಾಗಿ ಬಿದ್ದು ಸತ್ತಿದ್ದಾಳೆಂದು ಕತೆ ಕಟ್ಟಿದ ಗಂಡ

ರೋಷನಿ (22) ಎಂಬ ಮಹಿಳೆಯ ತೀವ್ರವಾಗಿ ಗಾಯಗೊಂಡಿದ್ದರಿಂದ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವೇಳೆ ಆಕೆ ಪ್ರಜ್ಞಾಹೀನಳಾಗಿದ್ದಳು. ಆರೋಪಿಯು ತನ್ನ ಹೆಂಡತಿ ಮಹಡಿಯಿಂದ ಬಿದ್ದು ಪ್ರಜ್ಞಾಹೀನಳಾಗಿದ್ದಾಳೆ ಎಂದು ವೈದ್ಯರಿಗೆ ತಿಳಿಸಿದ್ದ.

Murder: ಹೆಂಡತಿಗೆ ಹೊಡೆದು ಕೊಂದು, ಆಕಸ್ಮಿಕವಾಗಿ ಬಿದ್ದು ಸತ್ತಿದ್ದಾಳೆಂದು ಕತೆ ಕಟ್ಟಿದ ಗಂಡ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 28, 2022 | 7:23 PM

Share

ಮುಂಬೈ: ಮಹಾರಾಷ್ಟ್ರದ ಧಾರಾವಿಯಲ್ಲಿ 27 ವರ್ಷದ ಯುವಕನೊಬ್ಬ ತನ್ನ ಪತ್ನಿಯನ್ನು ಹೊಡೆದು ಕೊಂದಿದ್ದು (Murder), ಬಳಿಕ ಅದನ್ನು ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಾನೆ. ತನ್ನ ಹೆಂಡತಿಯನ್ನು ಕೊಲೆ ಮಾಡಿದ ಆರೋಪಿಯನ್ನು ರಾಹುಲ್ ಜೈಸ್ವಾಲ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ವರದಿಯ ಪ್ರಕಾರ, ಮರಣೋತ್ತರ ಪರೀಕ್ಷೆಯ ವರದಿಯಿಂದ ಆ ಮಹಿಳೆ ಕೊಲೆಯಾಗಿದ್ದಾಳೆ ಎಂಬುದು ದೃಢವಾಯಿತು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡು ರಾಹುಲ್​ನನ್ನು ಬಂಧಿಸಿದ್ದಾರೆ.

ಕಳೆದ ವಾರ ಈ ಘಟನೆ ನಡೆದಿದ್ದು, ರೋಷನಿ (22) ಎಂಬ ಮಹಿಳೆಯ ತೀವ್ರವಾಗಿ ಗಾಯಗೊಂಡಿದ್ದರಿಂದ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವೇಳೆ ಆಕೆ ಪ್ರಜ್ಞಾಹೀನಳಾಗಿದ್ದಳು. ಆರೋಪಿಯು ತನ್ನ ಹೆಂಡತಿ ಮಹಡಿಯಿಂದ ಬಿದ್ದು ಪ್ರಜ್ಞಾಹೀನಳಾಗಿದ್ದಾಳೆ ಎಂದು ವೈದ್ಯರಿಗೆ ತಿಳಿಸಿದ್ದ. ಆದರೆ, ಆಘಾತಕಾರಿ ಸಂಗತಿಯೆಂದರೆ, ಅದಾದ ಸ್ವಲ್ಪ ಸಮಯದ ನಂತರ ಸಂತ್ರಸ್ತೆ ಸಾವನ್ನಪ್ಪಿದ್ದಳು. ಈ ಕುರಿತು ಪೊಲೀಸ್ ತನಿಖೆಯ ಸಂದರ್ಭದಲ್ಲಿ ಆಕೆ ಆಕಸ್ಮಿಕವಾಗಿ ಸಾವನ್ನಪ್ಪಿಲ್ಲ, ಅದೊಂದು ಕೊಲೆ ಎಂದು ಸ್ಪಷ್ಟವಾಗಿತ್ತು.

ಆ ಮಹಿಳೆಯ ಮರಣೋತ್ತರ ಪರೀಕ್ಷೆಯಲ್ಲಿ ಆಕೆ ಆಂತರಿಕ ಗಾಯಗಳಿಂದಾಗಿ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ದಾಖಲಾಗಿತ್ತು. ಈ ಕುರಿತು ಪೊಲೀಸರು ವೈದ್ಯರನ್ನು ವಿಚಾರಿಸಿದಾಗ ಯಾರಾದರೂ ಆಕೆಗೆ ಥಳಿಸಿರಬಹುದು. ಅದೇ ಕಾರಣದಿಂದ ಗಾಯವಾಗಿ ಸಾವನ್ನಪ್ಪಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ನಡೆಸಿ, ಮೃತ ಮಹಿಳೆಯ ಗಂಡನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸಂತ್ರಸ್ತೆಯ ನೆರೆಹೊರೆಯವರನ್ನೂ ಸಹ ವಿಚಾರಣೆಗೆ ಒಳಪಡಿಸಲಾಗಿದೆ. ಆಗ ಆ ಗಂಡ-ಹೆಂಡತಿಯ ನಡುವೆ ಉತ್ತಮ ಸಂಬಂಧವಿರಲಿಲ್ಲ, ಅವರಿಬ್ಬರೂ ಸದಾ ಜಗಳವಾಡುತ್ತಿದ್ದರು ಎಂದು ಪೊಲೀಸರಿಗೆ ಗೊತ್ತಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಕುರಿತು ಕೂಲಂಕುಷವಾಗಿ ತನಿಖೆ ನಡೆಸಿದಾಗ ಮೃತ ಮಹಿಳೆ ತನ್ನ ಪತಿಗೆ ವಿವಾಹೇತರ ಸಂಬಂಧವಿದೆ ಎಂದು ಅನುಮಾನದಿಂದ ಆತನೊಂದಿಗೆ ಜಗಳವಾಡುತ್ತಿದ್ದುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ವಿಚಾರಣೆ ವೇಳೆ ರಾಹುಲ್ ತಾನು ತನ್ನ ಹೆಂಡತಿಯನ್ನು ಹೊಡೆದು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದೀಗ ಆತ ಪೊಲೀಸರ ವಶದಲ್ಲಿದ್ದಾನೆ.

ಇದನ್ನೂ ಓದಿ: Murder: ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!

Murder: ಮರುಮದುವೆಯಾಗಲು ಮುಂದಾದ 80 ವರ್ಷದ ತಂದೆಯನ್ನು ಕೊಚ್ಚಿ ಕೊಂದ ಮಗ!

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ