AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಹೆಂಡತಿಗೆ ಹೊಡೆದು ಕೊಂದು, ಆಕಸ್ಮಿಕವಾಗಿ ಬಿದ್ದು ಸತ್ತಿದ್ದಾಳೆಂದು ಕತೆ ಕಟ್ಟಿದ ಗಂಡ

ರೋಷನಿ (22) ಎಂಬ ಮಹಿಳೆಯ ತೀವ್ರವಾಗಿ ಗಾಯಗೊಂಡಿದ್ದರಿಂದ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವೇಳೆ ಆಕೆ ಪ್ರಜ್ಞಾಹೀನಳಾಗಿದ್ದಳು. ಆರೋಪಿಯು ತನ್ನ ಹೆಂಡತಿ ಮಹಡಿಯಿಂದ ಬಿದ್ದು ಪ್ರಜ್ಞಾಹೀನಳಾಗಿದ್ದಾಳೆ ಎಂದು ವೈದ್ಯರಿಗೆ ತಿಳಿಸಿದ್ದ.

Murder: ಹೆಂಡತಿಗೆ ಹೊಡೆದು ಕೊಂದು, ಆಕಸ್ಮಿಕವಾಗಿ ಬಿದ್ದು ಸತ್ತಿದ್ದಾಳೆಂದು ಕತೆ ಕಟ್ಟಿದ ಗಂಡ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Feb 28, 2022 | 7:23 PM

Share

ಮುಂಬೈ: ಮಹಾರಾಷ್ಟ್ರದ ಧಾರಾವಿಯಲ್ಲಿ 27 ವರ್ಷದ ಯುವಕನೊಬ್ಬ ತನ್ನ ಪತ್ನಿಯನ್ನು ಹೊಡೆದು ಕೊಂದಿದ್ದು (Murder), ಬಳಿಕ ಅದನ್ನು ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಾನೆ. ತನ್ನ ಹೆಂಡತಿಯನ್ನು ಕೊಲೆ ಮಾಡಿದ ಆರೋಪಿಯನ್ನು ರಾಹುಲ್ ಜೈಸ್ವಾಲ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ವರದಿಯ ಪ್ರಕಾರ, ಮರಣೋತ್ತರ ಪರೀಕ್ಷೆಯ ವರದಿಯಿಂದ ಆ ಮಹಿಳೆ ಕೊಲೆಯಾಗಿದ್ದಾಳೆ ಎಂಬುದು ದೃಢವಾಯಿತು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡು ರಾಹುಲ್​ನನ್ನು ಬಂಧಿಸಿದ್ದಾರೆ.

ಕಳೆದ ವಾರ ಈ ಘಟನೆ ನಡೆದಿದ್ದು, ರೋಷನಿ (22) ಎಂಬ ಮಹಿಳೆಯ ತೀವ್ರವಾಗಿ ಗಾಯಗೊಂಡಿದ್ದರಿಂದ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವೇಳೆ ಆಕೆ ಪ್ರಜ್ಞಾಹೀನಳಾಗಿದ್ದಳು. ಆರೋಪಿಯು ತನ್ನ ಹೆಂಡತಿ ಮಹಡಿಯಿಂದ ಬಿದ್ದು ಪ್ರಜ್ಞಾಹೀನಳಾಗಿದ್ದಾಳೆ ಎಂದು ವೈದ್ಯರಿಗೆ ತಿಳಿಸಿದ್ದ. ಆದರೆ, ಆಘಾತಕಾರಿ ಸಂಗತಿಯೆಂದರೆ, ಅದಾದ ಸ್ವಲ್ಪ ಸಮಯದ ನಂತರ ಸಂತ್ರಸ್ತೆ ಸಾವನ್ನಪ್ಪಿದ್ದಳು. ಈ ಕುರಿತು ಪೊಲೀಸ್ ತನಿಖೆಯ ಸಂದರ್ಭದಲ್ಲಿ ಆಕೆ ಆಕಸ್ಮಿಕವಾಗಿ ಸಾವನ್ನಪ್ಪಿಲ್ಲ, ಅದೊಂದು ಕೊಲೆ ಎಂದು ಸ್ಪಷ್ಟವಾಗಿತ್ತು.

ಆ ಮಹಿಳೆಯ ಮರಣೋತ್ತರ ಪರೀಕ್ಷೆಯಲ್ಲಿ ಆಕೆ ಆಂತರಿಕ ಗಾಯಗಳಿಂದಾಗಿ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ದಾಖಲಾಗಿತ್ತು. ಈ ಕುರಿತು ಪೊಲೀಸರು ವೈದ್ಯರನ್ನು ವಿಚಾರಿಸಿದಾಗ ಯಾರಾದರೂ ಆಕೆಗೆ ಥಳಿಸಿರಬಹುದು. ಅದೇ ಕಾರಣದಿಂದ ಗಾಯವಾಗಿ ಸಾವನ್ನಪ್ಪಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ನಡೆಸಿ, ಮೃತ ಮಹಿಳೆಯ ಗಂಡನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸಂತ್ರಸ್ತೆಯ ನೆರೆಹೊರೆಯವರನ್ನೂ ಸಹ ವಿಚಾರಣೆಗೆ ಒಳಪಡಿಸಲಾಗಿದೆ. ಆಗ ಆ ಗಂಡ-ಹೆಂಡತಿಯ ನಡುವೆ ಉತ್ತಮ ಸಂಬಂಧವಿರಲಿಲ್ಲ, ಅವರಿಬ್ಬರೂ ಸದಾ ಜಗಳವಾಡುತ್ತಿದ್ದರು ಎಂದು ಪೊಲೀಸರಿಗೆ ಗೊತ್ತಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಕುರಿತು ಕೂಲಂಕುಷವಾಗಿ ತನಿಖೆ ನಡೆಸಿದಾಗ ಮೃತ ಮಹಿಳೆ ತನ್ನ ಪತಿಗೆ ವಿವಾಹೇತರ ಸಂಬಂಧವಿದೆ ಎಂದು ಅನುಮಾನದಿಂದ ಆತನೊಂದಿಗೆ ಜಗಳವಾಡುತ್ತಿದ್ದುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ವಿಚಾರಣೆ ವೇಳೆ ರಾಹುಲ್ ತಾನು ತನ್ನ ಹೆಂಡತಿಯನ್ನು ಹೊಡೆದು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದೀಗ ಆತ ಪೊಲೀಸರ ವಶದಲ್ಲಿದ್ದಾನೆ.

ಇದನ್ನೂ ಓದಿ: Murder: ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!

Murder: ಮರುಮದುವೆಯಾಗಲು ಮುಂದಾದ 80 ವರ್ಷದ ತಂದೆಯನ್ನು ಕೊಚ್ಚಿ ಕೊಂದ ಮಗ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ