AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನಾಲ್ಕು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ; ಬೆಂಗಳೂರಿನಲ್ಲಿ ಘಟನೆ

ಊಟ ಮಾಡಿ ಫೋಟೋ ತೆಗೆಸಿಕೊಂಡು ಬರ್ತಿನಿ ಎಂದು ಹರೀಶ್ ಹೊರಗೆ ತೆರಳಿದ್ದ. ಪೊಲೀಸ್ ಠಾಣೆಯಿಂದ ಹೊರಗೆ ಬಂದಿದ್ದ ಹರೀಶ್, ಬಾಣಸವಾಡಿ ಪೊಲೀಸ್ ಠಾಣೆಯಿಂದ ಸ್ವಲ್ಪ ದೂರಕ್ಕೆ ಹೋಗುತ್ತಿದ್ದಂತೆ ಆತನ ಮೇಲೆ ಹಲ್ಲೆ ಮಾಡಲಾಗಿದೆ.

Crime News: ನಾಲ್ಕು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ; ಬೆಂಗಳೂರಿನಲ್ಲಿ ಘಟನೆ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on: Jul 28, 2021 | 3:52 PM

Share

ಬೆಂಗಳೂರು: ತಲೆಯ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ಇಂದು (ಜುಲೈ 28) ನಡೆದಿದೆ. ಹರೀಶ್ ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ ಹರೀಶ್ ಕೂಡ ಸಾಮಾನ್ಯನಲ್ಲ. ಆತನೂ ಬಾಣಸವಾಡಿಯ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅರೋಪಿಯಾಗಿದ್ದಾನೆ. ಹೀಗಾಗಿ ಈ ಕೊಲೆ ಪ್ರಕರಣ ಮಹತ್ವ ಪಡೆದುಕೊಂಡಿದೆ.

ನಾಲ್ಕು ಪ್ರಕರಣಗಳಲ್ಲಿ ಆರೋಪದಲ್ಲಿರುವ ಹರೀಶ್, ಬಾಣಸವಾಡಿ ಬಿಟ್ಟು ಬಸವೇಶ್ವರ ನಗರದಲ್ಲಿ ವಾಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ಮಧ್ಯೆ ಇಂದು ಬಾಣಸವಾಡಿ ಪೊಲೀಸ್ ಠಾಣೆಗೆ ಹರೀಶ್ ಅಗಮಿಸಿದ್ದ. ಹರೀಶ್​ಗೆ ಸಿಆರ್​ಪಿಸಿ 110 ಕೇಸ್ ಹಾಕಿ, ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಲು ಪೊಲೀಸರು ಠಾಣೆಗೆ ಕರೆಸಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಈ ವೇಳೆ, ಊಟ ಮಾಡಿ ಫೋಟೋ ತೆಗೆಸಿಕೊಂಡು ಬರ್ತಿನಿ ಎಂದು ಹರೀಶ್ ಹೊರಗೆ ತೆರಳಿದ್ದ. ಪೊಲೀಸ್ ಠಾಣೆಯಿಂದ ಹೊರಗೆ ಬಂದಿದ್ದ ಹರೀಶ್, ಬಾಣಸವಾಡಿ ಪೊಲೀಸ್ ಠಾಣೆಯಿಂದ ಸ್ವಲ್ಪ ದೂರಕ್ಕೆ ಹೋಗುತ್ತಿದ್ದಂತೆ ಆತನ ಮೇಲೆ ಹಲ್ಲೆ ಮಾಡಲಾಗಿದೆ.

ಬೈಕ್ ನಲ್ಲಿ ಹೋಗ್ತಾ ಇದ್ದಾಗ ಅಡ್ಡಗಟ್ಟಿ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಕಾರಿನಲ್ಲಿ ಬಂದು ಹರೀಶ್ ಕೊಲೆ ನಡೆಸಿ ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಶರಣಪ್ಪ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮಾತನಾಡುವ ನೆಪದಲ್ಲಿ ಕರೆಸಿ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಯುವಕನ ಭೀಕರ ಕೊಲೆ

Crime News: 26 ವರ್ಷದ ಹಿಂದಿನ ಕೊಲೆ ಆರೋಪ ಸಾಬೀತು; ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ

(Murder near Bengaluru Banasavadi Police Station Crime News Death)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ