AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ದೃಶ್ಯ ಸಿನಿಮಾ ರೀತಿಯಲ್ಲೇ ಕೊಲೆ; ಗಂಡನನ್ನು ಕೊಂದು, ಶವದ ಮೇಲೆ ಟ್ಯಾಂಕ್ ಕಟ್ಟಿದ ಹೆಂಡತಿ!

ಮಹಿಳೆಯೊಬ್ಬಳು ತನ್ನ ಪ್ರಿಯಕರ ಮತ್ತು ಇನ್ನೊಬ್ಬ ಸ್ನೇಹಿತನ ಸಹಾಯದಿಂದ ಪತಿಯನ್ನು ಕೊಂದಿದ್ದಾಳೆ. ನಂತರ ಆ ಶವವನ್ನು ನಿರ್ಮಾಣ ಹಂತದಲ್ಲಿದ್ದ ಪ್ಲಾಟ್‌ನಲ್ಲಿ ಹೂತಿದ್ದಾಳೆ.

Murder: ದೃಶ್ಯ ಸಿನಿಮಾ ರೀತಿಯಲ್ಲೇ ಕೊಲೆ; ಗಂಡನನ್ನು ಕೊಂದು, ಶವದ ಮೇಲೆ ಟ್ಯಾಂಕ್ ಕಟ್ಟಿದ ಹೆಂಡತಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 16, 2023 | 6:31 PM

Share

ಘಾಜಿಯಾಬಾದ್: ಮಲಯಾಳಂನಲ್ಲಿ ಬಂದ ದೃಶ್ಯಂ ಸಿನಿಮಾ (Drishyam Movie) ಸಿನಿಪ್ರಿಯರನ್ನು ಕುರ್ಚಿಯ ತುದಿಯಲ್ಲಿ ಕೂರುವಂತೆ ಮಾಡಿತ್ತು. ಕೊನೆಗೆ ಈ ಸಿನಿಮಾ ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳಿಗೆ ರೀಮೇಕ್ ಕೂಡ ಆಗಿತ್ತು. ಬಳಿಕ ದೃಶ್ಯಂ 2 ಸಿನಿಮಾ ಕೂಡ ಬಂದಿತ್ತು. ಈ ಸಿನಿಮಾದ ಕತೆಯನ್ನೇ ಹೋಲುವ ರೀತಿಯಲ್ಲಿ ನಡೆದ ಕೊಲೆಯೊಂದು ಘಾಜಿಯಾಬಾದ್​ನಲ್ಲಿ (Ghaziabad) ಬಯಲಾಗಿದೆ. ಪ್ರೇಮಿ ಮತ್ತು ಇನ್ನೋರ್ವ ಗೆಳೆಯನ ಸಹಾಯದಿಂದ ತನ್ನ ಗಂಡನನ್ನು ಕೊಂದಿದ್ದ ಹೆಂಡತಿ ಕೊನೆಗೂ ಸಿಕ್ಕಿಬಿದ್ದಿದ್ದಾಳೆ.

ಘಾಜಿಯಾಬಾದ್​​ನಲ್ಲಿ ದೃಶ್ಯ ಸಿನಿಮಾವನ್ನು ಹೋಲುವ ರೀತಿಯ ಕೊಲೆ ರಹಸ್ಯವನ್ನು ಗಾಜಿಯಾಬಾದ್ ಪೊಲೀಸರು ಶನಿವಾರ ಭೇದಿಸಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆಯೊಬ್ಬಳು ತನ್ನ ಪ್ರಿಯಕರ ಮತ್ತು ಇನ್ನೊಬ್ಬ ಸ್ನೇಹಿತನ ಸಹಾಯದಿಂದ ಪತಿಯನ್ನು ಕೊಂದಿದ್ದಾಳೆ. ನಂತರ ಆ ಶವವನ್ನು ನಿರ್ಮಾಣ ಹಂತದಲ್ಲಿದ್ದ ಪ್ಲಾಟ್‌ನಲ್ಲಿ ಹೂತಿದ್ದಾಳೆ. ಕೊನೆಗೆ ತಮ್ಮ ಅಪರಾಧವನ್ನು ಮುಚ್ಚಿಹಾಕಲು ಅದರ ಮೇಲೆ ಸೆಪ್ಟಿಕ್ ಟ್ಯಾಂಕ್ ನಿರ್ಮಿಸಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿ ನೀತು ಮತ್ತು ಆಕೆಯ ಪ್ರಿಯಕರ ಹರ್ಪಾಲ್ ಅವರನ್ನು ಶನಿವಾರ ಬಂಧಿಸಲಾಗಿದ್ದು, ನೀತುವಿನ ಗಂಡ ಸತೀಶನ ಶವವನ್ನು ಬಿಸ್ರಖ್‌ನ ನಿರ್ಮಾಣ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಮೂರನೇ ಆರೋಪಿ ಗೌರವ್ ಎಂಬ ಮೇಸ್ತ್ರಿಗಾಗಿ ಹುಡುಕುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲೊಂದು ದೃಶ್ಯಂ 3 ಕಥೆ! ಕದ್ದ ಹಣವನ್ನ ಪೊಲೀಸ್​ ಠಾಣೆ ಪಕ್ಕದಲ್ಲಿಯೇ ಬಚ್ಚಿಟ್ಟ ಖತರ್ನಾಕ್​ ಕಳ್ಳ

ಜನವರಿ 10ರಂದು ಮೃತನ ಸಹೋದರ ಛೋಟೇಲಾಲ್ ಪೊಲೀಸರಿಗೆ ತನ್ನ ಅಣ್ಣ ಸತೀಶ್ ನಾಪತ್ತೆಯಾದ ಬಗ್ಗೆ ದೂರು ನೀಡಿದ್ದ. ಬಳಿಕ ಪೊಲೀಸರು ಈ ಬಗ್ಗೆ ತನಿಖೆ ಪ್ರಾರಂಭಿಸಿದ್ದರು. ಛೋಟೇಲಾಲ್ ಅವರ ಸಹೋದರ 1 ವಾರದಿಂದ ನಾಪತ್ತೆಯಾಗಿದ್ದರು. ನಂತರ ಪೊಲೀಸರು ಮೃತನ ಪತ್ನಿ ನೀತು ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆಕೆಯ ಪತಿ 7 ದಿನಗಳಿಂದ ನಾಪತ್ತೆಯಾಗಿದ್ದರೂ ಆಕೆ ಇನ್ನೂ ಯಾವುದೇ ದೂರು ದಾಖಲಿಸದಿದ್ದುದು ಪೊಲೀಸರಿಗೆ ಅನುಮಾನ ಉಂಟುಮಾಡಿತ್ತು. ಆದರೆ ತನಿಖಾಧಿಕಾರಿಗಳಿಗೆ ಆಕೆಯ ವಿರುದ್ಧ ಯಾವುದೇ ಸುಳಿವು ಸಿಗಲಿಲ್ಲ.

ನಂತರ ಪೊಲೀಸರು ಗೌರ್ ನಗರದ ನಿವಾಸಿ ಹರ್ಪಾಲ್ ಎಂಬಾತನನ್ನು ಹಿಂಬಾಲಿಸಲು ಪ್ರಾರಂಭಿಸಿದರು. ಆತ ಆಗಾಗ ನೀತು ಮತ್ತು ಸತೀಶ್​ನನ್ನು ಭೇಟಿಯಾಗುತ್ತಿದ್ದ. ಈ ಕುರಿತು ವಿಚಾರಣೆಯ ನಂತರ, ಹರ್ಪಾಲ್ ನೀತು ಮತ್ತು ಗೌರವ್ ಸಹಾಯದಿಂದ ಸತೀಶ್​ನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ನೀತು ಮತ್ತು ಹರ್ಪಾಲ್ ಪರಸ್ಪರ ಪ್ರೀತಿಸುತ್ತಿದ್ದರು, ಅವರಿಬ್ಬರೂ ಮದುವೆಯಾಗಲು ಬಯಸಿದ್ದರು.

ಇದನ್ನೂ ಓದಿ: Murder: ಹೆಂಡತಿಯನ್ನು ಕೊಂದು ಮನೆಯಲ್ಲೇ ಹೂತಿಟ್ಟ ಗಂಡ; 18 ತಿಂಗಳ ಬಳಿಕ ಕೊಲೆ ರಹಸ್ಯ ಬಯಲು

ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದ ಹರ್ಪಾಲ್, ನೀತು ಸಹಾಯದಿಂದ ಸತೀಶ್‌ನನ್ನು ಕೊಂದು ಶವವನ್ನು ಪಕ್ಕದ ಮನೆಯ ಜಮೀನಿನಲ್ಲಿ ಹೂಳಲು ಯೋಜಿಸಿದ್ದ. ಜನವರಿ 2ರಂದು ನೀತು ತನ್ನ ಗಂಡ ಸತೀಶ್‌ಗೆ ವಿಷ ಕುಡಿಸಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಳು. ನಂತರ ತನ್ನ ಪ್ರೇಮಿ ಹರ್ಪಾಲ್ ಸಹಾಯದಿಂದ ಗಂಡನ ಶವವನ್ನು ಆತ ಕೆಲಸ ಮಾಡುತ್ತಿದ್ದ ಜಾಗದಲ್ಲಿ ಹೂತುಹಾಕಿ ನಂತರ ಅಪರಾಧವನ್ನು ಮುಚ್ಚಿಹಾಕಲು ಅದರ ಮೇಲೆ ಸೆಪ್ಟಿಕ್ ಟ್ಯಾಂಕ್ ನಿರ್ಮಿಸಿದ್ದರು. ಕೊನೆಗೂ ಅವರಿಬ್ಬರೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್