AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ವಿಚಾರವಾಗಿ ಎಸಿಪಿ ಮಗನ ಕೊಲೆ: ಹತ್ಯೆ ರಹಸ್ಯ ಭೇದಿಸಿದ ಪೊಲೀಸರು

ದೆಹಲಿ ಹಿರಿಯ ಪೊಲೀಸ್​​​ ಅಧಿಕಾರಿಯೊಬ್ಬರ ಮಗನ ಹಣಕ್ಕಾಗಿ ಕೊಲೆ ನಡೆದಿದೆ. ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಯಶ್ಪಾಲ್ ಸಿಂಗ್ ಅವರ ಪುತ್ರ ಲಕ್ಷ್ಯ ಚೌಹಾಣ್ ಸೋಮವಾರ ಹರ್ಯಾಣದಲ್ಲಿ ತನ್ನ ಇಬ್ಬರು ಸ್ನೇಹಿತರ ಜೊತೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೋಗಿದ್ದರು. ಮದುವೆ ಮುಗಿಸಿ ಮರುದಿನ ದೆಹಲಿಗೆ ಬರಬೇಕಿತ್ತು. ಕೊಲೆ ನಡೆದಿದೆ. ಈ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಯ ನಡೆಸಿ ಕೊಲೆ ಕಾರಣವನ್ನು ಪತ್ತೆ ಮಾಡಿದ್ದಾರೆ.

ಹಣ ವಿಚಾರವಾಗಿ ಎಸಿಪಿ ಮಗನ ಕೊಲೆ: ಹತ್ಯೆ ರಹಸ್ಯ ಭೇದಿಸಿದ ಪೊಲೀಸರು
ಅಕ್ಷಯ್​ ಪಲ್ಲಮಜಲು​​
|

Updated on: Jan 27, 2024 | 11:35 AM

Share

ಹರ್ಯಾಣ, ಜ.27: ದೆಹಲಿ (Delhi ) ಹಿರಿಯ ಪೊಲೀಸ್​​​ ಅಧಿಕಾರಿಯೊಬ್ಬರ ಮಗನ ಹಣಕ್ಕಾಗಿ ಕೊಲೆ ನಡೆದಿದೆ. ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಯಶ್ಪಾಲ್ ಸಿಂಗ್ ಅವರ ಪುತ್ರ ಲಕ್ಷ್ಯ ಚೌಹಾಣ್ ಸೋಮವಾರ ಹರ್ಯಾಣದಲ್ಲಿ ತನ್ನ ಇಬ್ಬರು ಸ್ನೇಹಿತರ ಜೊತೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೋಗಿದ್ದರು. ಮದುವೆ ಮುಗಿಸಿ ಮರುದಿನ ದೆಹಲಿಗೆ ಬರಬೇಕಿತ್ತು. ಆದರೆ ಆ ದಿನ ಲಕ್ಷ್ಯ ಚೌಹಾಣ್ ದೆಹಲಿಯಲ್ಲಿರುವ ತನ್ನ ಮನೆಗೆ ಬಂದಿಲ್ಲ. ಇದರಿಂದ ಆತಂಕಗೊಂಡ ತಂದೆ ಎಸಿಪಿ ಯಶ್ಪಾಲ್ ಸಿಂಗ್ ಪೊಲೀಸ್​​ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತಮ್ಮ ಸಹೋದ್ಯೋಗಿಯ ಮಗ ಎಂದು ವಿಶೇಷ ಕಾಳಜಿ ವಹಿಸಿ ಹುಡುಕಾಟ ನಡೆಸಿದ್ದಾರೆ.

ಲಕ್ಷ್ಯ ಚೌಹಾಣ್​​​ಗಾಗಿ ಒಂದು ವಾರದಿಂದ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಇಂದು ನಾಪತ್ತೆಯ ಕಾರಣ ಸಿಕ್ಕಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನನ್ನು ವಿಕಾಸ್ ಭಾರದ್ವಾಜ್ ಎಂದು ಗುರುತಿಸಲಾಗಿದೆ. ದೆಹಲಿಯ ತೀಸ್ ಹಜಾರಿ ನ್ಯಾಯಾಲಯದಲ್ಲಿ ವಕೀಲರಾಗಿದ್ದ ಲಕ್ಷ್ಯ ಚೌಹಾಣ್, ಅದೇ ನ್ಯಾಯಾಲಯದಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ವಿಕಾಸ್ ಭಾರದ್ವಾಜ್​​ನಿಂದ ಹಣ ಪಡೆದಿದ್ದರು. ಆದರೆ ಈ ಹಣವನ್ನು ನೀಡದೆ ಲಕ್ಷ್ಯ ಚೌಹಾಣ್ ಸತಾಯಿಸುತ್ತಿದ್ದರು ಎಂದು ಹೇಳಲಾಗಿದೆ.

ಈ ಕಾರಣಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ವಿಕಾಸ್ ತನ್ನ ಸ್ನೇಹಿತ ಅಭಿಷೇಕ್ ಎಂಬಾತನ ಜತೆಗೆ ಸೇರಿ ಲಕ್ಷ್ಯ ಚೌಹಾಣ್ ಅವರನ್ನು ಕೊಲ್ಲಲು ಪ್ಲಾನ್​​ ಮಾಡಿದ್ದರು. ಇದೇ ಸಮಯದಲ್ಲಿ ಜನವರಿ 22 ರಂದು ಲಕ್ಷ್ಯ ಚೌಹಾಣ್ ಅವರು ತಮ್ಮ ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ಹರ್ಯಾಣ ಭಿವಾನಿಗೆ ಬಂದಿದ್ದರು ಎಂದು ಹೇಳಲಾಗಿದೆ. ವಿಕಾಸ್ ಮತ್ತು ಅಭಿಷೇಕ್ ಅವರ ಕಾರಿನಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿದ್ದರು.

ಇದನ್ನೂ ಓದಿ: ಕೊರೊನಾದಿಂದ ಕೆಲಸ ಕಳಕೊಂಡ ಇಂಜಿನಿಯರ್ ಮೈಸೂರಿನಲ್ಲಿ ಅದ್ಭುತ ನಕಲಿ ನೋಟು ತಯಾರಿಸುತ್ತಿದ್ದ; ಹರಿಹರ ಪೊಲೀಸರಿಗೆ ಸಿಕ್ಕಿಬಿದ್ದ!

ಮದುವೆ ಮುಗಿಸಿ ತಡರಾತ್ರಿ ವಾಪಸ್ಸು ದೆಹಲಿ ಬರಬೇಕಾದರೆ ವಾಶ್‌ರೂಮ್‌ಗೆ ಹೋಗುವ ನೆಪದಲ್ಲಿ ಪಾಣಿಪತ್‌ನ ಮುನಾಕ್ ಕಾಲುವೆ ಬಳಿ ಕಾರು ನಿಲ್ಲಿಸಿದ್ದಾರೆ. ಇದೇ ಸರಿಯಾದ ಸಮಯ ಎಂದು ಲಕ್ಷ್ಯ ಚೌಹಾಣ್ ಅವರನ್ನು ಕಾರಿನಿಂದ ಇಳಿಸಿ ಕಾಲುವೆಗೆ ತಳ್ಳಿದ್ದಾರೆ ಎಂದು ತನಿಖೆಯಲ್ಲಿ ತಿಳಿಸಲಾಗಿದೆ. ತನಿಖೆಯಲ್ಲಿ ಹಣ ವಿಚಾರಕ್ಕೆ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಅಭಿಷೇಕ್​​​ ಅವರನ್ನು ಕೂಡ ಬಂಧನ ಮಾಡಲಾಗಿದೆ. ಈ ಕೊಲೆಯ ಹಿಂದೆ ಇನ್ನು ಕೆಲವು ಆರೋಪಿಗಳು ಇದ್ದಾರೆ ಎಂದು ಹೇಳಲಾಗಿದೆ. ಇದೀಗ ಆತನ ದೇಹದ ಪತ್ತೆಯನ್ನು ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್