AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಟೀಚರ್ ಜೊತೆ ಅಕ್ರಮ ಸಂಬಂಧ; ಭಯದಿಂದ ಶಿಕ್ಷಕಿಯನ್ನೇ ಕೊಂದ ಪಿಯುಸಿ ವಿದ್ಯಾರ್ಥಿ

Crime News: ಬಂಧಿತ ಬಾಲಕ ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದು ಬೇರೆಯವರಿಗೆ ಗೊತ್ತಾಗಬಹುದು ಎಂಬ ಭಯದಿಂದ ಅವನು ಶಿಕ್ಷಕಿಯೊಂದಿಗಿನ ಸಂಬಂಧದಿಂದ ಹೊರಬರಲು ಬಯಸಿದ್ದ. ಇದೇ ಈ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Murder: ಟೀಚರ್ ಜೊತೆ ಅಕ್ರಮ ಸಂಬಂಧ; ಭಯದಿಂದ ಶಿಕ್ಷಕಿಯನ್ನೇ ಕೊಂದ ಪಿಯುಸಿ ವಿದ್ಯಾರ್ಥಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 04, 2022 | 9:01 AM

Share

ಅಯೋಧ್ಯೆ: ಟಿವಿ, ಮೊಬೈಲ್ (Mobile), ಇಂಟರ್​ನೆಟ್​ (Internet) ಮುಂತಾದವುಗಳಿಂದ ಇಂದಿನ ಮಕ್ಕಳು ಕೂಡ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಸಂಖ್ಯೆ ಹೆಚ್ಚಾಗಿದೆ. ಅಯೋಧ್ಯೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಉತ್ತರ ಪ್ರದೇಶ ಪೊಲೀಸರು ಅಯೋಧ್ಯೆಯಲ್ಲಿ (Ayodhya) ಬಂಧಿಸಿದ್ದಾರೆ. ಆ ವಿದ್ಯಾರ್ಥಿ ತನ್ನ ಶಿಕ್ಷಕಿಯನ್ನೇ ಕೊಲೆ (Murder) ಮಾಡಿದ್ದ. ಹೀಗಾಗಿ, ಈ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ.

ಅಯೋಧ್ಯೆಯ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಂಧಿತ ಹುಡುಗನೊಂದಿಗೆ ಮೃತ ಶಿಕ್ಷಕಿ ಅಕ್ರಮ ಸಂಬಂಧ ಹೊಂದಿದ್ದರು. ಈ ವಿಚಾರ ಬೇರೆಯವರಿಗೆ ಗೊತ್ತಾಗುತ್ತದೆ ಎಂದು ಶಿಕ್ಷಕಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಆ ಬಾಲಕನ್ನು ಬಂಧಿಸಲಾಗಿದೆ.

“12ನೇ ತರಗತಿಯ ಬಾಲಕನನ್ನು ತನ್ನ ಶಿಕ್ಷಕನನ್ನು ಹತ್ಯೆಗೈದಿದ್ದಕ್ಕಾಗಿ ಬಂಧಿಸಲಾಗಿದೆ. ಆತ ಓಡಾಡಿದ್ದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಆತನ ಟಿ-ಶರ್ಟ್ ಅನ್ನು ನೋಡಿ ಆತನನ್ನು ಗುರುತಿಸಿ, ಬಂಧಿಸಲಾಗಿದೆ” ಎಂದು ಅಯೋಧ್ಯೆಯ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಎಪಿ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Murder: ಆಸ್ತಿಗಾಗಿ ಅಪ್ಪ, ತಮ್ಮನನ್ನೇ ಶೂಟ್ ಮಾಡಿ ಕೊಂದ ನಿವೃತ್ತ ಸೇನಾಧಿಕಾರಿ!

“ಬಂಧಿತ ಬಾಲಕ ಸಂತ್ರಸ್ತ ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದು ಬೇರೆಯವರಿಗೆ ಗೊತ್ತಾಗಬಹುದು ಎಂಬ ಭಯದಿಂದ ಅವನು ಶಿಕ್ಷಕಿಯೊಂದಿಗಿನ ಸಂಬಂಧದಿಂದ ಹೊರಬರಲು ಬಯಸಿದ್ದ. ಆದರೆ, ಈ ವಿಚಾರವನ್ನು ಎಲ್ಲರಿಗೂ ಹೇಳಿ ಆತನಿಗೆ ಅವಮಾನ ಮಾಡುವುದಾಗಿ ಆ ಶಿಕ್ಷಕಿ ಅವನಿಗೆ ಬೆದರಿಕೆ ಹಾಕುತ್ತಿದ್ದರು. ಆದ್ದರಿಂದ ಅವನು ಅವಳನ್ನು ಕೊಲೆ ಮಾಡಿದ್ದಾನೆ ” ಎಂದು ಅಧಿಕಾರಿ ತಿಳಿಸಿದ್ದಾರೆ.

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು