AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಬಾಡಿ ಶೇಮಿಂಗ್​​ನಿಂದ ಬೇಸತ್ತು ಸಹಪಾಠಿಯನ್ನೇ ಇರಿದು ಕೊಂದ ಪಿಯುಸಿ ವಿದ್ಯಾರ್ಥಿ

ನೋಡಲು ಹುಡುಗಿಯಂತೆ ಕಾಣುತ್ತೀಯ ಎಂದು ಸಹಪಾಠಿ ಗೇಲಿ ಮಾಡಿದ್ದಕ್ಕೆ ಕೋಪಗೊಂಡ ತಮಿಳುನಾಡಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಾಲಕನೊಬ್ಬನನ್ನು ಕೊಲೆ ಮಾಡಿದ್ದಾನೆ.

Murder: ಬಾಡಿ ಶೇಮಿಂಗ್​​ನಿಂದ ಬೇಸತ್ತು ಸಹಪಾಠಿಯನ್ನೇ ಇರಿದು ಕೊಂದ ಪಿಯುಸಿ ವಿದ್ಯಾರ್ಥಿ
ಕೊಲೆImage Credit source: NDTV
TV9 Web
| Edited By: |

Updated on:May 18, 2022 | 2:55 PM

Share

ಚೆನ್ನೈ: ತಮಿಳುನಾಡಿನ (Tamil Nadu Crime News) ಕಲ್ಲಕುರಿಚಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ತನ್ನ ದೇಹದ ಬಗ್ಗೆ ಗೇಲಿ ಮಾಡಿದ್ದಕ್ಕೆ (ಬಾಡಿ ಶೇಮಿಂಗ್) ಆತನನ್ನು ಕೊಲೆ (Murder) ಮಾಡಿದ್ದಾನೆ. ಆ ಬಾಲಕ ಮೃತಪಟ್ಟ ವಿದ್ಯಾರ್ಥಿಯ ದೇಹವನ್ನು ಗೇಲಿ ಮಾಡಿದ್ದು, ನೀನು ನೋಡಲು ಹುಡುಗಿಯಂತೆ ಇದ್ದೀಯ ಎಂದು ಕಿಚಾಯಿಸಿದ್ದ. ಇದರಿಂದ ಅವಮಾನಗೊಂಡ ಆ ವಿದ್ಯಾರ್ಥಿ ಆ ಬಾಲಕನನ್ನು ಕೊಂದಿದ್ದಾನೆ.

ಮೇ 14ರಂದು ಈ ಘಟನೆ ನಡೆದಿದೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು 12ನೇ ತರಗತಿಯ ಬಾಲಕನನ್ನು ವೀಕ್ಷಣಾಲಯಕ್ಕೆ ಕಳುಹಿಸಿದ್ದಾರೆ. ತನ್ನನ್ನು ಹುಡುಗಿಯಂತೆ ಕಾಣುತ್ತೀಯ ಎಂದು ಆ ಸಹಪಾಠಿ ಹೇಳಿದ ಮೇಲೂ ಆ ವಿದ್ಯಾರ್ಥಿ ಹಾಗೆ ಹೇಳಬೇಡ ಎಂದು ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದ. ಆದರೆ, ಅದನ್ನೇ ತಮಾಷೆಯಾಗಿ ತೆಗೆದುಕೊಂಡ ಆ ಬಾಲಕ ಶಾಲೆಯಲ್ಲಿ ಎಲ್ಲರ ಎದುರಲ್ಲೇ ಗೇಲಿ ಮಾಡುವುದನ್ನು ಮುಂದುವರೆಸಿದ್ದ. ಇದರಿಂದ ಪಿಯುಸಿ ವಿದ್ಯಾರ್ಥಿಗೆ ಕೋಪ ಬಂದು, ತನ್ನ ಜೊತೆಗೆ ಓದುತ್ತಿದ್ದ ಬಾಲಕನನ್ನು ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: Murder: ಗಂಡನ ಉಗುರಿನಲ್ಲಿದ್ದ ರಕ್ತದ ಕಲೆಯಿಂದ ಬಯಲಾಯ್ತು ಹೆಂಡತಿ ಕೊಲೆಯ ರಹಸ್ಯ!

ಇದನ್ನೂ ಓದಿ
Image
ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದ ಮೂವರು ಹೆಣ್ಣುಮಕ್ಕಳ ದುರ್ಮರಣ: ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ!
Image
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರಿಯಕರನ ಸಮಾಧಿ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಕ್ರಿಯೆ
Image
ಒಂದೇ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಗೆಳೆಯರು: ಬೆಂಕಿ ಹಚ್ಚಿ ಓರ್ವ ಗೆಳೆಯನ ಕೊಲೆ

ಸಹಪಾಠಿಯನ್ನು ಕೊಲ್ಲಲು ನಿರ್ಧರಿಸಿದ ವಿದ್ಯಾರ್ಥಿ ಆತನನ್ನು ಹೊರಗೆ ಕರೆದು, ಕುಡುಗೋಲು ಹಾಗೂ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಹೆದ್ದಾರಿಯಲ್ಲಿ ಅವರ ಶಾಲೆಯ ಸಮೀಪದಲ್ಲೇ ಕೊಲೆ ಸಂಭವಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಬಾಡಿ ಶೇಮಿಂಗ್ ಆತಂಕ, ಖಿನ್ನತೆಗೆ ಕಾರಣವಾಗುತ್ತದೆ, ದೇಹದ ಡಿಸ್ಮಾರ್ಫಿಕ್ ಡಿಸಾರ್ಡರ್ ಅನ್ನು ಉಂಟುಮಾಡುತ್ತದೆ. ಅನೇಕ ಬಾರಿ, ಇದು ಕೋಪ ಅಥವಾ ತೀವ್ರ ಖಿನ್ನತೆಯಾಗಿ ಹೊರಹೊಮ್ಮುತ್ತದೆ. ಇದರಿಂದ ಪ್ರಾಣಹಾನಿಯೂ ಸಂಭವಿಸಬಹುದು.” ಎಂದು ತಮಿಳುನಾಡು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ಶರಣ್ಯ ಜೈಕುಮಾರ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Wed, 18 May 22

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ