Murder: ಹೆತ್ತ ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಾಯಿ; ಕಾರಣವೇನು ಗೊತ್ತಾ?

ಸೋಮವಾರ ಸಂಜೆ 7 ಗಂಟೆಗೆ ಕುಡಿದ ಅಮಲಿನಲ್ಲಿ ಚಿಟ್ಟೆಮ್ಮನ ಮನೆಗೆ ಬಂದಿದ್ದ ಆಕೆಯ ಮಗ ಕೋಟಯ್ಯ ಚಿಟ್ಟೆಮ್ಮ ಹಾಗೂ ಇಬ್ಬರು ಮಕ್ಕಳ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದ. ಆತನಿಂದ ಚಿಟ್ಟೆಮ್ಮ ತನ್ನ ಮೊಮಕ್ಕಳನ್ನು ರಕ್ಷಿಸಿ, ಅಕ್ಕಪಕ್ಕದ ಮನೆಗೆ ಕರೆದೊಯ್ದರು.

Murder: ಹೆತ್ತ ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಾಯಿ; ಕಾರಣವೇನು ಗೊತ್ತಾ?
ಪ್ರಾತಿನಿಧಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Apr 13, 2022 | 2:00 PM

ವಿಜಯವಾಡ: ಹೆತ್ತ ತಾಯಿಯೇ ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದಿರುವ ಆಘಾತಕಾರಿ ಘಟನೆ (Shocking News) ವಿಜಯವಾಡದಲ್ಲಿ ನಡೆದಿದೆ. ವಿಜಯವಾಡದ 55 ವರ್ಷದ ಮಹಿಳೆ ಅಪ್ಪಲ ಚಿಟ್ಟೆಮ್ಮ ತನ್ನ ಮಗನಿಗೆ ಕೊಡಲಿಯಿಂದ ಕೊಚ್ಚಿ ಕೊಲೆ (Murder) ಮಾಡಿದ್ದು, ಆಕೆಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೃತ ವ್ಯಕ್ತಿ ಕುಡಿದ ಅಮಲಿನಲ್ಲಿ ತನ್ನ ತಾಯಿ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ.

ಮೃತ ಅಪ್ಪಲ ಬಾಲ ಕೋಟಯ್ಯ (35) ಟ್ರಕ್ ಚಾಲಕನಾಗಿದ್ದು, ಆರು ವರ್ಷಗಳ ಹಿಂದೆ ಕಂಚಿಕಚೆರ್ಲಾದ ಸಿರಿಶಾ ಅವರನ್ನು ಮದುವೆಯಾಗಿದ್ದರು. ಇತ್ತೀಚೆಗೆ ಅವರು ವಿಚ್ಛೇದನ ಪಡೆದಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪೊಲೀಸರ ಪ್ರಕಾರ, ಭಾನುವಾರ ರಾಮನವಮಿ ಆಚರಿಸಲು ಚಿಟ್ಟೆಮ್ಮ ತನ್ನ ಮೊಮ್ಮಕ್ಕಳನ್ನು (ಕೋಟಯ್ಯನ ಮಕ್ಕಳು) ಆಹ್ವಾನಿಸಿದ್ದರು.

ಸೋಮವಾರ ಸಂಜೆ 7 ಗಂಟೆಗೆ ಕುಡಿದ ಅಮಲಿನಲ್ಲಿ ಚಿಟ್ಟೆಮ್ಮನ ಮನೆಗೆ ಬಂದಿದ್ದ ಆಕೆಯ ಮಗ ಕೋಟಯ್ಯ ಚಿಟ್ಟೆಮ್ಮ ಹಾಗೂ ಇಬ್ಬರು ಮಕ್ಕಳ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದ. ಆತನಿಂದ ಚಿಟ್ಟೆಮ್ಮ ತನ್ನ ಮೊಮಕ್ಕಳನ್ನು ರಕ್ಷಿಸಿ, ಅಕ್ಕಪಕ್ಕದ ಮನೆಗೆ ಕರೆದೊಯ್ದರು. ಆದರೆ, ಅಲ್ಲೂ ಬಂದು ಆತ ಹಲ್ಲೆ ಮಾಡಿದ್ದ.

ಮಗನ ಅಟ್ಟಹಾಸವನ್ನು ನಿಯಂತ್ರಿಸಲು ಸಾಧ್ಯವಾಗದೆ, ತನ್ನ ಹಾಗೂ ಮೊಮ್ಮಕ್ಕಳ ಪ್ರಾಣ ಉಳಿಸಿಕೊಳ್ಳಲು ಆಕೆ ಮಗನಿಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾಳೆ. ತೀವ್ರವಾದ ಹೊಡೆತದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕೊಲೆಯ ಆರೋಪದಲ್ಲಿ ಚಿಟ್ಟೆಮ್ಮನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Crime News: ಅತ್ಯಾಚಾರ ಕೊಲೆಗಿಂತಲೂ ಘೋರವಾದುದು; ಪೋಕ್ಸೋ ನ್ಯಾಯಾಲಯದಿಂದ ಅತ್ಯಾಚಾರಿಗೆ 10 ವರ್ಷ ಜೈಲು ಶಿಕ್ಷೆ

Murder: ಗಂಡನನ್ನು ಕೊಂದು, ಶವವನ್ನು ಗೋಣಿಚೀಲದಲ್ಲಿ ತುಂಬಿ ಪಾರ್ಕ್​ನಲ್ಲಿ ಎಸೆದ ಹೆಂಡತಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ