AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಿಯೊಂದಿಗೆ ಸ್ನೇಹ ಬೆಳಸಿದ್ದ ಮುಸ್ಲಿಂ ಯುವಕನನ್ನು ಹತ್ಯೆಗೈದ ಅಣ್ಣ..!

ತನ್ನ ತಂಗಿಯೊಂದಿಗೆ ಸ್ನೇಹ ಬೆಳಸಿದ್ದ ಮುಸ್ಲಿಂ ಯುವಕನನ್ನು ಆಕೆಯ ಅಣ್ಣ ಹೊಡೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.

ತಂಗಿಯೊಂದಿಗೆ ಸ್ನೇಹ ಬೆಳಸಿದ್ದ ಮುಸ್ಲಿಂ ಯುವಕನನ್ನು ಹತ್ಯೆಗೈದ ಅಣ್ಣ..!
ಕೊಲೆ
TV9 Web
| Edited By: |

Updated on:Sep 29, 2022 | 5:13 PM

Share

ರೂಟು, (ಜಾರ್ಖಂಡ್‌): ಸಹೋದರಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ಯುವಕನ್ನು ಆಕೆಯ ಅಣ್ಣ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್‌ನ ರೂಟು ಜಿಲ್ಲೆಯಲ್ಲಿ ನಡೆದಿದೆ.

ಶಹಬಾಜ್ ಅನ್ಸಾರಿ (19) ಹತ್ಯೆಯಾದ ಯುವಕ. ಆರೋಪಿಗಳನ್ನು ಓಂಪ್ರಕಾಶ್ ಮಹೊತೊ (25) ಮತ್ತು ಸುಶಾಂತ್ ನಾಯಕ್ (25) ಎಂದು ಗುರುತಿಸಲಾಗಿದೆ. ಶಹಬಾಜ್ ಅನ್ಸಾರಿ ಯುವತಿಯೊಂದಿಗೆ ಸ್ನೇಹ ಬೆಳಸಿದ್ದ, ಇದು ಆಕೆಯ ಅಣ್ಣನಿಗೆ ಇಷ್ಟವಿರಲ್ಲಿಲ್ಲ. ಈ ಹಿನ್ನೆಲೆಯಲ್ಲಿ ಯುವತಿಯ ಅಣ್ಣ ಸುಶಾಂತ್ ನಾಯಕ್, ತನ್ನ ಸ್ನೇಹಿತನೊಂದಿಗೆ ಸೇರಿ ಕೊಂಡು ಶಹಬಾಜ್ ಅನ್ಸಾರಿನನ್ನು ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ನೀನು ಕಪ್ಪಗಿದ್ದೀಯಾ ಅಂತ ಪದೇ-ಪದೇ ರೇಗಿಸುತ್ತಿದ್ದ ಪತಿಯ ಮರ್ಮಾಂಗವನ್ನೇ ಕತ್ತರಿಸಿಕೊಂದ ಪತ್ನಿ

ಶಹಬಾಜ್​ನನ್ನು ಓಂಪ್ರಕಾಶ್ ಮಹೊತೊ ಹಾಗೂ ಸುಶಾಂತ್ ನಾಯಕ್ ಹೊರಗೆ ಕರೆದುಕೊಂಡು ಹೋಗಿ ತಲೆಗೆ ಹೊಡೆದು ಕೊಂದಿದ್ದಾರೆ. ಕೊಲೆಯ ಮರುದಿನ ಶಹಬಾಜ್‌‌ ಅವರ ತಂದೆ ಮಂಡರ್ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದೂರಿನ ಮೇರೆಗೆ ಪೊಲೀಸರು ಐಪಿಸಿ ಸೆಕ್ಷನ್ 302 (ಕೊಲೆ), 34, 120 (ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಬಳಿಕ ತನಿಖೆ ವೇಳೆ ಕೊಲೆ ಮಾಡಿರುವುದನ್ನು ಆರೋಪಿಗಳ ಒಪ್ಪಿಕೊಂಡಿದ್ದಾರೆ.

ತನ್ನ ಸಹೋದರಿಯೊಂದಿಗೆ ಓಡಾಡಬೇಡ. ಇದು ಸರಿ ಕಾಣಲ್ಲ ಎಂದು ಯುವತಿಯ ಅಣ್ಣ ಸುಶಾಂತ್ ನಾಯಕ್, ಅನ್ಸಾರಿಗೆ ಎಚ್ಚರಿಕೆ ನೀಡಿದ್ದ. ಆದರೂ ಅನ್ಸಾರಿ ಯುವತಿಯೊಂದಿಗೆ ಮಾತನಾಡುವುದು, ಓಡಾಡುವುದು ಮಾಡುತ್ತಿದ್ದ. ಇದರಿಂದ ಕೋಪಗೊಂಡ, ಸುಶಾಂತ್ ನಾಯಕ್ , ಓಂಪ್ರಕಾಶ್ ಮಹೊತೊನೊಂದಿಗೆ ಪ್ಲಾನ್ ಮಾಡಿ ಅನ್ಸಾರಿಯನ್ನು ದೂರ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Thu, 29 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ