AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​ನಲ್ಲಿ ಭೀಕರ ಕೊಲೆ: ವೃದ್ಧೆಯನ್ನು ಹತ್ಯೆಗೈದು ಬೀರುವಿನಲ್ಲಿಟ್ಟು ಪರಾರಿಯಾದ ಮುಸ್ಲಿಂ ಮಹಿಳೆ

ವೃದ್ಧೆಯನ್ನು ಕೊಂದು ಶವವನ್ನು ಬೀರುವಿನಲ್ಲಿಟ್ಟು ಪಾತಕಿ ಪರಾರಿಯಾಗಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ನಡೆದಿದೆ.

ಆನೇಕಲ್​ನಲ್ಲಿ ಭೀಕರ ಕೊಲೆ: ವೃದ್ಧೆಯನ್ನು ಹತ್ಯೆಗೈದು ಬೀರುವಿನಲ್ಲಿಟ್ಟು ಪರಾರಿಯಾದ ಮುಸ್ಲಿಂ ಮಹಿಳೆ
ಕೊಲೆಯಾದ ವೃದ್ಧೆ
TV9 Web
| Updated By: ವಿವೇಕ ಬಿರಾದಾರ|

Updated on:Dec 04, 2022 | 5:26 PM

Share

ಆನೇಕಲ್: ದೆಹಲಿಯ (Delhi) ಶದ್ಧಾ (Shraddha) ಕೊಲೆ ಪ್ರಕರಣಕ್ಕೆ ಹೋಲುವಂತೆ ವೃದ್ಧೆಯನ್ನು (Old Woman) ಕೊಂದು ಶವವನ್ನು ಬೀರುವಿನಲ್ಲಿಟ್ಟು ಪಾತಕಿ ಪರಾರಿಯಾಗಿರುವ ಘಟನೆ ಆನೇಕಲ್ (Anelkal) ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (65) ಕೊಲೆಯಾದ ಅಜ್ಜಿ. ಗ್ರಾಮದಲ್ಲಿ 4 ಅಂತಸ್ತಿನ ಮನೆ ಇದ್ದು, 4ನೇ ಮಹಡಿಯಲ್ಲಿ ಮುಸ್ಲಿಂ ಮಹಿಳೆ ಬಾಡಿಗೆಗೆ ಇದ್ದಳು. 3ನೇ ಮಹಡಿಯಲ್ಲಿ ಪಾರ್ವತಮ್ಮ ಕುಟುಂಸ್ಥರೊಂದಿಗೆ ವಾಸವಿದ್ದಳು.

3 ದಿನಗಳ ಹಿಂದೆ ಮುಸ್ಲಿಂ ಮಹಿಳೆ ಅಜ್ಜಿಯನ್ನು ಮನೆಗೆ ಕರೆದಿದ್ದಳು. ಅಂದಿನಿಂದ ಅಜ್ಜಿ ಮತ್ತು ಮುಸ್ಲಿಂ ಮಹಿಳೆ ನಾಪತ್ತೆಯಾಗಿದ್ದರು. ನಂತರ ಪಾರ್ವತಮ್ಮ ಕುಟುಂಬಸ್ಥರು ಪಾರ್ವತಮ್ಮಳನ್ನು ಹುಡುಕಲು ಶುರು ಮಾಡಿದ್ದರು. ಆದರೆ ಪಾರ್ವತಮ್ಮ ಮಾತ್ರ ಸಿಕ್ಕಿರಲಿಲ್ಲ. ಇನ್ನೂ ಇತ್ತ ಮುಸ್ಲಿಂ ಮಹಿಳೆ ಕೂಡ ನಾಪತ್ತೆಯಾಗಿದ್ದರಿಂದ ಕುಟುಂಬಸ್ಥರು ಅನುಮಾನಗೊಂಡಿದ್ದರು.

ನಂತರ ಪಾರ್ವತಮ್ಮ ಕುಟುಂಬಸ್ಥರು ಮುಸ್ಲಿಂ ಮಹಿಳೆಯ ಮನೆ ಬೀಗ ತೆಗೆಸಿದ್ದರು. ಈ ವೇಳೆ ಮಹಿಳೆಯ ಮನೆಯ ಬೀರುವಿನಲ್ಲಿದ್ದ ವೃದ್ಧೆ ಮೃತದೇಹ ಪತ್ತೆಯಾಗಿದೆ. ಮಹಿಳೆ ವೃದ್ಧೆಯನ್ನು ಕೊಂದು ಶವ ಪ್ಯಾಕ್​ ಮಾಡಿ ಬೀರುವಿನಲ್ಲಿಟ್ಟು ಪರಾರಿಯಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಪಾರ್ವತಮ್ಮ ಮೃತದೇಹ ಕಳೆದ 3 ದಿನಗಳಿಂದ ಬೀರುವಿನಲ್ಲೇ ಇದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಸ್ಲಿಂ ಮಹಿಳೆ ಪಾಯಲ್ ಖಾನ್  ಕೊಲೆ ಮಾಡಿರುವ ಶಂಕೆ

ಪಾಯಲ್ ಖಾನ್ ಎಂಬ ಮಹಿಳೆ ಆಗಾಗ ನನ್ನ ತಾಯಿಯನ್ನು ಕರೀತಾ ಇದ್ದರು. ನಮ್ಮ ತಾಯಿ ಎರಡು ಮೂರು ದಿನ ಅವರ ಮನೆಗೆ ಹೋಗಿದ್ದರು. ಮೂರು ದಿನದಿಂದ ಆ ಮಹಿಳೆ ಕೂಡ ಕಾಣೆ ಆಗಿದ್ದರು. ಹೀಗಾಗಿ ಅವರ ಮೇಲೆ ಶಂಕೆ ಇದೆ ಅಂತ ವೃದ್ದೆಯ ಮಗ ಕೊಟ್ಟ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Sun, 4 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ