AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​ನಲ್ಲಿ ಭೀಕರ ಕೊಲೆ: ವೃದ್ಧೆಯನ್ನು ಹತ್ಯೆಗೈದು ಬೀರುವಿನಲ್ಲಿಟ್ಟು ಪರಾರಿಯಾದ ಮುಸ್ಲಿಂ ಮಹಿಳೆ

ವೃದ್ಧೆಯನ್ನು ಕೊಂದು ಶವವನ್ನು ಬೀರುವಿನಲ್ಲಿಟ್ಟು ಪಾತಕಿ ಪರಾರಿಯಾಗಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ನಡೆದಿದೆ.

ಆನೇಕಲ್​ನಲ್ಲಿ ಭೀಕರ ಕೊಲೆ: ವೃದ್ಧೆಯನ್ನು ಹತ್ಯೆಗೈದು ಬೀರುವಿನಲ್ಲಿಟ್ಟು ಪರಾರಿಯಾದ ಮುಸ್ಲಿಂ ಮಹಿಳೆ
ಕೊಲೆಯಾದ ವೃದ್ಧೆ
TV9 Web
| Edited By: |

Updated on:Dec 04, 2022 | 5:26 PM

Share

ಆನೇಕಲ್: ದೆಹಲಿಯ (Delhi) ಶದ್ಧಾ (Shraddha) ಕೊಲೆ ಪ್ರಕರಣಕ್ಕೆ ಹೋಲುವಂತೆ ವೃದ್ಧೆಯನ್ನು (Old Woman) ಕೊಂದು ಶವವನ್ನು ಬೀರುವಿನಲ್ಲಿಟ್ಟು ಪಾತಕಿ ಪರಾರಿಯಾಗಿರುವ ಘಟನೆ ಆನೇಕಲ್ (Anelkal) ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (65) ಕೊಲೆಯಾದ ಅಜ್ಜಿ. ಗ್ರಾಮದಲ್ಲಿ 4 ಅಂತಸ್ತಿನ ಮನೆ ಇದ್ದು, 4ನೇ ಮಹಡಿಯಲ್ಲಿ ಮುಸ್ಲಿಂ ಮಹಿಳೆ ಬಾಡಿಗೆಗೆ ಇದ್ದಳು. 3ನೇ ಮಹಡಿಯಲ್ಲಿ ಪಾರ್ವತಮ್ಮ ಕುಟುಂಸ್ಥರೊಂದಿಗೆ ವಾಸವಿದ್ದಳು.

3 ದಿನಗಳ ಹಿಂದೆ ಮುಸ್ಲಿಂ ಮಹಿಳೆ ಅಜ್ಜಿಯನ್ನು ಮನೆಗೆ ಕರೆದಿದ್ದಳು. ಅಂದಿನಿಂದ ಅಜ್ಜಿ ಮತ್ತು ಮುಸ್ಲಿಂ ಮಹಿಳೆ ನಾಪತ್ತೆಯಾಗಿದ್ದರು. ನಂತರ ಪಾರ್ವತಮ್ಮ ಕುಟುಂಬಸ್ಥರು ಪಾರ್ವತಮ್ಮಳನ್ನು ಹುಡುಕಲು ಶುರು ಮಾಡಿದ್ದರು. ಆದರೆ ಪಾರ್ವತಮ್ಮ ಮಾತ್ರ ಸಿಕ್ಕಿರಲಿಲ್ಲ. ಇನ್ನೂ ಇತ್ತ ಮುಸ್ಲಿಂ ಮಹಿಳೆ ಕೂಡ ನಾಪತ್ತೆಯಾಗಿದ್ದರಿಂದ ಕುಟುಂಬಸ್ಥರು ಅನುಮಾನಗೊಂಡಿದ್ದರು.

ನಂತರ ಪಾರ್ವತಮ್ಮ ಕುಟುಂಬಸ್ಥರು ಮುಸ್ಲಿಂ ಮಹಿಳೆಯ ಮನೆ ಬೀಗ ತೆಗೆಸಿದ್ದರು. ಈ ವೇಳೆ ಮಹಿಳೆಯ ಮನೆಯ ಬೀರುವಿನಲ್ಲಿದ್ದ ವೃದ್ಧೆ ಮೃತದೇಹ ಪತ್ತೆಯಾಗಿದೆ. ಮಹಿಳೆ ವೃದ್ಧೆಯನ್ನು ಕೊಂದು ಶವ ಪ್ಯಾಕ್​ ಮಾಡಿ ಬೀರುವಿನಲ್ಲಿಟ್ಟು ಪರಾರಿಯಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಪಾರ್ವತಮ್ಮ ಮೃತದೇಹ ಕಳೆದ 3 ದಿನಗಳಿಂದ ಬೀರುವಿನಲ್ಲೇ ಇದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಸ್ಲಿಂ ಮಹಿಳೆ ಪಾಯಲ್ ಖಾನ್  ಕೊಲೆ ಮಾಡಿರುವ ಶಂಕೆ

ಪಾಯಲ್ ಖಾನ್ ಎಂಬ ಮಹಿಳೆ ಆಗಾಗ ನನ್ನ ತಾಯಿಯನ್ನು ಕರೀತಾ ಇದ್ದರು. ನಮ್ಮ ತಾಯಿ ಎರಡು ಮೂರು ದಿನ ಅವರ ಮನೆಗೆ ಹೋಗಿದ್ದರು. ಮೂರು ದಿನದಿಂದ ಆ ಮಹಿಳೆ ಕೂಡ ಕಾಣೆ ಆಗಿದ್ದರು. ಹೀಗಾಗಿ ಅವರ ಮೇಲೆ ಶಂಕೆ ಇದೆ ಅಂತ ವೃದ್ದೆಯ ಮಗ ಕೊಟ್ಟ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Sun, 4 December 22

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!