ಆನೇಕಲ್​ನಲ್ಲಿ ಭೀಕರ ಕೊಲೆ: ವೃದ್ಧೆಯನ್ನು ಹತ್ಯೆಗೈದು ಬೀರುವಿನಲ್ಲಿಟ್ಟು ಪರಾರಿಯಾದ ಮುಸ್ಲಿಂ ಮಹಿಳೆ

ವೃದ್ಧೆಯನ್ನು ಕೊಂದು ಶವವನ್ನು ಬೀರುವಿನಲ್ಲಿಟ್ಟು ಪಾತಕಿ ಪರಾರಿಯಾಗಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ನಡೆದಿದೆ.

ಆನೇಕಲ್​ನಲ್ಲಿ ಭೀಕರ ಕೊಲೆ: ವೃದ್ಧೆಯನ್ನು ಹತ್ಯೆಗೈದು ಬೀರುವಿನಲ್ಲಿಟ್ಟು ಪರಾರಿಯಾದ ಮುಸ್ಲಿಂ ಮಹಿಳೆ
ಕೊಲೆಯಾದ ವೃದ್ಧೆ
Follow us
| Updated By: ವಿವೇಕ ಬಿರಾದಾರ

Updated on:Dec 04, 2022 | 5:26 PM

ಆನೇಕಲ್: ದೆಹಲಿಯ (Delhi) ಶದ್ಧಾ (Shraddha) ಕೊಲೆ ಪ್ರಕರಣಕ್ಕೆ ಹೋಲುವಂತೆ ವೃದ್ಧೆಯನ್ನು (Old Woman) ಕೊಂದು ಶವವನ್ನು ಬೀರುವಿನಲ್ಲಿಟ್ಟು ಪಾತಕಿ ಪರಾರಿಯಾಗಿರುವ ಘಟನೆ ಆನೇಕಲ್ (Anelkal) ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (65) ಕೊಲೆಯಾದ ಅಜ್ಜಿ. ಗ್ರಾಮದಲ್ಲಿ 4 ಅಂತಸ್ತಿನ ಮನೆ ಇದ್ದು, 4ನೇ ಮಹಡಿಯಲ್ಲಿ ಮುಸ್ಲಿಂ ಮಹಿಳೆ ಬಾಡಿಗೆಗೆ ಇದ್ದಳು. 3ನೇ ಮಹಡಿಯಲ್ಲಿ ಪಾರ್ವತಮ್ಮ ಕುಟುಂಸ್ಥರೊಂದಿಗೆ ವಾಸವಿದ್ದಳು.

3 ದಿನಗಳ ಹಿಂದೆ ಮುಸ್ಲಿಂ ಮಹಿಳೆ ಅಜ್ಜಿಯನ್ನು ಮನೆಗೆ ಕರೆದಿದ್ದಳು. ಅಂದಿನಿಂದ ಅಜ್ಜಿ ಮತ್ತು ಮುಸ್ಲಿಂ ಮಹಿಳೆ ನಾಪತ್ತೆಯಾಗಿದ್ದರು. ನಂತರ ಪಾರ್ವತಮ್ಮ ಕುಟುಂಬಸ್ಥರು ಪಾರ್ವತಮ್ಮಳನ್ನು ಹುಡುಕಲು ಶುರು ಮಾಡಿದ್ದರು. ಆದರೆ ಪಾರ್ವತಮ್ಮ ಮಾತ್ರ ಸಿಕ್ಕಿರಲಿಲ್ಲ. ಇನ್ನೂ ಇತ್ತ ಮುಸ್ಲಿಂ ಮಹಿಳೆ ಕೂಡ ನಾಪತ್ತೆಯಾಗಿದ್ದರಿಂದ ಕುಟುಂಬಸ್ಥರು ಅನುಮಾನಗೊಂಡಿದ್ದರು.

ನಂತರ ಪಾರ್ವತಮ್ಮ ಕುಟುಂಬಸ್ಥರು ಮುಸ್ಲಿಂ ಮಹಿಳೆಯ ಮನೆ ಬೀಗ ತೆಗೆಸಿದ್ದರು. ಈ ವೇಳೆ ಮಹಿಳೆಯ ಮನೆಯ ಬೀರುವಿನಲ್ಲಿದ್ದ ವೃದ್ಧೆ ಮೃತದೇಹ ಪತ್ತೆಯಾಗಿದೆ. ಮಹಿಳೆ ವೃದ್ಧೆಯನ್ನು ಕೊಂದು ಶವ ಪ್ಯಾಕ್​ ಮಾಡಿ ಬೀರುವಿನಲ್ಲಿಟ್ಟು ಪರಾರಿಯಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಪಾರ್ವತಮ್ಮ ಮೃತದೇಹ ಕಳೆದ 3 ದಿನಗಳಿಂದ ಬೀರುವಿನಲ್ಲೇ ಇದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಸ್ಲಿಂ ಮಹಿಳೆ ಪಾಯಲ್ ಖಾನ್  ಕೊಲೆ ಮಾಡಿರುವ ಶಂಕೆ

ಪಾಯಲ್ ಖಾನ್ ಎಂಬ ಮಹಿಳೆ ಆಗಾಗ ನನ್ನ ತಾಯಿಯನ್ನು ಕರೀತಾ ಇದ್ದರು. ನಮ್ಮ ತಾಯಿ ಎರಡು ಮೂರು ದಿನ ಅವರ ಮನೆಗೆ ಹೋಗಿದ್ದರು. ಮೂರು ದಿನದಿಂದ ಆ ಮಹಿಳೆ ಕೂಡ ಕಾಣೆ ಆಗಿದ್ದರು. ಹೀಗಾಗಿ ಅವರ ಮೇಲೆ ಶಂಕೆ ಇದೆ ಅಂತ ವೃದ್ದೆಯ ಮಗ ಕೊಟ್ಟ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Sun, 4 December 22

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​