Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಜಾಫರ್‌ಪುರದ ವಿದ್ಯಾರ್ಥಿಗೆ ಥಳಿಸಿ, ಬಲವಂತವಾಗಿ ಎಂಜಲು ನೆಕ್ಕಿಸಿದ ವಿಡಿಯೋ ವೈರಲ್

ಬಿಹಾರದ ಮುಜಾಫರ್‌ಪುರದಲ್ಲಿ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಎಂಎಸ್‌ಕೆಬಿ ಶಾಲೆಯ ಮೈದಾನದಲ್ಲಿ ವಿದ್ಯಾರ್ಥಿಯೊಬ್ಬನನ್ನು ಅಮಾನುಷವಾಗಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೈರಲ್ ವಿಡಿಯೋದಲ್ಲಿ ಮೂರ್ನಾಲ್ಕು ಹುಡುಗರು ಇನ್ನೊಬ್ಬ ಹುಡುಗನನ್ನು ಬೆಲ್ಟ್ ಮತ್ತು ದೊಣ್ಣೆಗಳಿಂದ ಹೊಡೆಯುತ್ತಿರುವುದು ಕಂಡುಬಂದಿದೆ. ನಂತರ ಆತನಿಗೆ ಕಿವಿ ಹಿಡಿದುಕೊಂಡು ಬಸ್ಕಿ ಮಾಡುವಂತೆಯೂ ಒತ್ತಾಯಿಸುತ್ತಿದ್ದಾರೆ. ಬಳಿಕ ಆತನ ಬಳಿ ಎಂಜಲು ನೆಕ್ಕಿಸಿದ್ದಾರೆ.

ಮುಜಾಫರ್‌ಪುರದ ವಿದ್ಯಾರ್ಥಿಗೆ ಥಳಿಸಿ, ಬಲವಂತವಾಗಿ ಎಂಜಲು ನೆಕ್ಕಿಸಿದ ವಿಡಿಯೋ ವೈರಲ್
Bihar video
Follow us
ಸುಷ್ಮಾ ಚಕ್ರೆ
|

Updated on:Dec 22, 2024 | 5:47 PM

ಮುಜಾಫರ್​ನಗರ: ಬಿಹಾರದ ಕಾಲೇಜು ಕ್ಯಾಂಪಸ್‌ನಲ್ಲಿ ಮೂವರು ಪುಂಡರ ಗುಂಪೊಂದು ವ್ಯಕ್ತಿಯೊಬ್ಬನಿಗೆ ಚಿತ್ರಹಿಂಸೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಅವರು ಆ ಯುವಕನನ್ನು ಕೋಲು ಮತ್ತು ಬೆಲ್ಟ್‌ನಿಂದ ಥಳಿಸಿದ್ದಾರೆ. ಅವನ ಕಿವಿಗಳನ್ನು ಹಿಡಿದುಕೊಂಡು ಬಸ್ಕಿ ಹೊಡೆಯುವಂತೆ ಮಾಡಿದ್ದಾರೆ. ಮುಜಾಫರ್‌ಪುರದ ಎಂಎಸ್‌ಕೆಬಿ ಕಾಲೇಜಿನಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ.

ಈ ವಿಡಿಯೋ ವೈರಲ್ ಆದ ನಂತರ ಆ ಬಾಲಕನ ಕುಟುಂಬದ ಸದಸ್ಯರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಬಾಲಕನನ್ನು ಹೊಡೆಯುವ ಮೊದಲು ನೆಲದ ಮೇಲೆ ಉಗುಳಿದ ಎಂಜಲು ನೆಕ್ಕುವಂತೆ ಬಲವಂತಪಡಿಸಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ನಂತರ ಹಲ್ಲೆಯ ವಿಡಿಯೋ ಆನ್‌ಲೈನ್‌ನಲ್ಲಿ ಹರಿದಾಡಿತ್ತು. ಈ ವಿಡಿಯೋ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ನಗರದ ಬನಾರಸ್ ಬ್ಯಾಂಕ್ ಚೌಕ್ ಪ್ರದೇಶದ ಮೂವರು ಶಂಕಿತರು ಮತ್ತು ಐವರು ಅಪರಿಚಿತ ಹುಡುಗರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Viral : ಪ್ರವಾಸಿಗರ ಮುಂದೆಯೇ ಜಿಂಕೆಯನ್ನು ಬೇಟೆಯಾಡಿದ ಹುಲಿರಾಯ, ವಿಡಿಯೋ ವೈರಲ್

ಕುಟುಂಬದವರ ಹೇಳಿಕೆ ಆಧರಿಸಿ ಪೊಲೀಸರು ಎಂಟು ಬಾಲಕರನ್ನು ಆರೋಪಿಗಳೆಂದು ಹೆಸರಿಸಿದ್ದು, ತನಿಖೆ ಆರಂಭಿಸಿದ್ದಾರೆ. ಡಿಸೆಂಬರ್ 16ರಂದು ತನ್ನ ಮಗ ಮನೆಗೆಲಸದ ನಿಮಿತ್ತ ಎಂಎಸ್‌ಕೆಬಿ ಕಾಲೇಜು ಬಳಿ ಹೋಗಿದ್ದ ಎಂದು ಸಂತ್ರಸ್ತೆಯ ತಾಯಿ ಫರ್ಜಾನಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆಯ ಸಮಯದಲ್ಲಿ ತನ್ನ ಮಗನಿಗೆ ಬಸ್ಕಿ ಹೊಡೆಸಲು ಒತ್ತಾಯಿಸಲಾಯಿತು. ನಂತರ ನೆಲದ ಮೇಲೆ ಉಗುಳಿದ್ದನ್ನು ನೆಕ್ಕಲು ಒತ್ತಾಯಿಸಲಾಯಿತು ಎಂದು ತಾಯಿ ಆರೋಪಿಸಿದ್ದಾರೆ.

ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಮಗನಿಗೆ 2 ಸಾವಿರ ರೂ. ನೀಡಿದ್ದು, ಹಲ್ಲೆ ವೇಳೆ ಕದ್ದೊಯ್ದಿರುವುದಾಗಿ ಸಂತ್ರಸ್ತೆಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆ ಪ್ರಭಾರಿ ಶರತ್ ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Sun, 22 December 24

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ