ಮೈಸೂರು: ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್​​ವೇರ್​ ಇಂಜಿನಿಯರ್​​ ಆತ್ಮಹತ್ಯೆ

ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್​​ವೇರ್​ ಇಂಜಿನಿಯರ್ ಪ್ರತಾಪ್​(38) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ರೂಪಾ ನಗರದಲ್ಲಿ ನಡೆದಿದೆ.

ಮೈಸೂರು: ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್​​ವೇರ್​ ಇಂಜಿನಿಯರ್​​ ಆತ್ಮಹತ್ಯೆ
ಮೈಸೂರು ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್​​ವೇರ್​ ಇಂಜಿನಿಯರ್​​ ಆತ್ಮಹತ್ಯೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 03, 2023 | 9:02 AM

ಮೈಸೂರು: ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್​​ವೇರ್​ ಇಂಜಿನಿಯರ್(Software Engineer) ಪ್ರತಾಪ್​(38) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ರೂಪಾ ನಗರದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿ ಆಗಿದ್ದ ಪ್ರತಾಪ್, ಸಧ್ಯ​ ವರ್ಕ್ ಫ್ರಮ್​ ಹೋಮ್​​(Work From Home) ಮೂಲಕ ಕೆಲಸ ಮಾಡುತ್ತಿದ್ದರು. ಇನ್ನು 38 ವರ್ಷವಾದರೂ ಪ್ರತಾಪ್​​ಗೆ ಮದುವೆಯಾಗಿರಲಿಲ್ಲ. ಜೀವನದಲ್ಲಿ ಜಿಗುಪ್ಸೆ ಬಂದು ಟೆಕ್ಕಿ ನೇಣಿಗೆ ಶರಣಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಸಾಫ್ಟ್​​ವೇರ್​ ಇಂಜಿನಿಯರ್ ಪ್ರತಾಪ್ ತಂದೆ ಜೊತೆ ಮೈಸೂರಿನಲ್ಲಿ ವಾಸವಿದ್ದು, ಕೊರೊನಾ ಬಂದಾಗಿನಿಂದ ವರ್ಕ್ ಫ್ರಮ್​ ಹೋಮ್​ನಲ್ಲಿ ಕೆಲಸ ಮಾಡುತ್ತಿದ್ದರು. ಮತ್ತು ಇತನ ಸಹೋದರಿ ಅಮೆರಿಕದಲ್ಲಿ ನೆಲೆಸಿದ್ದಾರೆ. ಇದೀಗ ಪ್ರತಾಪ್​ ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಸೂರಿನ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನ: ಹೊಯ್ಸಳ ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ಮಹಿಳೆಯ ಜೀವ

ಬೆಂಗಳೂರು: ಪತ್ನಿ, ಮಕ್ಕಳಿಬ್ಬರಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಬೆಂಗಳೂರು: ಪತ್ನಿ, ಇಬ್ಬರು ಪುತ್ರಿಯರಿಗೆ ವಿಷವುಣಿಸಿ ಪತಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಗರದ ಕೋಣನಕುಂಟೆಯ ಠಾಣಾ ವ್ಯಾಪ್ತಿಯ ವಡ್ಡರಪಾಳ್ಯ ಮನೆಯೊಂದರಲ್ಲಿ ನಡೆದಿದೆ. ಪತ್ನಿ ವಿಜಯಾ(28), ಪುತ್ರಿಯರಾದ ನಿಶಾ(7), ದೀಕ್ಷಾ(5) ಮೃತ ದುರ್ದೈವಿಗಳು. ಪತಿ ನಾಗೇಂದ್ರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಊಟದಲ್ಲಿ ವಿಷವುಣಿಸಿ ಹತ್ಯೆ ಶಂಕೆ ವ್ಯಕ್ತವಾಗಿದೆ. ಇನ್ನು ಪತಿ ನಾಗೇಂದ್ರ ಕ್ಯಾನ್ಸರ್​ನಿಂದ ಬಳತ್ತಿದ್ದು, ಬ್ಲೇಡ್​ನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗುತ್ತಿದೆ. 2014ರಲ್ಲಿ ದಂಪತಿ ಮದುವೆಯಾಗಿದ್ದರು. ನಾಗೇಂದ್ರನಿಗೆ ವಿಪರೀತ ಕುಡಿದ ಚಟ ಇತ್ತು. ಪತ್ನಿ ವಿಜಯ ಮೆಡಿಕಲ್​ನಲ್ಲಿ ಕೆಲಸ ಮಾಡುತ್ತಿದ್ದರು. ವಿಜಯ ಆರ್ಥಿಕವಾಗಿ ಕುಟುಂಬಕ್ಕೆ ಆಧಾರವಾಗಿದ್ದರು. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಕಿಮ್ಸ್​ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆಕಸ್ಮಿಕ ಬೆಂಕಿ ತಗುಲಿ ಎರಡು ಗುಡಿಸಲುಗಳು ಸಂಪೂರ್ಣ ಭಸ್ಮ

ಚಿಕ್ಕಮಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿದ ಎರಡು ಗುಡಿಸಲುಗಳು ಸಂಪೂರ್ಣ ಭಸ್ಮವಾದ ಘಟನೆ ಕಡೂರು ತಾಲೂಕಿನ ದೊಣ್ಣೆಕೋರಳಿ ಗ್ರಾಮದ ಭೋವಿಕಾಲೋನಿಯಲ್ಲಿ ನಡೆದಿದೆ. ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಈರಬೋವಿ,ಆನಂದ್​ ಎಂಬುವವರಿಗೆ ಸೇರಿದ ಗುಡಿಸಲು ಹೊತ್ತಿ ಉರಿದಿದ್ದು, ದಾಖಲಾತಿ, ಬಟ್ಟೆ, ಪಾತ್ರೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಯಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 am, Fri, 3 March 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ