AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Love Breakup: ಪ್ರೀತಿಸಿ ಮದುವೆ ಆದ ಒಂದು ವರ್ಷಕ್ಕೆ ಕೈಕೊಟ್ಟ ಪತಿ; 16 ಮಂದಿ ವಿರುದ್ಧ ಎಫ್​ಐಆರ್

ಪ್ರೀತಿಸಿ ಮದುವೆ ಆದ ಒಂದು ವರ್ಷಕ್ಕೆ ಪತಿಮಹಾಶಯನೊಬ್ಬ ತನ್ನ ಬಾಳಸಂಗಾತಿಗೆ ಕೈಕೊಟ್ಟ ಪ್ರಕರಣ ಮೈಸೂರು ಜಿಲ್ಲೆಯ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Love Breakup: ಪ್ರೀತಿಸಿ ಮದುವೆ ಆದ ಒಂದು ವರ್ಷಕ್ಕೆ ಕೈಕೊಟ್ಟ ಪತಿ; 16 ಮಂದಿ ವಿರುದ್ಧ ಎಫ್​ಐಆರ್
ಪ್ರೀತಿಸಿ ಮದುವೆ ಆದ ಒಂದು ವರ್ಷಕ್ಕೆ ಕೈಕೊಟ್ಟ ಪತಿ; 16 ಮಂದಿ ವಿರುದ್ಧ ಎಫ್​ಐಆರ್
TV9 Web
| Updated By: Rakesh Nayak Manchi|

Updated on:Sep 24, 2022 | 7:53 AM

Share

ಮೈಸೂರು: ಪ್ರೀತಿಸಿ ಮದುವೆ (Love Marriage) ಆದ ಒಂದು ವರ್ಷಕ್ಕೆ ಪತಿಮಹಾಶಯನೊಬ್ಬ ತನ್ನ ಬಾಳಸಂಗಾತಿಗೆ ಕೈಕೊಟ್ಟ (Breakup) ಪ್ರಕರಣ ಜಿಲ್ಲೆಯ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆ ನಂತರ ಗಂಡನ ಮನೆಯವರೇ ಸಂಸಾರಕ್ಕೆ ಸಮಸ್ಯೆ ತಂದಿದ್ದಾರೆ ಎಂದು ಗಂಡ ಕೈಕೊಟ್ಟ ನಂತರ ಅತಂತ್ರಳಾಗಿರುವ ಮಹಿಳೆ ಆರೋಪಿಸಿ ಠಾಣೆ ಮೆಟ್ಟಿಲೇರಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪತಿ ಸೇರಿದಂತೆ ಒಟ್ಟು 16 ಮಂದಿ ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ.

ಚಿತ್ರದುರ್ಗದ ಅಶ್ವಿನಿ (24) ಮತ್ತು ಮೈಸೂರಿನ ಹುಣಸೂರು ತಾಲೂಕಿನ ಮರೂರು ಗ್ರಾಮದ ಅಭಿಷೇಕ್ ಪರಸ್ಪರ ಪ್ರೀತಿಸುತ್ತಿದ್ದರು. ಅದರಂತೆ ಕಳೆದ ಒಂದು ವರ್ಷದ ಹಿಂದೆ ಅಶ್ವಿನಿ ತನ್ನ ಪ್ರಿಯತಮನೊಂದಿಗೆ ಸಪ್ತಪದಿ ತುಳಿದು ಚೆನ್ನಾಗಿಯೇ ಜೀವನ ಸಾಗಿಸುತ್ತಿದ್ದರು. ಆದರೆ ಮದುವೆಯಾದ ಒಂದೇ ತಿಂಗಳಲ್ಲಿ ಅಭಿಷೇಕ್ ಮತ್ತು ಅಶ್ಚಿನಿ ನಡುವೆ ಪ್ರೀತಿ ಕಮರಿಸಿದೆ. ಸದ್ಯ ಅಭಿಷೇಕ್ ಪ್ರೀತಿಸಿ ಮದುವೆಯಾದ ಅಶ್ಚಿನಿಗೆ ಕೈಕೊಟ್ಟಿದ್ದು, ಅತಂತ್ರಳಾಗಿರುವ ಅಶ್ವಿನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಅಭಿಷೇಕ್ ಮನೆಯವರಿಂದಲೇ ಸಮಸ್ಯೆ ಎಂದು ಆರೋಪಿಸಿದ್ದಾರೆ. ಅಶ್ವಿನಿ ನೀಡಿದ ದೂರಿನ ಅನ್ವಯ  ಆಕೆಯ ಪತಿ ಅಭಿಷೇಕ್ ಸೇರಿದಂತೆ ಒಟ್ಟು 16 ಮಂದಿ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಮಾಂಗಲ್ಯ‌ಸರ ಸುಲಿಗೆ ಮಾಡಿದ್ದ ನಾಲ್ವರು ಅರೆಸ್ಟ್

ರಾಮನಗರ: ಚಿನ್ನದ ಮಾಂಗಲ್ಯ‌ಸರ ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ತಾವರೆಕೆರೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿ ಗ್ರಾಮದ ಗಂಗರಾಜು, ಮಲ್ಲಿಕಾರ್ಜುನ, ನಟರಾಜು, ವಿನಯಪ್ರಸಾದ್ ಬಂಧಿತ ಆರೋಪಿಗಳಾಗಿದ್ದಾರೆ. ಒಂಟಿಯಾಗಿ ನಡೆದುಕೊಂಡು ಬರುತ್ತಿರುವ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದರು.

ಬೆಂಗಳೂರು ದಕ್ಷಿಣ ತಾಲೂಕಿನ ಕುರುಬನಪಾಳ್ಯ ಗ್ರಾಮದ ಬಳಿ ಸೆಪ್ಟೆಂಬರ್‌ 18 ರಂದು ಆರೋಪಿಗಳು ಜಯಲಕ್ಷಮ್ಮ ಎಂಬ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಬೈಕ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆಸಿ ಮಹಿಳೆ ಕೆಳಗೆ ಬಿದ್ದ ನಂತರ 60 ಗ್ರಾಂ ‌ಮಾಂಗ್ಯಲಸರ ಕಿತ್ತುಕೊಂಡು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ತಾವರೆಕೆರೆ ಪೊಲೀಸ್ ‌ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ಬಂಧಿಸಿದ ಪೊಲೀಸರು ಮಾಂಗ್ಯಲಸರ, ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಮೋಟರ್ ಹಾಗೂ ಪಂಪ್ ಕಳ್ಳತನ

ಕೋಲಾರ: ಮೋಟರ್ ರಿವೈಂಡಿಂಗ್ ಅಂಗಡಿಗೆ ನುಗ್ಗಿದ ಕಳ್ಳರು ಮೋಟರ್ ಹಾಗೂ ಪಂಪ್ ಕದ್ದು ಪರಾರಿಯಾಗಿರುವ ಘಟನೆ ತಾಲುಕಿನ ತೊಟ್ಲಿ ಗ್ರಾಮದಲ್ಲಿ ನಡೆದಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾರಾಯಣಸ್ವಾಮಿ ಎಂಬುವರಿಗೆ ಸೇರಿದ ಕಾವೇರಿ ಎಲೆಕ್ಟ್ರಿಕಲ್ಸ್ ಅಂಗಡಿಯಲ್ಲಿ ಈ ಕಳ್ಳತನ ಪ್ರಕರಣ ನಡೆದಿದ್ದು, ಸುಮಾರು 4.5 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:38 am, Sat, 24 September 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್