AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮಹಿಳಾ ಜಿಮ್ ಟ್ರೈನರ್‌ ಬಳಿ ಎಂಡಿಎಂಎ ಮಾದಕ‌ ವಸ್ತು ಪತ್ತೆ; ಇಬ್ಬರು ವಶ

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನ ಸಿಬ್ಬಂದಿ ಮಹಿಳಾ ಜಿಮ್ ಟ್ರೈನರ್‌ ಓರ್ವಳಿಗೆ ಎಂಡಿಎಂಎ ಮಾದಕ‌ ವಸ್ತು ಮಾರಾಟ ಮಾಡುತ್ತಿದ್ದು, ಈ ವಿಚಾರ ತಿಳಿದ ಮೈಸೂರು ಸೆನ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೈಸೂರು: ಮಹಿಳಾ ಜಿಮ್ ಟ್ರೈನರ್‌ ಬಳಿ ಎಂಡಿಎಂಎ ಮಾದಕ‌ ವಸ್ತು ಪತ್ತೆ; ಇಬ್ಬರು ವಶ
ಸಾಂದರ್ಭಿಕ ಚಿತ್ರ
ರಾಮ್​, ಮೈಸೂರು
| Edited By: |

Updated on: Sep 09, 2023 | 9:56 AM

Share

ಮೈಸೂರು ಸೆ.09: ಮಹಿಳಾ ಜಿಮ್ ಟ್ರೈನರ್‌ ಬಳಿ ಎಂಡಿಎಂಎ (MDMA) ಮಾದಕ‌ ವಸ್ತು (Drug) ಪತ್ತೆಯಾದ ಹಿನ್ನೆಲೆಯಲ್ಲಿ ಜಿಮ್ ಟ್ರೈನರ್ ಸೇರಿದಂತೆ ಇಬ್ಬರನ್ನು ಮೈಸೂರು ಸೆನ್ ಪೊಲೀಸರು ಬಂಧಿಸಿದ್ದಾರೆ. ಜಿಮ್‌ ಟ್ರೈನರ್ ಕುಸುಮಾ ರಾಜ್ (22) ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನ ಸಿಬ್ಬಂದಿ ಅನಿಲ್ ಬೋಬ್ಡೆ ಬಂಧಿತ ಆರೋಪಿಗಳು. ಆರೋಪಿಗಳಿಂದ 16.57 ಗ್ರಾಂ ಎಂಡಿಎಂಎ ಮಾದಕ‌ ವಸ್ತು, ಡಿಯೋ, ಹೋಂಡಾ ಆ್ಯಕ್ಟೀವಾ ಮತ್ತು ಎರಡು ಮೊಬೈಲ್​​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅನಿಲ್ ಬೋಬ್ಡೆ, ಜಿಮ್​ ಟ್ರೈನರ್​ ಕುಸುಮಾ ರಾಜ್‌ ಅವರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದನು. ಇನ್ನು ಪೊಲೀಸರಿಗೆ ಮೈಸೂರಿನ ಕಾಲೇಜು ವಿದ್ಯಾರ್ಥಿಗಳಿಗೂ ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ. ಈ ಬಗ್ಗೆ ತನಿಖೆ ನಡೆಸಲು ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಸೆನ್ ಇನ್ಸಪೆಕ್ಟರ್ ಪ್ರಸನ್ನಕುಮರ್ ಸಬ್ ಇನ್ಸಪೆಕ್ಟರ್ ಅನಿಲ್ ಸಿದ್ದೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದೆ.

ಇದನ್ನೂ ಓದಿ: ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ

ಮೈಸೂರಿನಲ್ಲಿ ಇಬ್ಬರು ಸುಲಿಗೆಕೋರರ ಬಂಧನ: 10 ಪ್ರಕರಣಗಳು ಪತ್ತೆ

ಮೈಸೂರು ಪೊಲೀಸರಿಗೆ ತಲೆನೋವಾಗಿದ್ದ, 10 ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಮೈಸೂರು  ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಪಿ ಸಿದ್ದನಹುಂಡಿ ಗ್ರಾಮದ ಉಮೇಶ್ (23) ಮಂಚಳ್ಳಿಹುಂಡಿಯ ಶಿವಾನಂದ (21) ಬಂಧಿತ ಆರೋಪಿಗಳು. ಬಂಧಿತರಿಂದ ಆಟೋ ಹಾಗೂ ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರು ಜನರ ಆರೋಪಿಗಳ ತಂಡ ನಿರಂತರವಾಗಿ ಮೈಸೂರು ಗ್ರಾಮಾಂತರದಲ್ಲಿ ಕಳ್ಳತನ ಮಾಡುತ್ತಿತ್ತು. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಇವರ ವಿರುದ್ಧ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ಇನ್ನು ಉಳಿದ ನಾಲ್ವರ ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚರಣೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್