AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಸಿಡ್ ದಾಳಿಗೂ ಮುನ್ನಾ ಹೊಸ ಸಿಮ್ ಖರೀದಿಸಿದ್ದ ನಾಗೇಶ್; ಹಳೆ ಮೊಬೈಲ್​ನ ಹೊಸಕೋಟೆ ಬಳಿ ಎಸೆದಿರುವ ಆರೋಪಿ

ಮಾಗಡಿ ರಸ್ತೆಯ ಬ್ಯಾಡರಹಳ್ಳಿಯಲ್ಲಿ ಹೊಸ ಸಿಮ್ ಖರೀದಿಸಿದ್ದಾರೆ. ಆರೋಪಿ ಕಾಲ್ ಡೀಟೈಲ್ಸ್ ಹುಡುಕಾಡಿದಾಗ ಸಿಮ್ ಖರೀದಿ ಮಾಡಿರುವುದು ಪತ್ತೆಯಾಗಿದೆ.

ಆ್ಯಸಿಡ್ ದಾಳಿಗೂ ಮುನ್ನಾ ಹೊಸ ಸಿಮ್ ಖರೀದಿಸಿದ್ದ ನಾಗೇಶ್; ಹಳೆ ಮೊಬೈಲ್​ನ ಹೊಸಕೋಟೆ ಬಳಿ ಎಸೆದಿರುವ ಆರೋಪಿ
ಆರೋಪಿ ನಾಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.
TV9 Web
| Edited By: |

Updated on:May 03, 2022 | 12:21 PM

Share

ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ (Acid) ದಾಳಿ ಮಾಡಿದ್ದ ಆರೋಪಿ ನಾಗೇಶ್, ಕೃತ್ಯ ಎಸಗುವ ಮೊದಲು ಹೊಸ ಸಿಮ್ (Mobile Sim) ಖರೀದಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಗಡಿ ರಸ್ತೆಯ ಬ್ಯಾಡರಹಳ್ಳಿಯಲ್ಲಿ ಹೊಸ ಸಿಮ್ ಖರೀದಿಸಿದ್ದಾರೆ. ಆರೋಪಿ ಕಾಲ್ ಡೀಟೈಲ್ಸ್ ಹುಡುಕಾಡಿದಾಗ ಸಿಮ್ ಖರೀದಿ ಮಾಡಿರುವುದು ಪತ್ತೆಯಾಗಿದೆ. ಹಳೆಯ ಮೊಬೈಲ್​ನ ಹೊಸಕೋಟೆ ಬಳಿ ಎಸೆದು ಹೋಗಿದ್ದಾನೆ. ಪರಾರಿಯಾಗಿರುವ ನಾಗೇಶ್ ಇನ್ನು ಹೊಸ ಸಿಮ್ನ ಆಕ್ಟಿವೇಷನ್ ಮಾಡಿಕೊಂಡಿಲ್ಲ. ಈ ಎಲ್ಲಾ ಬೆಳವಣಿಗೆಯನ್ನು ಗಮನಿಸಿದಾಗ ಆರೋಪಿ ಆ್ಯಸಿಡ್ ದಾಳಿ ಬಗ್ಗೆ ಮೊದಲೇ ಪ್ಲ್ಯಾನ್ ಮಾಡಿದ್ದ ಎಂದು ತಿಳಿಯುತ್ತದೆ.

ಇನ್ನು ದಾಳಿಗೆ ಒಳಗಾಗಿದ್ದ ಸಂತ್ರಸ್ತೆಗೆ ನಿನ್ನೆಯಿಂದ (ಮೇ 2) ಚರ್ಮ ಜೋಡಣೆ ಕಾರ್ಯ ಆರಂಭವಾಗಿದೆ. ಯುವತಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ನುರಿತ ವೈದ್ಯರ ತಂಡದಿಂದ ಸುಟ್ಟ ಭಾಗಕ್ಕೆ ಚರ್ಮ ಜೋಡಣೆ ಮಾಡುತ್ತಿದ್ದಾರೆ. ಸದ್ಯ ಯುವತಿಯ ಸ್ಥಿತಿ ಸಹಜವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ.

ಮಹಿಳೆಯರ ಭಯ ಮುಕ್ತ ಕರ್ನಾಟಕ ಹೆಸರಿನಲ್ಲಿ ಬೈಕ್ ರ್ಯಾಲಿ: ರಾಯಚೂರು: ಯುವತಿಯರು ಮಹಿಳೆಯರ ಭಯ ಮುಕ್ತ ಕರ್ನಾಟಕ ಹೆಸರಿನಲ್ಲಿ ರಾಜ್ಯಾದ್ಯಂತ ಬೈಕ್ ರ್ಯಾಲಿ ಮಾಡುತ್ತಿದ್ದಾರೆ. ಸದ್ಯ ಬೈಕ್ ರ್ಯಾಲಿ ರಾಯಚೂರು ತಲುಪಿದೆ. ಆಸಿಡ್ ದಾಳಿಗೆ ಒಳಗಾಗಿರುವವರಿಗೆ ಸ್ಕಿನ್ ಡೊನೇಶನ್ ಇತರೆ ಮಹಿಳಾ ಸಮಸ್ಯೆಗಳ ಕುರಿತು ಸಂದೇಶ ಸಾರುತ್ತಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಆಸಿಡ್ ದಾಳಿ ಕೇಸ್‌ ವಿರುದ್ಧ ಕಿಡಿಕಾರಿದ್ದಾರೆ. ಟಿವಿ9ಗೆ ಹೇಳಿಕೆ ನೀಡಿದ ಕೀರ್ತಿನಿ, ಮುಂಬೈನಲ್ಲಿ ಆಸಿಡ್ ಕೇಸ್ ನೋಡುತ್ತಿದ್ದೆವು. ಈಗ ಕರ್ನಾಟಕದಲ್ಲಿ ಮತ್ತೆ ಆಗುತ್ತಿವೆ. ಆರೋಪಿಯನ್ನು ಕರೆತಂದು ನಡು ರಸ್ತೆಯಲ್ಲಿ ನಿಲ್ಲಿಸಬೇಕು. ಅವನಿಗೆ ಸೀಮೆ ಎಣ್ಣೆ ಸುರಿದು, ಬೊಬ್ಬೆಗಳು ಬರೋ ಹಾಗೆ ಮಾಡಬೇಕು. ಅವನನ್ನು ಸಾಯಿಸೋದು ಬೇಡ, ಆತನನ್ನು ಬದುಕಿಸಿ. ಆದರೆ ಆರೋಪಿಗೆ ಆ ನರಳಾಟ ಏನು ಅನ್ನೋದು ಗೊತ್ತಾಗಬೇಕು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದೆ

Published On - 9:14 am, Tue, 3 May 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ