AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಸಿಡ್ ದಾಳಿಗೂ ಮುನ್ನಾ ಹೊಸ ಸಿಮ್ ಖರೀದಿಸಿದ್ದ ನಾಗೇಶ್; ಹಳೆ ಮೊಬೈಲ್​ನ ಹೊಸಕೋಟೆ ಬಳಿ ಎಸೆದಿರುವ ಆರೋಪಿ

ಮಾಗಡಿ ರಸ್ತೆಯ ಬ್ಯಾಡರಹಳ್ಳಿಯಲ್ಲಿ ಹೊಸ ಸಿಮ್ ಖರೀದಿಸಿದ್ದಾರೆ. ಆರೋಪಿ ಕಾಲ್ ಡೀಟೈಲ್ಸ್ ಹುಡುಕಾಡಿದಾಗ ಸಿಮ್ ಖರೀದಿ ಮಾಡಿರುವುದು ಪತ್ತೆಯಾಗಿದೆ.

ಆ್ಯಸಿಡ್ ದಾಳಿಗೂ ಮುನ್ನಾ ಹೊಸ ಸಿಮ್ ಖರೀದಿಸಿದ್ದ ನಾಗೇಶ್; ಹಳೆ ಮೊಬೈಲ್​ನ ಹೊಸಕೋಟೆ ಬಳಿ ಎಸೆದಿರುವ ಆರೋಪಿ
ಆರೋಪಿ ನಾಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.
TV9 Web
| Edited By: sandhya thejappa|

Updated on:May 03, 2022 | 12:21 PM

Share

ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ (Acid) ದಾಳಿ ಮಾಡಿದ್ದ ಆರೋಪಿ ನಾಗೇಶ್, ಕೃತ್ಯ ಎಸಗುವ ಮೊದಲು ಹೊಸ ಸಿಮ್ (Mobile Sim) ಖರೀದಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಗಡಿ ರಸ್ತೆಯ ಬ್ಯಾಡರಹಳ್ಳಿಯಲ್ಲಿ ಹೊಸ ಸಿಮ್ ಖರೀದಿಸಿದ್ದಾರೆ. ಆರೋಪಿ ಕಾಲ್ ಡೀಟೈಲ್ಸ್ ಹುಡುಕಾಡಿದಾಗ ಸಿಮ್ ಖರೀದಿ ಮಾಡಿರುವುದು ಪತ್ತೆಯಾಗಿದೆ. ಹಳೆಯ ಮೊಬೈಲ್​ನ ಹೊಸಕೋಟೆ ಬಳಿ ಎಸೆದು ಹೋಗಿದ್ದಾನೆ. ಪರಾರಿಯಾಗಿರುವ ನಾಗೇಶ್ ಇನ್ನು ಹೊಸ ಸಿಮ್ನ ಆಕ್ಟಿವೇಷನ್ ಮಾಡಿಕೊಂಡಿಲ್ಲ. ಈ ಎಲ್ಲಾ ಬೆಳವಣಿಗೆಯನ್ನು ಗಮನಿಸಿದಾಗ ಆರೋಪಿ ಆ್ಯಸಿಡ್ ದಾಳಿ ಬಗ್ಗೆ ಮೊದಲೇ ಪ್ಲ್ಯಾನ್ ಮಾಡಿದ್ದ ಎಂದು ತಿಳಿಯುತ್ತದೆ.

ಇನ್ನು ದಾಳಿಗೆ ಒಳಗಾಗಿದ್ದ ಸಂತ್ರಸ್ತೆಗೆ ನಿನ್ನೆಯಿಂದ (ಮೇ 2) ಚರ್ಮ ಜೋಡಣೆ ಕಾರ್ಯ ಆರಂಭವಾಗಿದೆ. ಯುವತಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ನುರಿತ ವೈದ್ಯರ ತಂಡದಿಂದ ಸುಟ್ಟ ಭಾಗಕ್ಕೆ ಚರ್ಮ ಜೋಡಣೆ ಮಾಡುತ್ತಿದ್ದಾರೆ. ಸದ್ಯ ಯುವತಿಯ ಸ್ಥಿತಿ ಸಹಜವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ.

ಮಹಿಳೆಯರ ಭಯ ಮುಕ್ತ ಕರ್ನಾಟಕ ಹೆಸರಿನಲ್ಲಿ ಬೈಕ್ ರ್ಯಾಲಿ: ರಾಯಚೂರು: ಯುವತಿಯರು ಮಹಿಳೆಯರ ಭಯ ಮುಕ್ತ ಕರ್ನಾಟಕ ಹೆಸರಿನಲ್ಲಿ ರಾಜ್ಯಾದ್ಯಂತ ಬೈಕ್ ರ್ಯಾಲಿ ಮಾಡುತ್ತಿದ್ದಾರೆ. ಸದ್ಯ ಬೈಕ್ ರ್ಯಾಲಿ ರಾಯಚೂರು ತಲುಪಿದೆ. ಆಸಿಡ್ ದಾಳಿಗೆ ಒಳಗಾಗಿರುವವರಿಗೆ ಸ್ಕಿನ್ ಡೊನೇಶನ್ ಇತರೆ ಮಹಿಳಾ ಸಮಸ್ಯೆಗಳ ಕುರಿತು ಸಂದೇಶ ಸಾರುತ್ತಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಆಸಿಡ್ ದಾಳಿ ಕೇಸ್‌ ವಿರುದ್ಧ ಕಿಡಿಕಾರಿದ್ದಾರೆ. ಟಿವಿ9ಗೆ ಹೇಳಿಕೆ ನೀಡಿದ ಕೀರ್ತಿನಿ, ಮುಂಬೈನಲ್ಲಿ ಆಸಿಡ್ ಕೇಸ್ ನೋಡುತ್ತಿದ್ದೆವು. ಈಗ ಕರ್ನಾಟಕದಲ್ಲಿ ಮತ್ತೆ ಆಗುತ್ತಿವೆ. ಆರೋಪಿಯನ್ನು ಕರೆತಂದು ನಡು ರಸ್ತೆಯಲ್ಲಿ ನಿಲ್ಲಿಸಬೇಕು. ಅವನಿಗೆ ಸೀಮೆ ಎಣ್ಣೆ ಸುರಿದು, ಬೊಬ್ಬೆಗಳು ಬರೋ ಹಾಗೆ ಮಾಡಬೇಕು. ಅವನನ್ನು ಸಾಯಿಸೋದು ಬೇಡ, ಆತನನ್ನು ಬದುಕಿಸಿ. ಆದರೆ ಆರೋಪಿಗೆ ಆ ನರಳಾಟ ಏನು ಅನ್ನೋದು ಗೊತ್ತಾಗಬೇಕು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದೆ

Published On - 9:14 am, Tue, 3 May 22

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು