AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯಿಂದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರ

ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯು ಪರಿಚಯವಿರುವ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ನಗರದ ಜಾರಿಪಟ್ಕ ಪ್ರದೇಶದ ನಿವಾಸಿ ಭರತ್ ಗೋಸ್ವಾಮಿ (33) ಕೊಲೆ ಪ್ರಕರಣದಲ್ಲಿ 2014ರಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಇತ್ತೀಚೆಗಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯಿಂದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರ
ಜೈಲುImage Credit source: Harvard Gazette
ನಯನಾ ರಾಜೀವ್
|

Updated on: Jan 29, 2024 | 9:29 AM

Share

ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯು ಪರಿಚಯವಿರುವ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ನಗರದ ಜಾರಿಪಟ್ಕ ಪ್ರದೇಶದ ನಿವಾಸಿ ಭರತ್ ಗೋಸ್ವಾಮಿ (33) ಕೊಲೆ ಪ್ರಕರಣದಲ್ಲಿ 2014ರಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಇತ್ತೀಚೆಗಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಸ್ವಾಮಿ ಜನವರಿ 25 ರಂದು ತನಗೆ ಪರಿಚಯವಿರುವ 43 ವರ್ಷದ ಮಹಿಳೆಯ ಮನೆಗೆ ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯ 14 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಈ ವಿಚಾರ ಬಹಿರಂಗಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್ ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.

ಮಹಿಳೆಯ ದೂರಿನ ಮೇರೆಗೆ ಪೊಲೀಸರು ಗೋಸ್ವಾಮಿಯನ್ನು ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅತ್ಯಾಚಾರಕ್ಕಾಗಿ ಬಂಧಿಸಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಹಾವೇರಿ: ಬೇರೊಬ್ಬನೊಂದಿಗೆ ಸಂಪರ್ಕದಲ್ಲಿದ್ದಾಳೆ ಎಂದು ಪ್ರೀತಿಸಿದ ಯುವತಿಗೆ ಚಾಕು ಇರಿದ ಪ್ರಿಯತಮ

ಮೂರನೇ ಮಹಡಿಯಿಂದ ಪತ್ನಿಯನ್ನು ತಳ್ಳಿ ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ ಪತಿ ಪತ್ನಿ ನಡುವೆ ಜಗಳ ನಡೆದಿದ್ದು, ಅದು ತಾರಕಕ್ಕೇರಿ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 3ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಬಳಿಕ ಮಹಿಳೆ ಸಾವನ್ನಪ್ಪಿದ್ದು, ಆರೋಪಿ ವಿಕಾಸ್​ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ, ಪೊಲೀಸರ ಪ್ರಕಾರ ಗೋವಿಂದಪುರಂ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.

ಪಾರ್ಕಿಂಗ್ ಗುತ್ತಿಗೆದಾರರಾದ ಕುಮಾರ್ ಅವರು ಮದ್ಯದ ಅಮಲಿನಲ್ಲಿ ಮನೆಗೆ ಬಂದಿದ್ದ ಮತ್ತು 30 ರ ಹರೆಯದ ಅವರ ಪತ್ನಿ ಜತೆಗೆ ತೀವ್ರ ಜಗಳವಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಆಕೆಯನ್ನು ಮೂರನೇ ಮಹಡಿಯಿಂದ ಎಸೆದ ನಂತರ, ಆತನೇ ಪತ್ನಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದನು, ಅಲ್ಲಿ ವೈದ್ಯರು ಆಕೆ ಸತ್ತಿದ್ದಾಳೆ ಎಂದು ಹೇಳಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ