AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ಮ್ಯಾನೇಜರ್ ಮನೆಯಲ್ಲಿ ಡ್ರಗ್ಸ್ ಪತ್ತೆ, ಆಕೆ ನಾಪತ್ತೆ!

ಸುಪ್ರಸಿದ್ಧ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಮನೆಯಿಂದ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್​ಸಿಬಿ) ಅಧಿಕಾರಿಗಳು ಡ್ರಗ್ಸ್ ವಶಪಡಿಸಿಕೊಂಡಿದ್ದು, ನಾಪತ್ತೆಯಾಗಿರುವ ಆಕೆಗೆ ತಮ್ಮೆದುರು ಹಾಜರಾಗುವಂತೆ ನೊಟೀಸು ಜಾರಿ ಮಾಡಿದ್ದಾರೆ. ಕರಿಷ್ಮಾ ಮನೆಯಲ್ಲಿರದ ಕಾರಣ ಮನೆಬಾಗಿಲಿಗೆ ನೊಟೀಸನ್ನು ಅಂಟಿಸಲಾಗಿದೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಆಕೆಯ ಮನೆಯಲ್ಲಿ ಕೆಲ ಬಗೆಯ ಡ್ರಗ್ಸ್ ಅಲ್ಪ ಪ್ರಮಾಣದಲ್ಲಿ ದೊರೆತಿವೆ. ಎನ್​ಸಿಬಿ, ನೊಟೀಸಿನ ಜೊತೆಗೆ ಸಮನ್ಸ್ ಕೂಡ ಜಾರಿಮಾಡಿದೆ. ಕೆಲ ಬಂಧಿತ ಡ್ರಗ್ ಪೆಡ್ಲರ್​ಗಳು ವಿಚಾರಣೆಯ ವೇಲೆ ಕರಿಷ್ಮಾಳ […]

ದೀಪಿಕಾ ಪಡುಕೋಣೆ ಮ್ಯಾನೇಜರ್ ಮನೆಯಲ್ಲಿ ಡ್ರಗ್ಸ್ ಪತ್ತೆ, ಆಕೆ ನಾಪತ್ತೆ!
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 27, 2020 | 9:31 PM

Share

ಸುಪ್ರಸಿದ್ಧ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಮನೆಯಿಂದ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್​ಸಿಬಿ) ಅಧಿಕಾರಿಗಳು ಡ್ರಗ್ಸ್ ವಶಪಡಿಸಿಕೊಂಡಿದ್ದು, ನಾಪತ್ತೆಯಾಗಿರುವ ಆಕೆಗೆ ತಮ್ಮೆದುರು ಹಾಜರಾಗುವಂತೆ ನೊಟೀಸು ಜಾರಿ ಮಾಡಿದ್ದಾರೆ.

ಕರಿಷ್ಮಾ ಮನೆಯಲ್ಲಿರದ ಕಾರಣ ಮನೆಬಾಗಿಲಿಗೆ ನೊಟೀಸನ್ನು ಅಂಟಿಸಲಾಗಿದೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಆಕೆಯ ಮನೆಯಲ್ಲಿ ಕೆಲ ಬಗೆಯ ಡ್ರಗ್ಸ್ ಅಲ್ಪ ಪ್ರಮಾಣದಲ್ಲಿ ದೊರೆತಿವೆ. ಎನ್​ಸಿಬಿ, ನೊಟೀಸಿನ ಜೊತೆಗೆ ಸಮನ್ಸ್ ಕೂಡ ಜಾರಿಮಾಡಿದೆ.

ಕೆಲ ಬಂಧಿತ ಡ್ರಗ್ ಪೆಡ್ಲರ್​ಗಳು ವಿಚಾರಣೆಯ ವೇಲೆ ಕರಿಷ್ಮಾಳ ಹೆಸರನ್ನು ಉಲ್ಲೇಖಿಸಿದ್ದರಿಂದ ಎನ್​ಸಿಬಿ ಆಕೆಯ ಮನೆ ಮೇಲೆ ದಾಳಿ ನಡೆಸಿತು. ಸಂಸ್ಥೆಯು ಈಗಾಗಲೇ ಆಕೆಯ ವಿಚಾರಣೆಯನ್ನು ಒಮ್ಮೆ ನಡೆಸಿದೆ. ಸಂಸ್ಥೆಯ ಮೂಲಗಳ ಪ್ರಕಾರ ಕರಿಷ್ಮಾ, ದೀಪಿಕಾ ಪಡುಕೋಣೆಯೊಂದಿಗೆ ವಾಟ್ಸ್ಯಾಪ್​ನಲ್ಲಿ ಚ್ಯಾಟ್ ಮಾಡುವಾಗ ಡ್ರಗ್ಸ್ ಬಗ್ಗೆ ಉಲ್ಲೇಖಿಸಿದ್ದಾಳೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ನಂತರ ಬಾಲಿವುಡ್ ಜೊತೆ ಡ್ರಗ್ಸ್ ನಂಟು ಹೊರಬಿದ್ದಿದೆ.

ಎನ್​ಸಿಬಿ ಅಧಿಕಾರಿಗಳು ಒಮ್ಮೆ ದೀಪಿಕಾರ ವಿಚಾರಣೆ ಕೂಡ ನಡೆಸಿದ್ದಾರೆ. ಆಕೆಯಲ್ಲದೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಅವರನ್ನೂ ಪ್ರಶ್ನಿಸಲಾಗಿದೆ.

2017ರಲ್ಲಿ ಕರಿಷ್ಮಾ ಮತ್ತು ದೀಪಿಕಾ ನಡುವೆ ನಡೆದಿರುವ ಚ್ಯಾಟ್​ಗಳಲ್ಲಿ ಮಾಲ್, ವೀಡ್, ಹ್ಯಾಷ್, ಡೂಬ್ ಮೊದಲಾದ ಪದಗಳ ಬಳಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್