AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ಮ್ಯಾನೇಜರ್ ಮನೆಯಲ್ಲಿ ಡ್ರಗ್ಸ್ ಪತ್ತೆ, ಆಕೆ ನಾಪತ್ತೆ!

ಸುಪ್ರಸಿದ್ಧ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಮನೆಯಿಂದ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್​ಸಿಬಿ) ಅಧಿಕಾರಿಗಳು ಡ್ರಗ್ಸ್ ವಶಪಡಿಸಿಕೊಂಡಿದ್ದು, ನಾಪತ್ತೆಯಾಗಿರುವ ಆಕೆಗೆ ತಮ್ಮೆದುರು ಹಾಜರಾಗುವಂತೆ ನೊಟೀಸು ಜಾರಿ ಮಾಡಿದ್ದಾರೆ. ಕರಿಷ್ಮಾ ಮನೆಯಲ್ಲಿರದ ಕಾರಣ ಮನೆಬಾಗಿಲಿಗೆ ನೊಟೀಸನ್ನು ಅಂಟಿಸಲಾಗಿದೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಆಕೆಯ ಮನೆಯಲ್ಲಿ ಕೆಲ ಬಗೆಯ ಡ್ರಗ್ಸ್ ಅಲ್ಪ ಪ್ರಮಾಣದಲ್ಲಿ ದೊರೆತಿವೆ. ಎನ್​ಸಿಬಿ, ನೊಟೀಸಿನ ಜೊತೆಗೆ ಸಮನ್ಸ್ ಕೂಡ ಜಾರಿಮಾಡಿದೆ. ಕೆಲ ಬಂಧಿತ ಡ್ರಗ್ ಪೆಡ್ಲರ್​ಗಳು ವಿಚಾರಣೆಯ ವೇಲೆ ಕರಿಷ್ಮಾಳ […]

ದೀಪಿಕಾ ಪಡುಕೋಣೆ ಮ್ಯಾನೇಜರ್ ಮನೆಯಲ್ಲಿ ಡ್ರಗ್ಸ್ ಪತ್ತೆ, ಆಕೆ ನಾಪತ್ತೆ!
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 27, 2020 | 9:31 PM

Share

ಸುಪ್ರಸಿದ್ಧ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಮನೆಯಿಂದ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್​ಸಿಬಿ) ಅಧಿಕಾರಿಗಳು ಡ್ರಗ್ಸ್ ವಶಪಡಿಸಿಕೊಂಡಿದ್ದು, ನಾಪತ್ತೆಯಾಗಿರುವ ಆಕೆಗೆ ತಮ್ಮೆದುರು ಹಾಜರಾಗುವಂತೆ ನೊಟೀಸು ಜಾರಿ ಮಾಡಿದ್ದಾರೆ.

ಕರಿಷ್ಮಾ ಮನೆಯಲ್ಲಿರದ ಕಾರಣ ಮನೆಬಾಗಿಲಿಗೆ ನೊಟೀಸನ್ನು ಅಂಟಿಸಲಾಗಿದೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಆಕೆಯ ಮನೆಯಲ್ಲಿ ಕೆಲ ಬಗೆಯ ಡ್ರಗ್ಸ್ ಅಲ್ಪ ಪ್ರಮಾಣದಲ್ಲಿ ದೊರೆತಿವೆ. ಎನ್​ಸಿಬಿ, ನೊಟೀಸಿನ ಜೊತೆಗೆ ಸಮನ್ಸ್ ಕೂಡ ಜಾರಿಮಾಡಿದೆ.

ಕೆಲ ಬಂಧಿತ ಡ್ರಗ್ ಪೆಡ್ಲರ್​ಗಳು ವಿಚಾರಣೆಯ ವೇಲೆ ಕರಿಷ್ಮಾಳ ಹೆಸರನ್ನು ಉಲ್ಲೇಖಿಸಿದ್ದರಿಂದ ಎನ್​ಸಿಬಿ ಆಕೆಯ ಮನೆ ಮೇಲೆ ದಾಳಿ ನಡೆಸಿತು. ಸಂಸ್ಥೆಯು ಈಗಾಗಲೇ ಆಕೆಯ ವಿಚಾರಣೆಯನ್ನು ಒಮ್ಮೆ ನಡೆಸಿದೆ. ಸಂಸ್ಥೆಯ ಮೂಲಗಳ ಪ್ರಕಾರ ಕರಿಷ್ಮಾ, ದೀಪಿಕಾ ಪಡುಕೋಣೆಯೊಂದಿಗೆ ವಾಟ್ಸ್ಯಾಪ್​ನಲ್ಲಿ ಚ್ಯಾಟ್ ಮಾಡುವಾಗ ಡ್ರಗ್ಸ್ ಬಗ್ಗೆ ಉಲ್ಲೇಖಿಸಿದ್ದಾಳೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ನಂತರ ಬಾಲಿವುಡ್ ಜೊತೆ ಡ್ರಗ್ಸ್ ನಂಟು ಹೊರಬಿದ್ದಿದೆ.

ಎನ್​ಸಿಬಿ ಅಧಿಕಾರಿಗಳು ಒಮ್ಮೆ ದೀಪಿಕಾರ ವಿಚಾರಣೆ ಕೂಡ ನಡೆಸಿದ್ದಾರೆ. ಆಕೆಯಲ್ಲದೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಅವರನ್ನೂ ಪ್ರಶ್ನಿಸಲಾಗಿದೆ.

2017ರಲ್ಲಿ ಕರಿಷ್ಮಾ ಮತ್ತು ದೀಪಿಕಾ ನಡುವೆ ನಡೆದಿರುವ ಚ್ಯಾಟ್​ಗಳಲ್ಲಿ ಮಾಲ್, ವೀಡ್, ಹ್ಯಾಷ್, ಡೂಬ್ ಮೊದಲಾದ ಪದಗಳ ಬಳಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್