ಪಿಟ್ ಗುಂಡಿ ವಿಚಾರಕ್ಕೆ ಜಗಳ: ಪಕ್ಕದ ಮನೆಯವನಿಂದ ಯುವಕನಿಗೆ ಚಾಕು ಇರಿತ

ನೆಲಮಂಗಲ: ಪಿಟ್ ಗುಂಡಿ ತೆಗೆಯೋ ವಿಚಾರದಲ್ಲಿ ಗಲಾಟೆಯಾಗಿ, ಯುವಕನಿಗೆ ಪಕ್ಕದ ಮನೆಯಾತ ಚಾಕು ಇರಿದಿರುವ ಘಟನೆ ಹೆಸರಘಟ್ಟ ರಸ್ತೆಯ ಗಣಪತಿ ನಗರದಲ್ಲಿ ನಡೆದಿದೆ. ಪ್ರದೀಪ್​(22) ಚಾಕು ಇರಿತಕ್ಕೊಳಗಾದ ಯುವಕ. ಗಣಪತಿ ನಗರದಲ್ಲಿ ಮನೆ ನಿರ್ಮಾಣ ಮಾಡಿ ಪಿಟ್ ಗುಂಡಿ ತೆಗೆಯೋ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ತಾರಕ್ಕಕೇರಿ ನೆರೆಮನೆಯಾತ ಪ್ರದೀಪ್​ಗೆ ಚಾಕು ಇರಿದಿದ್ದಾನೆ. ಜ.26ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ […]

ಪಿಟ್ ಗುಂಡಿ ವಿಚಾರಕ್ಕೆ ಜಗಳ: ಪಕ್ಕದ ಮನೆಯವನಿಂದ ಯುವಕನಿಗೆ ಚಾಕು ಇರಿತ
ಸಾಧು ಶ್ರೀನಾಥ್​

Updated on: Jan 30, 2020 | 11:14 AM

ನೆಲಮಂಗಲ: ಪಿಟ್ ಗುಂಡಿ ತೆಗೆಯೋ ವಿಚಾರದಲ್ಲಿ ಗಲಾಟೆಯಾಗಿ, ಯುವಕನಿಗೆ ಪಕ್ಕದ ಮನೆಯಾತ ಚಾಕು ಇರಿದಿರುವ ಘಟನೆ ಹೆಸರಘಟ್ಟ ರಸ್ತೆಯ ಗಣಪತಿ ನಗರದಲ್ಲಿ ನಡೆದಿದೆ. ಪ್ರದೀಪ್​(22) ಚಾಕು ಇರಿತಕ್ಕೊಳಗಾದ ಯುವಕ.

ಗಣಪತಿ ನಗರದಲ್ಲಿ ಮನೆ ನಿರ್ಮಾಣ ಮಾಡಿ ಪಿಟ್ ಗುಂಡಿ ತೆಗೆಯೋ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ತಾರಕ್ಕಕೇರಿ ನೆರೆಮನೆಯಾತ ಪ್ರದೀಪ್​ಗೆ ಚಾಕು ಇರಿದಿದ್ದಾನೆ. ಜ.26ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿ ನಾರಾಯಣಸ್ವಾಮಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


Published On - 11:12 am, Thu, 30 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us