AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಓರ್ವ ವ್ಯಕ್ತಿ ಸಜೀವ ದಹನ

ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವಂತ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಸದ್ಯ ನೆಲಮಂಗಲ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಓರ್ವ ವ್ಯಕ್ತಿ ಸಜೀವ ದಹನ
ಹೊತ್ತಿ ಉರಿದ ಕಾರು
ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 26, 2023 | 4:44 PM

Share

ನೆಲಮಂಗಲ, ಡಿಸೆಂಬರ್​ 26: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ (fire) ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವಂತ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಘಟನೆಯಿಂದ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್​​ ಉಂಟಾಗಿತ್ತು. ಸದ್ಯ ನೆಲಮಂಗಲ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಟೋವ್ ಸ್ಪೋಟಗೊಂಡು ಪಕ್ಕದಲ್ಲೇ ನಿಂತಿದ್ದ ಲಾರಿಗೆ ಬೆಂಕಿ: ಚಾಲಕನಿಗೆ ಗಾಯ

ವಿಜಯಪುರ: ಸ್ಟೋವ್ ಸ್ಪೋಟಗೊಂಡು ಪಕ್ಕದಲ್ಲೇ ನಿಂತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡಿರುವಂತಹ ಘಟನೆ ನಿಡಗುಂದಿ ತಾಲೂಕಿನ ಉಣ್ಣಿಬಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕನ ಕೈ, ಕಾಲು ಮತ್ತಿತರ ಭಾಗಕ್ಕೆ ಗಾಯಗಳಾಗಿವೆ. ತಮಿಳುನಾಡು ಮೂಲದ ಲಾರಿ ನಿಲ್ಲಿಸಿ ಚಾಲಕ ಅಡುಗೆ ಮಾಡುತ್ತಿರುವಾಗ ಸ್ಟೋವ್ ಸ್ಪೋಟಗೊಂಡ ಬೆಂಕಿ ಹೊತ್ತಿಕೊಂಡಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಯುವಕನನ್ನು ಬರ್ಬರವಾಗಿ ಕೊಲೆಗೈದು, ಶವ ಸುಟ್ಟ ಆರೋಪಿಗಳ ಬಂಧನ

ಕೇರಳದಿಂದ ಸೊಲ್ಲಾಪುರಕ್ಕೆ ತಮಿಳುನಾಡು ಮೂಲದ ಲಾರಿ ಹೊರಟಿತ್ತು. ತಡವಾಗಿ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿ

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾರೆಹಳ್ಳಿಯಲ್ಲಿ ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿ ಆಗಿರುವಂತಹ ಘಟನೆ ನಡೆದಿದೆ. ನಿನ್ನೆ ರಾತ್ರಿ ದೇಗುಲಕ್ಕೆ ಬೆಂಕಿ‌ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅರ್ಚಕರು ಪೂಜೆಗೆ ತೆರಳಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಬೆಂಕಿಯಿಟ್ಟ ದುಷ್ಕರ್ಮಿಗಳ ಬಂಧನಕ್ಕೆ ಭಕ್ತರು ಆಗ್ರಹಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ದಂಪತಿ ಆತ್ಯಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ದಂಪತಿ ಆತ್ಯಹತ್ಯೆ ಮಾಡಿಕೊಂಡಿರುವಂತಹ ಘಟನೆ  ನಗರದ ಅಡ್ಲಿಮನೆ ರಸ್ತೆಯ ಚಿಕ್ಕಟ್ಟೆ ಕೆರೆಯಲ್ಲಿ ನಡೆದಿದೆ. ಪತಿ ರಿಜ್ವಾನ್​​(31), ಪತ್ನಿ ಸಮ್ರಿನ್​​​ ಭಾನು(25) ಮೃತರಯ. ಮೃತ ದಂಪತಿ ಹಾಸನದ ಇಲಾಹಿ ನಗರದ ನಿವಾಸಿಗಳು.

ಇದನ್ನೂ ಓದಿ: ತುಮಕೂರು: ಜಮೀನು ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

ನಿನ್ನೆ ಸಂಜೆ ಪರಸ್ಪರ ಜಗಳವಾಡಿದ್ದ ಸಮ್ರಿನ್​​​, ರಿಜ್ವಾನ್ ದಂಪತಿ ಇಂದು ಬೆಳಗ್ಗೆ ಚಿಕ್ಕಟ್ಟೆ ಕೆರೆಗೆ ಹಾರಿ ದಂಪತಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ದಂಪತಿ ಶವ ಹೊರತೆಗೆದಿದ್ದಾರೆ. ಪೆನ್ಷನ್​​​​ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ