AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರು ಪೊಲೀಸ್ ಬಲೆಗೆ

ಆರೋಪಿಗಳಿಂದ 2 ಕೆಜಿ ಗಾಂಜಾ, ಎರಡು ಬೈಕ್ ಹಾಗೂ ಚಾಕುಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆ ಪ್ರದೇಶದ ಮನೆ ಮೇಲೆ ದಾಳಿ ನಡೆಸಿದಾಗ ನಿಷೇಧಿತ ಡ್ರಗ್ಸ್ ಪತ್ತೆಯಾಗಿವೆ.

ನೆಲಮಂಗಲ: ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರು ಪೊಲೀಸ್ ಬಲೆಗೆ
ನೆಲಮಂಗಲ: ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರು ಪೊಲೀಸ್ ಬಲೆಗೆ
TV9 Web
| Edited By: |

Updated on: Dec 28, 2023 | 10:29 AM

Share

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷಾಚರಣೆ (New Year) ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಸುತ್ತಮುತ್ತ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿ ನಾಲ್ವರು ಡ್ರಗ್ಸ್ ಪೆಡ್ಲರ್​ಗಳನ್ನು (Drug Peddlers) ಬಂಧಿಸಿದ್ದಾರೆ. ಆರೋಪಿಗಳು ಡಿ.31ರಂದು ವಿವಿಧೆಡೆ ಡ್ರಗ್ಸ್ ಸರಬರಾಜು ಮಾಡಲು ಅಪಾರ ಪ್ರಮಾಣದ ಆರ್ಡರ್ ಪಡೆದಿದ್ದರು.

ಬಂಧಿತರನ್ನು ಗಂಗೊಂಡನಹಳ್ಳಿ ಅನಿಲ್ (21), ಅಂದ್ರಹಳ್ಳಿ ಕಾರ್ತಿಕ್ (18), ನವೀನ್ (20) ಮತ್ತು ದೊಂಬರಹಳ್ಳಿ ಮಂಜುನಾಥ್ (19) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 2 ಕೆಜಿ ಗಾಂಜಾ, ಎರಡು ಬೈಕ್ ಹಾಗೂ ಚಾಕುಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆ ಪ್ರದೇಶದ ಮನೆ ಮೇಲೆ ದಾಳಿ ನಡೆಸಿದಾಗ ನಿಷೇಧಿತ ಡ್ರಗ್ಸ್ ಪತ್ತೆಯಾಗಿವೆ.

ನಾಲ್ವರು ಆರೋಪಿಗಳು ಹೊಸ ವರ್ಷದ ಮುನ್ನಾದಿನದಂದು ಗ್ರಾಹಕರಿಗೆ ಡ್ರಗ್ಸ್ ಸರಬರಾಜು ಮಾಡಲು ಭಾರಿ ಮೊತ್ತದ ಆರ್ಡರ್ ತೆಗೆದುಕೊಂಡಿರುವುದು ಆರಂಭಿಕ ವಿಚಾರಣೆಯಲ್ಲಿ ಪೊಲೀಸರಿಗೆ ಗೊತ್ತಾಗಿದೆ. ಆರೋಪಿಗಳು ಹೋಟೆಲ್‌ಗಳು, ಢಾಬಾಗಳು, ಲಾಡ್ಜ್‌ಗಳು ಮತ್ತು ಟ್ರಕ್ ಪಾರ್ಕಿಂಗ್ ಪ್ರದೇಶಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ಬೈಕ್ ವ್ಹೀಲಿಂಗ್, ದರೋಡೆ ಮುಂತಾದ ಹಲವು ಪ್ರಕರಣಗಳಲ್ಲಿ ಶಾಮೀಲಾಗಿದ್ದರು. ಆರೋಪಿಗಳ ಜಾಲ ಮತ್ತು ಮಾದಕವಸ್ತು ಸಂಗ್ರಹದ ಮೂಲವನ್ನು ಗುರುತಿಸಲು ಪೊಲೀಸರು ಆರೋಪಿಗಳ ಮೊಬೈಲ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಶೀಘ್ರ ಹಣ ಗಳಿಸಲು ಹಾಗೂ ಐಷಾರಾಮಿ ಜೀವನ ನಡೆಸಲು ಮಾದಕ ವಸ್ತು ಮಾರಾಟ ಮಾಡುತ್ತಿದ್ದರು ಎಂದು ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ನಾಲ್ವರನ್ನು ಮದುವೆಯಾಗಿ ವಂಚಿಸಿದ ಮಹಿಳೆ, ಪ್ರಕರಣ ದಾಖಲು

ಈ ತಿಂಗಳ ಆರಂಭದಲ್ಲಿ ಬೆಂಗಳೂರು ಪೊಲೀಸರು ವ್ಯಾಪಾರಿ ವೀಸಾದ ಮೇಲೆ ದೇಶಕ್ಕೆ ಬಂದಿದ್ದ ಆಫ್ರಿಕನ್ ಪ್ರಜೆಯೊಬ್ಬರಿಂದ ಭಾರಿ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ