Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರು ಪೊಲೀಸ್ ಬಲೆಗೆ

ಆರೋಪಿಗಳಿಂದ 2 ಕೆಜಿ ಗಾಂಜಾ, ಎರಡು ಬೈಕ್ ಹಾಗೂ ಚಾಕುಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆ ಪ್ರದೇಶದ ಮನೆ ಮೇಲೆ ದಾಳಿ ನಡೆಸಿದಾಗ ನಿಷೇಧಿತ ಡ್ರಗ್ಸ್ ಪತ್ತೆಯಾಗಿವೆ.

ನೆಲಮಂಗಲ: ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರು ಪೊಲೀಸ್ ಬಲೆಗೆ
ನೆಲಮಂಗಲ: ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರು ಪೊಲೀಸ್ ಬಲೆಗೆ
Follow us
TV9 Web
| Updated By: Ganapathi Sharma

Updated on: Dec 28, 2023 | 10:29 AM

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷಾಚರಣೆ (New Year) ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಸುತ್ತಮುತ್ತ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿ ನಾಲ್ವರು ಡ್ರಗ್ಸ್ ಪೆಡ್ಲರ್​ಗಳನ್ನು (Drug Peddlers) ಬಂಧಿಸಿದ್ದಾರೆ. ಆರೋಪಿಗಳು ಡಿ.31ರಂದು ವಿವಿಧೆಡೆ ಡ್ರಗ್ಸ್ ಸರಬರಾಜು ಮಾಡಲು ಅಪಾರ ಪ್ರಮಾಣದ ಆರ್ಡರ್ ಪಡೆದಿದ್ದರು.

ಬಂಧಿತರನ್ನು ಗಂಗೊಂಡನಹಳ್ಳಿ ಅನಿಲ್ (21), ಅಂದ್ರಹಳ್ಳಿ ಕಾರ್ತಿಕ್ (18), ನವೀನ್ (20) ಮತ್ತು ದೊಂಬರಹಳ್ಳಿ ಮಂಜುನಾಥ್ (19) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 2 ಕೆಜಿ ಗಾಂಜಾ, ಎರಡು ಬೈಕ್ ಹಾಗೂ ಚಾಕುಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆ ಪ್ರದೇಶದ ಮನೆ ಮೇಲೆ ದಾಳಿ ನಡೆಸಿದಾಗ ನಿಷೇಧಿತ ಡ್ರಗ್ಸ್ ಪತ್ತೆಯಾಗಿವೆ.

ನಾಲ್ವರು ಆರೋಪಿಗಳು ಹೊಸ ವರ್ಷದ ಮುನ್ನಾದಿನದಂದು ಗ್ರಾಹಕರಿಗೆ ಡ್ರಗ್ಸ್ ಸರಬರಾಜು ಮಾಡಲು ಭಾರಿ ಮೊತ್ತದ ಆರ್ಡರ್ ತೆಗೆದುಕೊಂಡಿರುವುದು ಆರಂಭಿಕ ವಿಚಾರಣೆಯಲ್ಲಿ ಪೊಲೀಸರಿಗೆ ಗೊತ್ತಾಗಿದೆ. ಆರೋಪಿಗಳು ಹೋಟೆಲ್‌ಗಳು, ಢಾಬಾಗಳು, ಲಾಡ್ಜ್‌ಗಳು ಮತ್ತು ಟ್ರಕ್ ಪಾರ್ಕಿಂಗ್ ಪ್ರದೇಶಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ಬೈಕ್ ವ್ಹೀಲಿಂಗ್, ದರೋಡೆ ಮುಂತಾದ ಹಲವು ಪ್ರಕರಣಗಳಲ್ಲಿ ಶಾಮೀಲಾಗಿದ್ದರು. ಆರೋಪಿಗಳ ಜಾಲ ಮತ್ತು ಮಾದಕವಸ್ತು ಸಂಗ್ರಹದ ಮೂಲವನ್ನು ಗುರುತಿಸಲು ಪೊಲೀಸರು ಆರೋಪಿಗಳ ಮೊಬೈಲ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಶೀಘ್ರ ಹಣ ಗಳಿಸಲು ಹಾಗೂ ಐಷಾರಾಮಿ ಜೀವನ ನಡೆಸಲು ಮಾದಕ ವಸ್ತು ಮಾರಾಟ ಮಾಡುತ್ತಿದ್ದರು ಎಂದು ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ನಾಲ್ವರನ್ನು ಮದುವೆಯಾಗಿ ವಂಚಿಸಿದ ಮಹಿಳೆ, ಪ್ರಕರಣ ದಾಖಲು

ಈ ತಿಂಗಳ ಆರಂಭದಲ್ಲಿ ಬೆಂಗಳೂರು ಪೊಲೀಸರು ವ್ಯಾಪಾರಿ ವೀಸಾದ ಮೇಲೆ ದೇಶಕ್ಕೆ ಬಂದಿದ್ದ ಆಫ್ರಿಕನ್ ಪ್ರಜೆಯೊಬ್ಬರಿಂದ ಭಾರಿ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು