AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಫೇಸ್​ಬುಕ್​ ಲೈವ್​ನಲ್ಲಿ ವಿಷ ಸೇವಿಸಿದ ವ್ಯಕ್ತಿ

ನಾವು ಆಶ್ರಯ ಕೊಟ್ಟ ವ್ಯಕ್ತಿಗಳು ಕೊಲೆ ಮಾಡಿ ಬಂದಿದ್ದಾರೆಂದು ನಮಗೆ ತಿಳಿದಿರಲಿಲ್ಲ. ಹಾಗಾಗಿ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದೆವು ಎಂದು ಅಮಿತ್ ಅವರು ದೂರಿದ್ದಾರೆ.

ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಫೇಸ್​ಬುಕ್​ ಲೈವ್​ನಲ್ಲಿ ವಿಷ ಸೇವಿಸಿದ ವ್ಯಕ್ತಿ
ಅಮಿತ್
TV9 Web
| Updated By: guruganesh bhat|

Updated on: Sep 22, 2021 | 3:54 PM

Share

ನೆಲಮಂಗಲ: ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕೊಟ್ಟಿದ್ದಾರೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಫೇಸ್‌ಬುಕ್ ಲೈವ್‌ನಲ್ಲಿ ಅಮಿತ್ ಎಂಬ ವ್ಯಕ್ತಿ ವಿಷ ಸೇವಿಸಿದ ಘಟನೆ ನಡೆದಿದೆ. ನೆಲಮಂಗಲ ಟೌನ್ ಠಾಣೆ ಇನ್ಸ್‌ಪೆಕ್ಟರ್ ಕುಮಾರ್, ಕಾನ್ಸ್‌ಟೇಬಲ್‌ಗಳಾದ ಬಸವರಾಜು, ಕೇಶವ್ ಮತ್ತು ಗಂಗಣ್ಣ ಸೇರಿ ಹಲವರ ವಿರುದ್ಧ ಅಮಿತ್ ಕಿರುಕುಳ ನೀಡಿರುವ ಆರೋಪ ಮಾಡಿದ್ದಾರೆ.

ನಾವು ಆಶ್ರಯ ಕೊಟ್ಟ ವ್ಯಕ್ತಿಗಳು ಕೊಲೆ ಮಾಡಿ ಬಂದಿದ್ದಾರೆಂದು ನಮಗೆ ತಿಳಿದಿರಲಿಲ್ಲ. ಹಾಗಾಗಿ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದೆವು.  ಇದನ್ನೇ ಕಾರಣವಾಗಿಟ್ಟುಕೊಂಡು ನೀವು ನಮ್ಮ ತಂದೆ ತಾಯಿಗೆ ಹಿಂಸೆಕೊಡುತ್ತಿದ್ದೀರಿ. ಹಾಗಾಗಿ ವಿಷ ಸೇವಿಸುತ್ತಿರುವೆ ಎಂದು ಫೇಸ್​ಬುಕ್ ಲೈವ್​ನಲ್ಲಿ ಆರೋಪಿ ವಿಷ ಸೇವಿಸಿದ್ದಾರೆ. ಅಮಿತ್ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಸೆಪ್ಟೆಂಬರ್ 19ರಂದು ನೆಲಮಂಗಲ ಟೌನ್ ಸುಭಾಷ್ ನಗರದಲ್ಲಿ ಕೊಲೆಯೊಂದು ನಡೆದಿತ್ತು. ರೇವಂತ್ ಎಂಬಾತನನ್ನು ಕೊಲೆಗೈದಿದ್ದ ಆರೋಪಿಗಳಾದ ಧರಣೇಶ್, ದರ್ಶನ್ ಮತ್ತು ಪ್ರವೀಣ್ ಅವರುಗಳಿಗೆ ಅಮಿತ್ ಅವರು ಆಶ್ರಯ ನೀಡಿದ್ದರು. ಆದರೆ ಅಮಿತ್ ಅವರಿಗೆ ತಾವು ಆಶ್ರಯ ನೀಡಿದ ವ್ಯಕ್ತಿಗಳು ಕೊಲೆ ಆರೋಪಿಗಳು ಎಂದು ತಿಳಿದಿರಲಿಲ್ಲ. ತದ ನಂತರ ಪೊಲೀಸರು ಆಶ್ರಯ ನೀಡಿದ ಕಾರಣ ನೀಡಿ ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಅಮಿತ್ ಆರೋಪಿಸಿ ವಿಷ ಕುಡಿದಿದ್ದಾರೆ.

ಇದನ್ನೂ ಓದಿ: 

Facebook Ray-Ban Stories: ಸ್ಮಾರ್ಟ್​ ಗ್ಲಾಸ್ ಪರಿಚಯಿಸಿದ ಫೇಸ್​ಬುಕ್: ಇನ್ಮುಂದೆ ಕನ್ನಡಕದಲ್ಲೇ ಎಲ್ಲಾ!

ಜೀವನ್​ ಬೀಮಾ ನಗರ: ಪಾನಮತ್ತ ಯುವತಿ ಮೇಲೆ ಕ್ಯಾಬ್​ ಚಾಲಕನಿಂದ ಅತ್ಯಾಚಾರ ಆರೋಪ; ಕ್ಯಾಬ್ ಚಾಲಕನ ಬಂಧನ

(Nelamangala man who drank poison on Facebook Live accused of molesting police)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ