AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಅತ್ತೆ ಸಾವು

ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅತ್ತೆ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಸಂಬಂಧಿಕರ ಮನೆಯಿಂದ ಹಿಂದಿರುಗುವಾಗ ಅಪಘಡ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   

ನೆಲಮಂಗಲ: ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಅತ್ತೆ ಸಾವು
ಸಾಂದರ್ಭಿಕ ಚಿತ್ರ
Follow us
ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 26, 2024 | 8:27 PM

ನೆಲಮಂಗಲ, ಫೆಬ್ರವರಿ 26: ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ (collided) ಹೊಡೆದ ಪರಿಣಾಮ ಅತ್ತೆ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ನೆಲಮಂಗಲ ಟೌನ್ ನಿವಾಸಿ 64 ವರ್ಷದ ಬೀರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೊಸೆ ಮಮತಾಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಸಂಬಂಧಿಕರ ಮನೆಯಿಂದ ಹಿಂದಿರುಗುವಾಗ ಅಪಘಡ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಒಂದೇ ಸ್ಥಳದಲ್ಲಿ ಎರಡು ಬೈಕ್​ ಕದ್ದ ಖದೀಮರು

ನಗರದ ರೆಸ್ಟ್​​ ಹೌಸ್​​ ರಸ್ತೆ ಆರ್ಮಿ ಕಚೇರಿ ಮುಂಭಾಗ 2 ಬೈಕ್​​ಗಳನ್ನು​ ಖದೀಮರು ಕದ್ದಿರುವಂತಹ ಘಟನೆ ನಡೆದಿದೆ. ಫೆ.17ರ ಸಂಜೆ ನಿಲ್ಲಿಸಿದ್ದ 2 ದ್ವಿಚಕ್ರ ವಾಹನ ಕಳುವಾಗಿದೆ. ಅನುಪಮ್​​​ ಮತ್ತು ಆತನ ಸ್ನೇಹಿತನ ಟಿವಿಎಸ್​​​ ಜ್ಯೂಪಿಟರ್​​ 125, ಡಿಯೋ ದ್ವಿಚಕ್ರ ವಾಹನ ಕಳ್ಳತನವಾಗಿದೆ. ಬೈಕ್​ ಕಳ್ಳತನ ಮಾಡಿದ ಕಳ್ಳರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಕಬ್ಬನ್​ ಪಾರ್ಕ್​​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಾವು ಕಡಿದು ಒಂಭತ್ತು ವರ್ಷದ ಬಾಲಕ ಸಾವು

ಕೊಡಗು: ಹಾವು ಕಡಿದು ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಕೊಡಗು-ಮೈಸೂರು ಗಡಿ ಗ್ರಾಮ ಕೊಪ್ಪದಲ್ಲಿ ಸಂಭವಿಸಿದೆ. ಮೂಲತಃ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದ ಪೊನ್ನಪ್ಪ-ಪವಿತ್ರ ದಂಪತಿಯ ಪುತ್ರ ಒಂಭತ್ತು ವರ್ಷದ ದೇವಯ್ಯ ಸಾವನ್ನಪ್ಪಿದ ಬಾಲಕ. ಪವಿತ್ರ ತನ್ನಿಬ್ಬರು ಮಕ್ಕಳ ಜೊತೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ಹಳೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾರೆ.

ಇದನ್ನೂ ಓದಿ: ಅಕ್ರಮವಾಗಿ ಸಾಗಿಸ್ತಿದ್ದ 63.5 ಲಕ್ಷ ರೂ. ಮೌಲ್ಯದ ಡೈಮಂಡ್​, ವಿದೇಶಿ ಕರೆನ್ಸಿ ಜಪ್ತಿ, ಓರ್ವನ ಬಂಧನ

ಪವಿತ್ರ ಅವರ ಮೊದಲ ಪುತ್ರ 9 ವರ್ಷದ ಬಾಲಕ ದೇವಯ್ಯ ನಿನ್ನೆ ಮಧ್ಯ ರಾತ್ರಿ ಸುಮಾರು 1 ಗಂಟೆ ವೇಳೆಗೆ ತಾಯಿಯನ್ನ ಕರೆದು ಅಳುತ್ತಾ ಕೈ ತುಂಬಾ ಉರಿಯುತ್ತಿದೆ ಅಮ್ಮಾ ಅಂತದಿದ್ದಾನೆ. ತಾಯಿ ಮೊಬೈಲ್ ಟಾರ್ಚ್​ ಬಿಟ್ಟು ನೋಡಿದಾಗ ಬೆಡ್​ ಮೇಲಿನಿಂದ ಒಂದು ಹಾವು ಇಳಿದು ಓಡಿದೆ. ತಕ್ಷಣವೇ ಕೈ ಪರಿಶೀಲಿಸಿದಾಗ ಮಣಿಗಂಟಿನಲ್ಲಿ ಹಾವು ಕಚ್ಚದ ಗುರುತು ಕಂಡಿದೆ. ತಕ್ಷಣವೇ ತಾಯಿ ಮನೆಯ ಮಾಲೀಕರಿಗೆ ವಿಷಯ ತಿಳಿಸಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಆದರೆ ಮಾರ್ಗ ಮಧ್ಯದಲ್ಲೇ ಬಾಲಕ ದೇವಯ್ಯ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ: ತುಮಕೂರಿನಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 7 ಮಹಿಳೆಯರ ಪೈಕಿ ಮೂವರು ಸಾವು

ಬಹುಷಃ ಹಾವು ಕಚ್ಚಿ ಬಹಳ ಹೊತ್ತಾದ ಮೇಲೆ ಬಾಲಕನಿಗೆ ಅರಿವಾಗಿರಬೇಕೇನೋ. ವಿಷ ದೇಹಸೇರಿ ಬಾಲಕನ ಜೀವ ತೆಗೆದಿದೆ. ವಿಚಿತ್ರ ಅಂದ್ರೆ ಈ ಮನೆಯ ಸುತ್ತ ಹಲವು ದಿನಗಳಿಂದ ಹಾವೊಂದು ಓಡಾಡುವುದನ್ನು ಸ್ಥಳೀಯರು ಮತ್ತು ಸ್ವತಃ ಈ ಮನೆಯವರೂ ಗಮನಿಸಿದ್ದಾರೆ. ಕಲೆದ ಶುಕ್ರವಾರ ಬಾಲಕನ ಸೋದರ ಮಾವ ಇಲ್ಲಿಗೆ ಆಗಮಿಸಿದ್ದಾಗ ಹಾವನ್ನು ನೋಡಿ ಅದನ್ನು ಕೊಲ್ಲುವುದು ಬೇಡ ಎಂದು ಬಿಟ್ಟಿದ್ದರಂತೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ